AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಗಾಂಜಾ ಮಾರಾಟ ಮಾಡುತ್ತಿದ್ದ 3 ಯುವಕರು ಅರೆಸ್ಟ್, ಹೊಲದಲ್ಲಿ ಗಾಂಜಾ ಬೆಳೆದಿದ್ದವ ಬಲೆಗೆ

ಹಾಸನದಲ್ಲಿ ಆರೋಪಿಗಳು ದೊಡ್ಡಹೊನ್ನೇನಹಳ್ಳಿ ರಸ್ತೆಯ ರೈಲ್ವೆ ಟ್ರ್ಯಾಕ್​ ಹಿಂಭಾಗ ಗಾಂಜಾ ಸೊಪ್ಪು ಮಾರುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿ ಗಾಂಜಾ ಸೊಪ್ಪು ಇತರೆ ವಸ್ತುಗಳನ್ನು ವಶಕ್ಕೆ ಪಡೆದರು.

ಪ್ರತ್ಯೇಕ ಘಟನೆ: ಗಾಂಜಾ ಮಾರಾಟ ಮಾಡುತ್ತಿದ್ದ 3 ಯುವಕರು ಅರೆಸ್ಟ್, ಹೊಲದಲ್ಲಿ ಗಾಂಜಾ ಬೆಳೆದಿದ್ದವ ಬಲೆಗೆ
ಗಾಂಜಾ
ಮಂಜುನಾಥ ಕೆಬಿ
| Edited By: ಆಯೇಷಾ ಬಾನು|

Updated on: Sep 15, 2023 | 1:10 PM

Share

ಹಾಸನ, ಸೆ.15: ಗಾಂಜಾ ಮಾರಾಟ(Hemp) ಮಾಡುತ್ತಿದ್ದ ಮೂವರು ಯುವಕರನ್ನು ಬಡಾವಣೆ ಪೊಲೀಸರು(Badavane Police Station) ಬಂಧಿಸಿದ್ದಾರೆ. ದುದ್ದ ಹೋಬಳಿ ಹಂಪನಹಳ್ಳಿಯ ಶಶಾಂಕ್​, ಕುವೆಂಪು ನಗರದ ಸಿ.ಸಿ.ಸಚಿನ್​, ಶಾಂತಿಗ್ರಾಮ ಹೋಬಳಿ ಹೊಂಗೆರೆ ರಸ್ತೆಯ ದಿಲೀಪ್​ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 1 ಕೆಜಿ 700 ಗ್ರಾಂ ಹಸಿ ಗಾಂಜಾ, 56 ಗ್ರಾಂ ಒಣ ಗಾಂಜಾ, 3 ಮೊಬೈಲ್, ಒಂದು ಬೈಕ್ ಜಪ್ತಿ ಮಾಡಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ದೊಡ್ಡಹೊನ್ನೇನಹಳ್ಳಿ ರಸ್ತೆಯ ರೈಲ್ವೆ ಟ್ರ್ಯಾಕ್​ ಹಿಂಭಾಗ ಗಾಂಜಾ ಸೊಪ್ಪು ಮಾರುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿ ಗಾಂಜಾ ಸೊಪ್ಪು ಇತರೆ ವಸ್ತುಗಳನ್ನು ವಶಕ್ಕೆ ಪಡೆದರು.

ತೊಗರಿ ಬೆಳೆಯಲ್ಲಿ ಗಾಂಜಾ ಬೆಳೆ

ಇನ್ನು ಮತ್ತೊಂದೆಡೆ ತೊಗರಿ ಬೆಳೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂಗಾಪುರ ಗ್ರಾಮದ ಹೊಲವೊಂದರಲ್ಲಿ ತೊಗರಿ ಬೆಳೆ ನಡುವೆ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಒಟ್ಟು 7 ಕಿಲೋ ಗಾಂಜಾ ಬೆಳೆಯನ್ನು ಅಬಕಾರಿ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ತೊಗರಿ ಬೆಳೆ ಜೊತೆ ಬೆಳೆದಿದ್ದ 48 ಸಾವಿರ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಜಪ್ತಿ ಮಾಡಲಾಗಿದೆ. ಜಮೀನಿನ ಮಾಲೀಕ ವಿನೋದ ಪಾಂಡುನನ್ನು ಅಬಕಾರಿ ಸಿಬ್ಬಂದಿ ಬಂಧಿಸಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟಿ ಚೈತ್ರಾ ಕುಂದಾಪುರ, ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು

ಮೊಬೈಲ್ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೋಲಾರ‌ ನಗರದ ಕೆಎಸ್​ಅರ್​ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಮೊಬೈಲ್ ಕದ್ದು ಪರಾರಿ ಆಗುತ್ತಿದ್ದ ಆಂಧ್ರಪ್ರದೇಶದ ನಿವಾಸಿ ಜಗದೀಶ್​ನನ್ನು ಜನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪ್ರಯಾಣಿಕರೊಬ್ಬರ ಮೊಬೈಲ್ ಕದ್ದು ಪರಾರಿಯಾಗಲು ಆರೋಪಿ ಯತ್ನಿಸಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಕೋಲಾರ‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Manjunath KB
Manjunath KB
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​