AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಪ್ರವಾಸಿಗರ ಮೇಲೆ ಜೀಪ್ ಹಾಗೂ ಪಿಕ್​ಅಪ್ ವಾಹನ ಚಾಲಕರಿಂದ ಹಲ್ಲೆ, FIR ದಾಖಲು

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪ್ರವಾಸಿತಾಣ ಪಟ್ಲಬೆಟ್ಟಕ್ಕೆ ಬೈಕ್​ನಲ್ಲಿ ಬಂದಿದ್ದ ಕೆಲ ಪ್ರವಾಸಗರ ಮೇಲೆ ಸ್ಥಳೀಯ ಜೀಪ್ ಹಾಗೂ ಪಿಕ್​ಅಪ್ ವಾಹನ ಚಾಲಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪ್ರವಾಸಿಗರು ದೂರು ದಾಖಲಿಸಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ: ಪ್ರವಾಸಿಗರ ಮೇಲೆ ಜೀಪ್ ಹಾಗೂ ಪಿಕ್​ಅಪ್ ವಾಹನ ಚಾಲಕರಿಂದ ಹಲ್ಲೆ, FIR ದಾಖಲು
ಪ್ರವಾಸಿಗರ ಮೇಲೆ ಜೀಪ್ ಹಾಗೂ ಪಿಕ್​ಅಪ್ ವಾಹನ ಚಾಲಕರಿಂದ ಹಲ್ಲೆ
ಮಂಜುನಾಥ ಕೆಬಿ
| Edited By: ಆಯೇಷಾ ಬಾನು|

Updated on: Jun 25, 2024 | 12:59 PM

Share

ಹಾಸನ, ಜೂನ್.25: ಪಟ್ಲಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ (Assault) ನಡೆದಿರುವ ಆರೋಪ ಕೇಳಿ ಬಂದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪ್ರವಾಸಿತಾಣ ಪಟ್ಲಬೆಟ್ಟ ಬಳಿ ಸ್ಥಳೀಯ ಜೀಪ್ ಹಾಗೂ ಪಿಕ್​ಅಪ್ ವಾಹನ ಚಾಲಕರು ಬೈಕ್​ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ.

ಜೂ.23ರಂದು ಕೆಲ ಪ್ರವಾಸಿಗರು ಬೈಕ್​ನಲ್ಲಿ ಪಟ್ಲಬೆಟ್ಟಕ್ಕೆ ಹೋಗಿದ್ದರು. ಪಟ್ಲಬೆಟ್ಟಕ್ಕೆ ಭೇಟಿ ನೀಡಿ ವಾಪಸ್​ ತೆರಳುವಾಗ ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಜೀಪುಗಳನ್ನು ಬಾಡಿಗೆ ಪಡೆದು ಬಾರದೇ ತಮ್ಮ ಬೈಕ್ ಗಳಲ್ಲಿ ಹೋಗಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬೈಕ್​ಗಳಲ್ಲಿ ಹೋಗಬೇಡಿ ಅಂದ್ರೂ ಯಾಕೆ ಹೋದ್ರಿ ಅಂತ ಚಾಲಕರು ಪ್ರಶ್ನೆ ಮಾಡಿದ್ದು ನಂತರ ಬೈಕ್ ಗಳಲ್ಲಿದ್ದ ಸವಾರರ ಮೇಲೆ ಜೀಪು ಚಾಲಕರು ಹಲ್ಲೆ ಮಾಡಿದ್ದಾರೆ.

ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಮೂಲದ ಪ್ರವಾಸಿಗರಾದ ಭುವಿತ್ ಪೂಜಾರಿ ಎಂಬುವವರು ದೂರು ದಾಖಲಿಸಿದ್ದಾರೆ. ಗಗನ್, ಕಿರಣ್, ನಿಶಾಂತ್, ಮದನ್ ಎಂಬುವವರ ಮೇಲೆ ಯಸಳೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪ್ರವಾಸಿ ಚಟುವಟಿಕೆಗಳ ಮೇಲೆ ಇಲಾಖೆ ಸೂಕ್ತ ನಿರ್ವಹಣೆ ಮಾಡುತ್ತಿಲ್ಲ ಎಂದು ಪ್ರವಾಸಿಗರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವಾದ: ಮಕ್ಕಳಿಲ್ಲದ ಮೊದಲ ಪತ್ನಿಯನ್ನು ಸಾಯಿಸಿದ ಗಂಡ ಮತ್ತು 2ನೇ ಹೆಂಡತಿ ಮಗ

ಸ್ನೂಕರ್ ಆಡುತ್ತಿದ್ದಾಗಲೇ ಉಸಿರು ಚೆಲ್ಲಿದ ಯುವಕ

ಸ್ನೂಕರ್ ಆಡುತ್ತಿದ್ದಾಗಲೇ ಯುವಕನೊಬ್ಬ ಪ್ರಾಣ ಬಿಟ್ಟಿದ್ದಾನೆ. ಧಾರವಾಡ ರಜತಗಿರಿಯಲ್ಲಿ ಘಟನೆ ನಡೆದಿದ್ದು, ಸುಶಾಂತ ಮಲ್ಲಿಗೇರಿ ಎಂಬಾತ ಮೃತಪಟ್ಟಿದ್ದಾನೆ. ಮೂಲತ ಬಾಗಲಕೋಟೆಯ ಸುಶಾಂತ, ಧಾರವಾಡದಲ್ಲಿ ನೆಲೆಸಿದ್ದ. ನಿತ್ಯ ಸ್ನೂಕರ್ ಆಡುವ ಅಭ್ಯಾಸ ಹೊಂದಿದ್ದ. ಅದ್ರಂತೆ ನಿನ್ನೆ ಎಂದಿನಂತೆ ಗೆಳೆಯರೊಂದಿಗೆ ಸ್ನೂಕರ್ ಆಡುತ್ತಿದ್ದಾಗ ಎಕ್​ದಂ ಕುಸಿದು ಬಿದ್ದು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆತನ ಕೊನೆಯ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಪ್ರಿಯತಮೆಯ ಖಾಸಗಿ ಅಂಗಕ್ಕೆ ಇರಿದು ಹತ್ಯೆ

ಪ್ರಿಯತಮೆಯನ್ನ ಕೊಂದು ಬಳಿಕ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೊಸಕೋಟೆ ನಗರದ ಕಾಲೇಜು ರಸ್ತೆಯಲ್ಲಿ ಘಟನೆ‌ ನಡೆದಿದ್ದು, ಆಂಧ್ರ ಮೂಲದ ಹೇಮಾವತಿ ಎಂಬಾಕೆ ಮೃತಪಟ್ಟಿದ್ದಾಳೆ. ಚಿಂತಾಮಣಿ ಮೂಲದ ವೇಣು ಎಂಬಾತ ಆಕೆಯನ್ನ ಬಾಡಿಗೆ ಮನೆಲಿಟ್ಟು ಆಗಾಗ ಬಂದು ಹೋಗ್ತಿದ್ದ. ಆದ್ರೆ ನಿನ್ನೆ ಮುಂಜಾನೆ ಆಕೆಯ ಮರ್ಮಾಂಗ ಸೇರಿ ಮೂರ್ನಾಲ್ಕು ಕಡೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತನ್ನೂರಿಗೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​