AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾನ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನ: ನಕಲಿ ಸ್ವಾಮೀಜಿಗಳಿಗೆ ಹಿಗ್ಗಾಮುಗ್ಗಾ ಗೂಸಾ!

ಜೇನುಕಲ್​ ಸಿದ್ದೇಶ್ವರ ಕ್ಷೇತ್ರಕ್ಕೆ ದಾನ ಕೋರುವ ನೆಪದಲ್ಲಿ ಒಂಟಿ ಮನೆಗೆ ನುಗ್ಗಿ ಸುಲಿಗೆಗೆ ಯತ್ನಿಸಿದ್ದ ನಕಲಿ ಸ್ವಾಮೀಜಿಗಳು ಸಿಕ್ಕಿಬಿದ್ದಿದ್ದಾರೆ. ಕಾವಿ, ರುದ್ರಾಕ್ಷಿ, ವಿಭೂತಿ, ಲಿಂಗದ ಕಾಯಿ ಧರಿಸಿ ಸ್ವಾಮೀಜಿ ವೇಷದಲ್ಲಿ ಮನೆಗೆ ನುಗ್ಗಿದ್ದರು. ಆದ್ರೆ, ಮಹಿಳೆಯ ಚಾಣಾಕ್ಷತನದಿಂದ ಕಳ್ಳ ಸ್ವಾಮಿಗಳು ತಗ್ಲಾಕೊಂಡು ಗೂಸಾ ತಿಂದಿದ್ದಾರೆ.

ದಾನ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನ: ನಕಲಿ ಸ್ವಾಮೀಜಿಗಳಿಗೆ ಹಿಗ್ಗಾಮುಗ್ಗಾ ಗೂಸಾ!
Fake Swamiji
ಮಂಜುನಾಥ ಕೆಬಿ
| Edited By: |

Updated on:Jan 06, 2025 | 8:12 PM

Share

ಹಾಸನ (ಜನವರಿ.6): ದಾನ ಕೇಳುವ ನೆಪದಲ್ಲಿ ಕಳ್ಳ ಸ್ವಾಮೀಜಿಗಳು ಒಂಟಿ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳ ಸ್ವಾಮೀಜಿಗಳು, ಮತ್ತವರ ಸಹಚರರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾವು ಜೇನುಕಲ್ ಸಿದ್ದೇಶ್ವರಸ್ವಾಮಿ ಮಠದವರಾಗಿದ್ದು, ಹೆಚ್ಚಿನ ಧನ ಸಹಾಯ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡು ತಕ್ಷಣವೆ ಎಚ್ಚೆತ್ತ ಮಹಿಳೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು. ಸ್ಥಳೀಯರು ಬರುತ್ತಿದ್ದಂತೆ ಕಳ್ಳ ಸ್ವಾಮೀಜಿಗಳ ಗ್ಯಾಂಗ್ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇಬ್ಬರು ನಕಲಿ ಸ್ವಾಮೀಜಿ ಸೇರಿ ಐವರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಹಣದ ಸಮೇತ ಗ್ರಾಮಸ್ಥರು ಐವರನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಕಳೆದ ವರ್ಷ ನವೆಂಬರ್ 3 ರಂದು ಇದೇ ಗ್ಯಾಂಗ್ ಕಲ್ಲುಂಡಿ ಗ್ರಾಮಕ್ಕೆ ಭಿಕ್ಷೆ ಕೇಳುವ ನೆಪದಲ್ಲಿ ಬಂದಿದ್ದರು. ಆಗ ಪಿಸ್ತೂಲ್ ತೋರಿಸಿ ಪರಾರಿಯಾಗಿದ್ದರು. ಇದೀಗ ನಗದು ಸಹಿತ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಬಾಣಾವಾರ ಪೊಲೀಸರಿಗೊಪ್ಪಿಸಿದ್ದಾರೆ. ವಶಕ್ಕೆ ಪಡೆದಿರುವ ಪೊಲೀಸರು ಐವರನ್ನು ಎಲ್ಲ ಆಯಾಮಗಳಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಎಷ್ಟು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಯಾರಾರ ಮನೆಯಲ್ಲಿ ಕಳ್ಳತನ, ಭಿಕ್ಷೆ ನೆಪದಲ್ಲಿ ದರೋಡೆ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 8:10 pm, Mon, 6 January 25

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು