AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನರಾಯಪಟ್ಟಣ ತಹಶೀಲ್ದಾರ್ ಹುದ್ದೆಗೆ ಇಬ್ಬರು ಕೆಎಎಸ್ ಅಧಿಕಾರಿಗಳು ಒಂದೇ ಕುರ್ಚಿಯಲ್ಲಿ ಕುಳಿತು ಬಿಟ್ಟರು! ಸಿಬ್ಬಂದಿಗೆ ಅಯೋಮಯ

ಕೋರ್ಟ್ ತೀರ್ಪು ಮತ್ತು ಸರ್ಕಾರದ ಆದೇಶ ಈ ಎರಡರ ನಡುವೆ ಯಾವುದರ ಪಾಲನೆ ಮಾಡಬೇಕು ಎಂಬುದರ ಬಗ್ಗೆ ಜಿಲ್ಲಾಡಳಿತ ಗೊಂದಲಕ್ಕೆ ಸಿಲುಕಿದೆ. ಈ ಹಿಂದೆ, ಗೋವಿಂದರಾಜ್ ಅವರು 16 ತಿಂಗಳು ಚನ್ನರಾಯಪಟ್ಟಣ ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಗೋವಿಂದರಾಜ್​​ ರನ್ನ ಕೋಲಾರದ ಅಕ್ರಮ ಭೂಮಿ ತನಿಖೆ ಇಂಡೀಕರಣ ತನಿಖಾಧಿಕಾರಿಯಾಗಿ ಸರ್ಕಾರ ನಿಯೋಜನೆ ಮಾಡಿದೆ.

ಚನ್ನರಾಯಪಟ್ಟಣ ತಹಶೀಲ್ದಾರ್ ಹುದ್ದೆಗೆ ಇಬ್ಬರು ಕೆಎಎಸ್ ಅಧಿಕಾರಿಗಳು ಒಂದೇ ಕುರ್ಚಿಯಲ್ಲಿ ಕುಳಿತು ಬಿಟ್ಟರು! ಸಿಬ್ಬಂದಿಗೆ ಅಯೋಮಯ
ಇಬ್ಬರು ಕೆಎಎಸ್ ಅಧಿಕಾರಿಗಳು ಒಂದೇ ಕುರ್ಚಿಯಲ್ಲಿ ಕುಳಿತರು!
ಮಂಜುನಾಥ ಕೆಬಿ
| Updated By: ಸಾಧು ಶ್ರೀನಾಥ್​|

Updated on: Sep 14, 2023 | 8:53 AM

Share

ಹಾಸನ, ಸೆಙ್ಟೆಂಬರ್​​ 14: ಒಂದು ತಹಸಿಲ್ದಾರ್ ಹುದ್ದೆಗಾಗಿ ಇಬ್ಬರು ಕೆಎಎಸ್ ಅಧಿಕಾರಿಗಳ (KAS officers) ನಡುವೆ ಜಟಾಪಟಿ ಜೋರಾಗಿ ನಡೆದಿದೆ. ಒಂದೇ ಕುರ್ಚಿಯಲ್ಲಿ ಕುಳಿತು ಇಬ್ಬರೂ ಆಡಳಿತ ನಡೆಸುತ್ತಿರುವುದರಿಂದ ಕೆಳಹಂತದ ಅಧಿಕಾರಿಗಳು ಇದೀಗ ಗೊಂದಲದಲ್ಲಿ ಸಿಲುಕಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಕಛೇರಿಯಲ್ಲಿ (Channarayapatna Tehsildar) ಈ ಕುರ್ಚಿ ಫೈಟ್ ನಡೆದಿದ್ದು ಗೋವಿಂದರಾಜ್ ಮತ್ತು ಗೀತಾ ನಡುವೆ ಜಟಾಪಟಿ ನಡೆದಿದೆ. ಎರಡು ತಿಂಗಳ ಹಿಂದೆ ಗೋವಿಂದ್ ರಾಜ್ ರನ್ನ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಗೀತಾರನ್ನ ಸರ್ಕಾರ ನಿಯೋಜನೆ ಮಾಡಿತ್ತು. ಆದರೆ ಎರಡು ವರ್ಷದ ಮೊದಲೇ ವರ್ಗಾವಣೆ ಮಾಡಲಾಗಿದೆ ಎಂದು ಕೆಎಟಿ ಮೊರೆ ಹೊಗಿದ್ದ ಗೋವಿಂದ ರಾಜ್ ಅವರು ಎರಡು ದಿನದ ಹಿಂದೆ ತಮ್ಮ ವರ್ಗಾವಣೆಯ ಆದೇಶಕ್ಕೆ ಕೆಎಟಿಯಿಂದ ತಡೆತಂದಿದ್ದರು.

ಕೆಎಟಿ ತೀರ್ಪಿನಂತೆ ಗೋವಿಂದರಾಜ್ ನಿನ್ನೆ ಬುಧವಾರ ಸಂಜೆ ಕಛೇರಿಗೆ ಹಾಜರಾದರು. ಆದರೆ ಸಂಜೆವರೆಗೂ ಗೀತಾ ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಣೆ ಮಾಡಿದರು. ಸಂಜೆಯಾಗುತ್ತಲೇ ಗೋವಿಂದರಾಜ್ ಕಛೇರಿಗೆ ಬಂದು ಅಧಿಕಾರಿಗಳ ಸಭೆ ನಡೆಸಿದರು. ಆಗ ಜನ ಹಾಗೂ ತಾಲ್ಲೂಕು ಆಡಳಿತ ಅಸಲಿಗೆ ಚನ್ನರಾಯಪಟ್ಟಣ ತಹಶಿಲ್ದಾರ್ ಯಾರು ಎಂದು ಗೊಂದಲಕ್ಕೆ ಸಿಲುಕಿದರು.

ಇದನ್ನೂ ಓದಿ:   ನಕಲಿ ನಾಯಕರುಗಳ ಮಧ್ಯೆ ಒಮ್ಮೆ ಅಸಲಿ ಸಚಿವರನ್ನೇ ಭೇಟಿ ಮಾಡಿಸಿದ್ದ ಮಿಸ್​​ ಚೈತ್ರಾ ಕುಂದಾಪುರ

ಈ ಮಧ್ಯೆ, ಗೋವಿಂದರಾಜ್ ಅವರು ಕೋರ್ಟ್ ತೀರ್ಪಿನ ಬಳಿಕ ತಹಶಿಲ್ದಾರ್ ಗೀತಾ ನಾಮಫಲಕವನ್ನು ತೆರವು ಮಾಡಿಸಿದ್ದರು. ಆದರೆ ಗೋವಿಂದರಾಜ್ ನಾಮಫಲಕ ತೆರವು ಮಾಡಿ ತಾವೂ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಗೀತಾ. ಒಟ್ಟಿನಲ್ಲಿ ಇಬ್ಬರು ಉನ್ನತಾಧಿಕಾರಿಗಳ ಕುರ್ಚಿ ಫೈಟ್ ಕುತೂಹಲ ಮೂಡಿಸಿದೆ.

ಕೋರ್ಟ್ ತೀರ್ಪು ಮತ್ತು ಸರ್ಕಾರದ ಆದೇಶ ಈ ಎರಡರ ನಡುವೆ ಯಾವುದರ ಪಾಲನೆ ಮಾಡಬೇಕು ಎಂಬುದರ ಬಗ್ಗೆ ಜಿಲ್ಲಾಡಳಿತ ಗೊಂದಲಕ್ಕೆ ಸಿಲುಕಿದೆ. ಈ ಹಿಂದೆ, ಗೋವಿಂದರಾಜ್ ಅವರು 16 ತಿಂಗಳು ಚನ್ನರಾಯಪಟ್ಟಣ ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಗೋವಿಂದರಾಜ್​​ ರನ್ನ ಕೋಲಾರದ ಅಕ್ರಮ ಭೂಮಿ ತನಿಖೆ ಇಂಡೀಕರಣ ತನಿಖಾಧಿಕಾರಿಯಾಗಿ ಸರ್ಕಾರ ನಿಯೋಜನೆ ಮಾಡಿದೆ. ಆದರೆ ತಹಶಿಲ್ದಾರ್ ಗೋವಿಂದರಾಜ್ ಅವರು ಸರ್ಕಾರದ ನಡೆ ಪ್ರಶ್ನಿಸಿ ಆಡಳಿತಾತ್ಮಕ ನ್ಯಾಯಾಧಿಕಾರಣದ ಮೊರೆ ಹೋಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ