AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಕೆಲಸ ಅರಸಿ ಹಾಸನ ಜಿಲ್ಲೆಯ ಗ್ರಾಮವೊಂದಕ್ಕೆ ಉತ್ತರ ಪ್ರದೇಶದಿಂದ ಬಂದಿದ್ದ ಇಬ್ಬರು ಯುವಕರು ಮಲಗಿದ್ದ ಸ್ಥಳದಲ್ಲೇ ನಿಗೂಢವಾಗಿ ಮೃತಪಟ್ಟಿದ್ದಾರೆ.

ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು
ಸಾಂದರ್ಭಿಕ ಚಿತ್ರ
ಮಂಜುನಾಥ ಕೆಬಿ
| Edited By: |

Updated on: Jul 15, 2023 | 1:24 PM

Share

ಹಾಸನ: ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಹಾಸನ(Hassan) ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ನವಾಬ್​(24), ರಾಮಸಂಜೀವನ್​(30) ಮೃತದೇಹಗಳು ಕೊಠಡಿಯಲ್ಲಿ ಪತ್ತೆಯಾಗಿವೆ. ಉತ್ತರ ಪ್ರದೇಶದ(Uttar Pradesh) ನಯನ್​ಪುರ ಗ್ರಾಮದ ನಿವಾಸಿಗಳಾಗಿರುವ ಈ ಇಬ್ಬರು ಯುವಕರು ಕೆಲಸ ಅರಸಿ ಹಾಸನ ತಾಲೂಕಿನ ಹನುಮಂತಪುರ ಗ್ರಾಮಕ್ಕೆ ಬಂದಿದ್ದರು. ಆದ್ರೆ, ಜ್ವರ ಬಂದಿದ್ದರಿಂದ ಔಷಧಿ ಮಲಗಿದ್ದವರು ಮೇಲೆ ಎದ್ದಿಲ್ಲ. ಮಲಗಿದ್ದ ಸ್ಥಳದಲ್ಲೇ ಅನುಮಾಸ್ಪದವಾಗಿ ಮೃತಪಟ್ಟಿದ್ದಾರೆ.

ಹನುಮಂತಪುರ ಗ್ರಾಮದ ಮಹೇಶ್ ಎಂಬವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ವಾಸವಿದ್ದರು. ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲುತ್ತಿದ್ದರಿಂದ ರಜೆ ಮಾಡಿದ್ದರು. ಅಲ್ಲದೇ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದ್ರೆ, ಬುಧವಾರ ರಾತ್ರಿ ಊಟ ಮುಗಿಸಿ ಔಷಧಿ ಸೇವಿಸಿ ಮಲಗಿದ್ದವರು ಮೇಲೆ ಎದ್ದಿಲ್ಲ.ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಒಂದು ದಿನ ಕಳೆದರೂ ರೂಮ್​ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಮನೆ ಮಾಲೀಕ, ಬಾಗಿಲು ಒಡೆದ ನೋಡಿದಾಗ ಮಲಗಿದ್ದ ಜಾಗದಲ್ಲಿಯೇ ಯುವಕರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ವಿಷಯ ತಿಳಿಸಿದು ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಇನ್ನು ಈ ಇಬ್ಬರು ಯುವಕರ ಸಾವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?