Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?

ಇಂದು ಐದು ಮಂದಿ ಕೋವಿಡ್​ನಿಂದಾಗಿ ಮೃತಪಟ್ಟಿದ್ದರೆ, ಇತರೆ ಕಾರಣಗಳಿಂದ ಆರು ಜನರು ಸಾವಿಗೀಡಾಗಿದ್ದಾರೆ. ಅಲ್ಲಿಗೆ 11 ಜನರ ಅಂತ್ಯಕ್ರಿಯೆ ನೆರವೇರಿಸೋದೆ ಕಷ್ಟ ಎಂದು ಚಿತಾಗಾರ ಸಿಬ್ಬಂದಿ ಚಿಂತಾಕ್ರಾಂತರಾಗಿದ್ದಾರೆ. ಇಂದೇ ಅಂತ್ಯಕ್ರಿಯೆ ನೆರವೇರಿಸಿ ಕೊಡಿ ಎಂದು ಮೃತರ ಸಂಬಂಧಿಕರು ಗೋಗರೆಯುತ್ತಿದ್ದಾರೆ. ಹಾಸನದಲ್ಲಿ ಕೊರೊನಾ ಕಾಟ ಕೈಮೀರಿದ ಪರಿಸ್ಥಿತಿಯಿಂದಾಗಿ ಶವ ಸಂಸ್ಕಾರಕ್ಕೂ ಜನರು ಪರಿತಪಿಸುತ್ತಿದ್ದಾರೆ.

ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?
ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?
Follow us
ಸಾಧು ಶ್ರೀನಾಥ್​
|

Updated on: Apr 26, 2021 | 12:57 PM

ಹಾಸನ- ಈ ದರಿದ್ರ ಕೊರೊನಾ ಮಾರಿ ಬೆಂಗಳೂರನ್ನೂ ದಾಟಿ ಜಿಲ್ಲೆಗಳತ್ತ ತನ್ನ ಕಬಂಧಬಾಹುಗಳನ್ನು ಚಾಚುತ್ತಿದೆ. ಕೊರನಾದಿಂದ ಸಂಕಷ್ಟಗಳು ಎಲ್ಲೆ ಮೀರುತ್ತಿವೆ. ರಾಜಧಾನಿಯಲ್ಲಷ್ಟೇ ಕಾಡತೊಡಗಿದ್ದ ಕೊರೊನಾ ಸೋಂಕಿತರ ಮೃತದೇಹ ಅಂತ್ಯಸಂಸ್ಕಾರ ಸಂಕಷ್ಟ ಈಗ ಹಾಸನಕ್ಕೂ ತಲುಪಿದೆ. ಹಾಸನದಲ್ಲಿಯೂ ಕೊರೊನಾ ಪೀಡಿತರ ಮೃತದೇಹ ಅಂತ್ಯಸಂಸ್ಕಾರದ ನಡುವೆ ಸಹಜವಾಗಿ ಸಾವಿಗೀಡಾದವರ ಅಂತ್ಯಕ್ರಿಯೆ ಕಷ್ಟ ಶುರುವಾಗಿದೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿರೋ ಚಿತಾಗಾರದಲ್ಲಿ ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ.

ಕೋವಿಡ್ ಮರಣ ಹೆಚ್ಚಾದ ಈ ಸಮಯದಲ್ಲಿ ಸಹಜವಾಗಿ ಸಾವಿಗೀಡಾದವರ ಅಂತ್ಯಕ್ರಿಯೆ ಕಷ್ಟ ಕಷ್ಟವಾಗಿದೆ. ಅಂತಹ ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಲು ಸಂಬಂಧಿಕರ ಪರದಾಡುತ್ತಿದ್ದಾರೆ. ಅಂತ್ಯಸಂಸ್ಕಾರ ಮಾಡುವ ಚಿತಾಗಾರದ ಸಿಬ್ಬಂದಿಯನ್ನ ಸಂಬಂಧಿಕರು ಅಂಗಲಾಚುತ್ತಿದ್ದಾರೆ. ಹಾಸನದ ಬಿಟ್ಟಗೌಡನಹಳ್ಳಿಯಲ್ಲಿರೋ ಚಿತಾಗಾರದಲ್ಲಿ ಒಂದು ಬಾರಿಗೆ ಐವರನ್ನ ದಹನ ಮಾಡಲು ಮಾತ್ರ ಸಾಧ್ಯವಾಗುತ್ತದೆ.

ಆದ್ರೆ ಇಂದು ಐದು ಮಂದಿ ಕೋವಿಡ್​ನಿಂದಾಗಿ ಮೃತಪಟ್ಟಿದ್ದರೆ, ಇತರೆ ಕಾರಣಗಳಿಂದ ಆರು ಜನರು ಸಾವಿಗೀಡಾಗಿದ್ದಾರೆ. ಅಲ್ಲಿಗೆ 11 ಜನರ ಅಂತ್ಯಕ್ರಿಯೆ ನೆರವೇರಿಸೋದೆ ಕಷ್ಟ ಎಂದು ಚಿತಾಗಾರ ಸಿಬ್ಬಂದಿ ಚಿಂತಾಕ್ರಾಂತರಾಗಿದ್ದಾರೆ. ಇಂದೇ ಅಂತ್ಯಕ್ರಿಯೆ ನೆರವೇರಿಸಿ ಕೊಡಿ ಎಂದು ಮೃತರ ಸಂಬಂಧಿಕರು ಗೋಗರೆಯುತ್ತಿದ್ದಾರೆ. ಹಾಸನದಲ್ಲಿ ಕೊರೊನಾ ಕಾಟ ಕೈಮೀರಿದ ಪರಿಸ್ಥಿತಿಯಿಂದಾಗಿ ಶವ ಸಂಸ್ಕಾರಕ್ಕೂ ಜನರು ಪರಿತಪಿಸುತ್ತಿದ್ದಾರೆ.

bittagowdanahalli villagers in hassan taluk finding difficulties in crematorium of people died of other than covid 19 2 (2)

ಹಾಸನದಲ್ಲಿ ಕೊರೊನಾ ಕಾಟ ಕೈಮೀರಿದ ಪರಿಸ್ಥಿತಿಯಿಂದಾಗಿ ಶವ ಸಂಸ್ಕಾರಕ್ಕೂ ಜನರು ಪರಿತಪಿಸುತ್ತಿದ್ದಾರೆ.

(villagers in bittagowdanahalli in hassan taluk finding difficulties in crematorium of people died of other than covid 19)

Oxygen Shortage: ಆಕ್ಸಿಜನ್ ದಿಢೀರ್ ಸ್ಥಗಿತ, ಐವರ ಸಾವು

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು