AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಹೆಚ್ಚಾದ ಮಳೆಯ ಅಬ್ಬರ: ವಿಶ್ವ ವಿಖ್ಯಾತ ವಿಂಧ್ಯಗಿರಿ ಬೆಟ್ಟದಲ್ಲಿ ಕೋಟೆ ಕುಸಿದು ಭಾರೀ ಅವಾಂತರ

ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಹಾಸನ ಜಿಲ್ಲೆಯ ವಿಶ್ವ ವಿಖ್ಯಾತ ವಿಂಧ್ಯಗಿರಿ(Vindhyagiri) ಬೆಟ್ಟದಲ್ಲಿ ಕೋಟೆ ಕುಸಿದಿದೆ.

ಹಾಸನದಲ್ಲಿ ಹೆಚ್ಚಾದ ಮಳೆಯ ಅಬ್ಬರ: ವಿಶ್ವ ವಿಖ್ಯಾತ ವಿಂಧ್ಯಗಿರಿ ಬೆಟ್ಟದಲ್ಲಿ ಕೋಟೆ ಕುಸಿದು ಭಾರೀ ಅವಾಂತರ
ವಿಂಧ್ಯಗಿರಿ ಬೆಟ್ಟದಲ್ಲಿ ಕೋಟೆ ಕುಸಿತ
TV9 Web
| Edited By: |

Updated on:Aug 03, 2022 | 5:26 PM

Share

ಹಾಸನ: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದೆ(Karnataka Rains). ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗ್ತಿದ್ದು, ಸರಣಿ ಅವಾಂತರಗಳೇ ನಡೆದಿದೆ. ಗುಡ್ಡಗಳು ಕುಸಿದು ಬೀಳುತ್ತಿವೆ. ರಸ್ತೆ, ಮನೆಗಳು, ಕೃಷಿ ಭೂಮಿ ಜಲಾವೃತವಾಗಿದೆ. ನದಿಗಳೆಲ್ಲಾ ಉಕ್ಕಿ ಹರಿಯುತ್ತಿದೆ. ಸೇತುವೆಗಳು ಮುಳುಗಿ ಹೋಗಿವೆ. ಎಲ್ಲೆಂದ್ರಲ್ಲಿ ನೀರು ನುಗ್ಗಿ ಜನರು ನರಕಯಾತನೆ ಪಡ್ತಿದ್ದಾರೆ. ಮನೆಯಿಂದ ಹೊರ ಬರೋಕೂ ಆಗದೆ ಒದ್ದಾಡ್ತಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಹಾಸನ ಜಿಲ್ಲೆಯ ವಿಶ್ವ ವಿಖ್ಯಾತ ವಿಂಧ್ಯಗಿರಿ(Vindhyagiri) ಬೆಟ್ಟದಲ್ಲಿ ಕೋಟೆ ಕುಸಿದಿದೆ.

ಶಾಂತ ಮೂರ್ತಿ ಬಾಹುಬಲಿ ಸ್ವಾಮಿ ನೆಲೆಸಿರೋ ಬೆಟ್ಟದಲ್ಲಿ ಭಾರೀ ಮಳೆಗೆ ಕೋಟೆ ಕುಸಿದಿದೆ. ಕೋಟೆ ಕುಸಿದ ಪರಿಣಾಮ ಬೆಟ್ಟದಿಂದ ಬೃಹದಾಕಾರದ ಕಲ್ಲುಗಳು ಕೆಳಗುರುಳಿ ಬಂದಿದ್ದು ಭಾರೀ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಶಾಸಕ ಬಾಲಕೃಷ್ಣ ಭೇಟಿ ನೀಡಿದ್ದಾರೆ. ಘಟನೆ ನಡೆದು ಐದಾರು ಗಂಟೆ ಕಳೆದರೂ ಸ್ಥಳಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳು ಬಂದಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುಧ್ಧ ಆಕ್ರೋಶ ವ್ಯಕ್ತವಾಗಿದೆ. ಏನಾದ್ರು ಅನಾಹುತ ಆದರೆ ಅವರೇ ಹೊಣೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಕೋಟೆಯ ಎರಡು ಕಡೆ ಕಲ್ಲುಗಳು ಕುಸಿದಿವೆ. ಇಂದು ಮತ್ತೆ ಮಳೆಯಾದೆ ಭಾರೀ ಅಪಾಯದ ಆತಂಕ ಉಂಟಾಗಿದೆ. ಕೂಡಲೆ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ.

ಇನ್ನು ಹಾಸನ-ಶ್ರವಣಬೆಳಗೊಳದ ವಿಂದ್ಯಗಿರಿಯಲ್ಲಿ ಕೋಟೆ ಕುಸಿತವಾದ ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಭೇಟಿ ನೀಡಿದ್ದಾರೆ. ಅವರ ಜೊತೆ ಸ್ಥಳೀಯ ಶಾಸಕ ಸಿ.ಎನ್.‌ಬಾಲಕೃಷ್ಣ ಕೂಡ ಸಾಥ್ ಕೊಟ್ಟಿದ್ದಾರೆ. ಶೀಘ್ರ ದುರಸ್ಥಿ ಕಾರ್ಯ ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಳೆ ಹೆಚ್ಚಾಗಿ ಹೆಚ್ಚಿನ ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ಅಪಾಯದಲ್ಲಿರುವಂತಹ ಮನೆಯವರ ಸ್ಥಳಾಂತರಕ್ಕೂ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಆರ್ ಗಿರೀಶ್, ಸಿಇಓ ಕಾಂತರಾಜ್ ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.

Published On - 3:07 pm, Wed, 3 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು