AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ, ಹಸು ಹಾವು; ಶವ ಮುಂದಿಟ್ಟು ಧರಣಿ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ (60) ಹಾಗೂ ಹಸು ಮೃತಪಟ್ಟಿದ್ದರು. ನಿನ್ನೆ ಸಂಜೆಯಿಂದ ಮೃತ ಮಹಿಳೆ ಶವ ಮೇಲೆತ್ತಲು ಬಿಡದೆ ಘಟನೆ ನಡೆದ ಸ್ಥಳದಲ್ಲೇ ಪ್ರತಿಭಟನೆ ನಡೆಸಲಾಗುತ್ತಿದೆ.

ಮಳೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ, ಹಸು ಹಾವು; ಶವ ಮುಂದಿಟ್ಟು ಧರಣಿ
ಪ್ರತಿಭಟನೆ ನಡೆಯುತ್ತಿರುವ ಸ್ಥಳ
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on:Jul 08, 2023 | 1:34 PM

ಹಾಸನ: ಹಾಸನ ಸುತ್ತಮುತ್ತ ಧಾರಕಾರ ಮಳೆ ಸುರಿದಿದೆ(Hassan Rain). ಹಳೇಬೀಡು ಮತ್ತು ಹೊಳೆನರಸೀಪುರ ಪಟ್ಟಣಗಳಲ್ಲಿ ಉತ್ತಮ ಮಳೆಯಾಗಿದ್ದು ಭಾರೀ ಮಳೆಯಿಂದ ದುರಂತವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮಹಿಳೆ ಹಾಗೂ ಹಸು ಸಾವನ್ನಪ್ಪಿದೆ(Electric Shock Death). ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಬೇಜವಾಬ್ದಾರಿ ತೋರಿರುವ ಚೆಸ್ಕಾಂ ಸಿಬ್ಬಂದಿ ಅಮಾನತು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಜುಲೈ 07) ಸಂಜೆ ಹಸು ಮೇಯಿಸಿಕೊಂಡು ಬರುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ (60) ಹಾಗೂ ಹಸು ಮೃತಪಟ್ಟಿದ್ದರು. ನಿನ್ನೆ ಸಂಜೆಯಿಂದ ಮೃತ ಮಹಿಳೆ ಶವ ಮೇಲೆತ್ತಲು ಬಿಡದೆ ಘಟನೆ ನಡೆದ ಸ್ಥಳದಲ್ಲೇ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಭೇಟಿ ನೀಡಿದ್ದು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದ್ರೆ ಪ್ರತಿಭಟನಾಕಾರರು ಶಾಸಕರ ಮನವೊಲಿಕೆಗೆ ಕ್ಯಾರೆ ಎನ್ನುತ್ತಿಲ್ಲ. ತಮ್ಮ ಬೇಡಿಕೆ ಈಡೇರಿಸುವವರೆಗೂ ಶವ ಮೇಲೆತ್ತಲು ಬಿಡಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Davanagere: ಮಲೆನಾಡ ಭಾಗದಲ್ಲಿ ಧಾರಾಕಾರ ಮಳೆ, ತುಂಗಭದ್ರೆಯಲ್ಲಿ ಹರಿಯಲಾರಂಭಿಸಿತು ನೀರು, ರೈತರು ಖುಷ್!

ಭಾರಿ ಗಾಳಿ, ಮಳೆಯಿಂದ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿತ್ತು. ಆದರೆ, ಇದನ್ನು ಯಾರೂ ಗಮನಿಸಿರಲಿಲ್ಲ. ಈ ವೇಳೆ ಹೊಲಕ್ಕೆ ಹೋಗಿ ಹಸುವನ್ನು ಮೇಯಿಸಿಕೊಂಡು ಬರುತ್ತಿದ್ದಾಗ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಗಮನಿಸದೆ ತುಳಿದಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆ ಹಾಗೂ ಹಸು ಮೃತಪಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:32 pm, Sat, 8 July 23

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ