AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುತು ಕೂಡ ಸಿಗದಂತೆ ಪತ್ತೆಯಾಗ್ತಿವೆ ಮೃತದೇಹಗಳು; ಶವಗಳ ತಾಣವಾಗ್ತಿದೆ ಮಾರನಹಳ್ಳಿ ಹೆದ್ದಾರಿ, ಏನಿದರ ರಹಸ್ಯ?

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆ ಆಗಿದ್ರು. ಮಹಿಳೆಯ ಬಲಗೈ ಮೇಲೆ ಮೂರ್ತಿ ಎಂದು ಬರೆಸಿಕೊಂಡಿರೋ ಹಚ್ಚೆ ಗುರುತು ಇತ್ತು.

ಗುರುತು ಕೂಡ ಸಿಗದಂತೆ ಪತ್ತೆಯಾಗ್ತಿವೆ ಮೃತದೇಹಗಳು; ಶವಗಳ ತಾಣವಾಗ್ತಿದೆ ಮಾರನಹಳ್ಳಿ ಹೆದ್ದಾರಿ, ಏನಿದರ ರಹಸ್ಯ?
ಗುರುತೇ ಸಿಗದಂತೆ ಪತ್ತೆಯಾಗ್ತಿವೆ ಮೃತದೇಹಗಳು; ಶವಗಳ ತಾಣವಾಗ್ತಿದೆ ಮಾರನಹಳ್ಳಿ ಹೆದ್ದಾರಿ
TV9 Web
| Updated By: ಆಯೇಷಾ ಬಾನು|

Updated on: Dec 31, 2021 | 9:07 AM

Share

ಹಾಸನ: ಅಲ್ಲಿನ ಜನ ರಾತ್ರಿ ವೇಳೆ ಓಡಾಡೋಕೆ ಭಯಪಡುತ್ತಿದ್ದಾರೆ. ಒಂಟಿಯಾಗಿ ಹೊರಗೆ ಕಾಲಿಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಯಾವಾಗ ಏನ್ ಆಗುತ್ತೋ ಅನ್ನೋ ಆತಂಕದಲ್ಲಿದ್ದಾರೆ. ಯಾಕಂದ್ರೆ ಗುರುತೇ ಸಿಗದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗುತ್ತಿದೆ.

ಅಪರಿಚಿತ ಶವ ಪತ್ತೆ.. ಜನರಿಗೆ ಆತಂಕ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆ ಆಗಿದ್ರು. ಮಹಿಳೆಯ ಬಲಗೈ ಮೇಲೆ ಮೂರ್ತಿ ಎಂದು ಬರೆಸಿಕೊಂಡಿರೋ ಹಚ್ಚೆ ಗುರುತು ಇತ್ತು. ಆದ್ರೆ, ಇಲ್ಲಿ ಶವವಾಗಿ ಪತ್ತೆಯಾದ ಮಹಿಳೆ ಯಾರು? ಯಾವ ಊರಿನವರು ಅನ್ನೋದು ಯಾರಿಗೂ ಗೊತ್ತಿಲ್ಲ. ಮೇಲ್ನೋಟಕ್ಕೆ ಯಾರೋ ಪಾಪಿಗಳು ಕೊಲೆ ಮಾಡಿ ಮೃತದೇಹ ಬಿಸಾಡಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗ್ತಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಸಾವಿನ ರಹಸ್ಯ ಬೇಧಿಸಲು ಮುಂದಾಗಿದ್ದಾರೆ. ಸಣ್ಣ ಸುಳಿವು ಸಿಕ್ಕರೇ ಸಾಕು ಸಾವಿನ ರಹಸ್ಯ ಬಯಲು ಮಾಡಲು ಖಾಕಿ ಟೀಮ್ ಪ್ರಯತ್ನ ಮಾಡ್ತಿದೆ.

ಇನ್ನು, ಕಳೆದ ಎರಡು ವರ್ಷಗಳ ಹಿಂದೆ ಯಸಳೂರು ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವೊಂದರ ರಹಸ್ಯ ವರ್ಷಗಳ ಬಳಿಕ ಬಯಲಾಗಿತ್ತು. ಅಲ್ದೆ, ಮೂರು ತಿಂಗಳ ಹಿಂದೆ ಬಿಸಿಲೆಘಾಟ್ ವ್ಯಾಪ್ತಿಯ ಹಿಜ್ಜನಹಳ್ಳಿ ಬಳಿ ಗೋಣಿ ಚೀಲವೊಂದರಲ್ಲಿ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಇದೀಗ ಮತ್ತೊಂದು ಮಹಿಳೆ ಶವ ಶಿರಾಢಿಘಾಟ್ನಲ್ಲಿ ಪತ್ತೆಯಾಗಿದ್ದು, ಸ್ಥಳೀಯರಿಗೆ ಆತಂಕ ಹೆಚ್ಚಾಗಿದೆ. ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿರೋದ್ರಿಂದ ಸ್ಥಳೀಯರು ಭಯ ಪಡುತ್ತಿದ್ದಾರೆ. ಅಲ್ದೆ, ಪ್ರವಾಸಿತಾಣ ಆಗಿರೋದ್ರಿಂದ ಪೊಲೀಸ್ ಇಲಾಖೆ ಜೊತೆಗೆ ಪ್ರವಾಸೋದ್ಯಮ ಇಲಾಖೆ ಕೂಡ ಈ ಪ್ರದೇಶಗಳಲ್ಲಿ ಅಗತ್ಯಕ್ರಮ ಕೈಗೊಳ್ಳಬೇಕು ಅಂತಾ ಸ್ಥಳೀಯರು ಆಗ್ರಹಿಸಿದ್ದಾರೆ.

ಒಟ್ನಲ್ಲಿ ಗುರುತೇ ಸಿಗದ ರೀತಿಯಲ್ಲಿ ಪತ್ತೆಯಾಗೋ ಶವಗಳು ಹಲವು ಪ್ರಶ್ನೆಗಳನ್ನ ಹುಟ್ಟು ಹಾಕೋ ಜೊತೆಗೆ ಪೊಲೀಸರ ತನಿಖೆಗೂ ದೊಡ್ಡ ಸವಾಲಾಗುತ್ತಿವೆ. ಕೊಲೆಯೋ ಆತ್ಮಹತ್ಯೆಯೋ ಅನ್ನೋ ಪ್ರಶ್ನೆ ಒಂದೆಡೆಯಾದ್ರೆ, ಮೃತಪಟ್ಟು ತಿಂಗಳುಗಳೇ ಕಳೆದರೂ ಸಣ್ಣ ಸುಳಿವು ಪತ್ತೆಯಾಗ್ತಿಲ್ಲ. ಇದ್ರಿಂದ ಜನರಿಗೆ ಯಾವಾಗ ಏನ್ ಆಗುತ್ತೋ ಅನ್ನೋ ಭೀತಿ ಎದುರಾಗಿದೆ.

ವರದಿ: ಮಂಜುನಾಥ್.ಕೆ.ಬಿ. ಟಿವಿ9. ಹಾಸನ

ಇದನ್ನೂ ಓದಿ: ಇಂಡಿಯನ್​ ರಾಕ್​ ಪ್ರಭೇದದ ಅಪರೂಪದ ಹೆಬ್ಬಾವು ಪತ್ತೆ; ವಿಡಿಯೋ ನೋಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ