AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಚ್​ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್​

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದನ್ನು ಎಸ್​ಐಟಿ ಪ್ರಶ್ನಿಸಿದ್ದು, ಇದೀಗ ಹೈಕೋರ್ಟ್​, ರೇವಣ್ಣಗೆ ಬಿಗ್ ಶಾಕ್ ಕೊಟ್ಟಿದೆ.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಚ್​ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ  ಹೈಕೋರ್ಟ್​
ಎಚ್​ಡಿ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on:Jun 02, 2024 | 1:33 PM

Share

ಹಾಸನ/ಬೆಂಗಳೂರು, (ಜೂನ್ 02): ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್​ಡಿ ರೇವಣ್ಣಗೆ (HD Revanna ) ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ PSI ಅಜಯ್​​ ಅವರು ಇಂದು ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್​ನ ನೊಟೀಸ್ ಮುಟ್ಟಿಸಿದ್ದು,ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್​ನಲ್ಲಿ ತಿಳಿಸಿದೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್​ಐಟಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್​ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ಕೆಆರ್​ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿತ್ತು. ಆದ್ರೆ, ರೇವಣ್ಣ ಅವರು ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆಬಂದಿದ್ದರು. ಆದ್ರೆ, ಇದೀಗ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್​ಗೂ ಮುನ್ನ ಎಸ್​ಐಟಿ ಮೆಗಾ ಪ್ಲಾನ್

ಇನ್ನು ಇದೇ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ, ಇದನ್ನು ಅರಿತ ಭವಾನಿ ರೇವಣ್ಣ ಅವರು ತಲೆಮರಿಸಿಕೊಂಡಿದ್ದಾರೆ.

Published On - 1:33 pm, Sun, 2 June 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ