AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಚ್​ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್​

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದನ್ನು ಎಸ್​ಐಟಿ ಪ್ರಶ್ನಿಸಿದ್ದು, ಇದೀಗ ಹೈಕೋರ್ಟ್​, ರೇವಣ್ಣಗೆ ಬಿಗ್ ಶಾಕ್ ಕೊಟ್ಟಿದೆ.

ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಎಚ್​ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ  ಹೈಕೋರ್ಟ್​
ಎಚ್​ಡಿ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on:Jun 02, 2024 | 1:33 PM

Share

ಹಾಸನ/ಬೆಂಗಳೂರು, (ಜೂನ್ 02): ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆಯಾಗಿರುವ ಶಾಸಕ ಎಚ್​ಡಿ ರೇವಣ್ಣಗೆ (HD Revanna ) ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆ PSI ಅಜಯ್​​ ಅವರು ಇಂದು ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್​ನ ನೊಟೀಸ್ ಮುಟ್ಟಿಸಿದ್ದು,ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್​ನಲ್ಲಿ ತಿಳಿಸಿದೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್​ಐಟಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್​ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಮೈಸೂರಿನ ಕೆಆರ್​ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿತ್ತು. ಆದ್ರೆ, ರೇವಣ್ಣ ಅವರು ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆಬಂದಿದ್ದರು. ಆದ್ರೆ, ಇದೀಗ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್​ಗೂ ಮುನ್ನ ಎಸ್​ಐಟಿ ಮೆಗಾ ಪ್ಲಾನ್

ಇನ್ನು ಇದೇ ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ, ಇದನ್ನು ಅರಿತ ಭವಾನಿ ರೇವಣ್ಣ ಅವರು ತಲೆಮರಿಸಿಕೊಂಡಿದ್ದಾರೆ.

Published On - 1:33 pm, Sun, 2 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ