AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

police constable: ಮಳಲಿ ದೇವಸ್ಥಾನದ ಬಳಿ ಗ್ರಾಮದ ಯುವಕನಿಗೆ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಅದನ್ನು ಬಿಡಿಸಲು ಕಾನ್ಸ್‌ಟೇಬಲ್ ಶರತ್​ ಮುಂದಾಗಿದ್ದಾರೆ. ಆ ವೇಳೆ ಅವರ ಮೇಲೆಯೂ ಹಲ್ಲೆ ಮಾಡಲಾಗಿದೆ. ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ
ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ
TV9 Web
| Edited By: |

Updated on: Jun 17, 2023 | 8:44 AM

Share

ಹಾಸನ : ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ (police constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (attack) ನಡೆಸಿರುವ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಶರತ್ ಹಲ್ಲೆಗೊಳಗಾದ ಕಾನ್ಸ್‌ಟೇಬಲ್. ಹಾಸನ ಜಿಲ್ಲೆ ಹೊಳೇನರಸೀಪುರ (Holenarasipura) ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಮೇಲೆ ಹಲ್ಲೆ ನಡೆದಿದೆ. ಜೂನ್ 15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಶರತ್ ಬಂದಿದ್ದರು. ದೇವಸ್ಥಾನದ ಬಳಿಯಿರುವ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಗ್ರಾಮದ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಕಾನ್ಸ್‌ಟೇಬಲ್ ಶರತ್ ಜಗಳ ಬಿಡಿಸಲು ಹೋಗಿದ್ದಾರೆ. ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಿಥುನ್, ಲೋಹಿತ್, ನಟರಾಜು ಹಾಗೂ ಇತರರ ಗುಂಪು ಕಾನ್ಸ್‌ಟೇಬಲ್ ಶರತ್‌ ಅವರಿಗೂ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದೆ. ಕಲ್ಲಿನಿಂದ ಶರತ್ ತಲೆಗೆ ಹೊಡೆದಿದ್ದಾರೆ, ಬಳಿಕ ನಟರಾಜ ಕಾರಿನಿಂದ ಲಾಂಗ್ ತಂದು ಅದರಿಂದಲೂ ಹಲ್ಲೆ ಮಾಡಿದ್ದಾನೆ. ಈ ವೇಳೆ ಕಾನ್ಸ್‌ಟೇಬಲ್ ಶರತ್ ತಮ್ಮನ್ನು ರಕ್ಷಿಸಿಕೊಳ್ಳಲು ಕನ್ವೆನ್ಷನ್ ಹಾಲ್ ಒಳಗೆ ಓಡಿ ಹೋಗಿದ್ದಾರೆ.

Also Read:  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ

ಆದರೆ ಕನ್ವೆನ್ಷನ್ ಹಾಲ್‌ ಒಳಗೂ ನುಗ್ಗಿಬಂದ ದ ಪುಂಡರ ಗುಂಪು ಲಾಂಗ್‌ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಾನ್ಸ್‌ಟೇಬಲ್ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಗಾಯಾಳು ಶರತ್ ಸದ್ಯಕ್ಕೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ಜಿಲ್ಲಾ ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್  ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?