AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

police constable: ಮಳಲಿ ದೇವಸ್ಥಾನದ ಬಳಿ ಗ್ರಾಮದ ಯುವಕನಿಗೆ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಅದನ್ನು ಬಿಡಿಸಲು ಕಾನ್ಸ್‌ಟೇಬಲ್ ಶರತ್​ ಮುಂದಾಗಿದ್ದಾರೆ. ಆ ವೇಳೆ ಅವರ ಮೇಲೆಯೂ ಹಲ್ಲೆ ಮಾಡಲಾಗಿದೆ. ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ
ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ
TV9 Web
| Edited By: |

Updated on: Jun 17, 2023 | 8:44 AM

Share

ಹಾಸನ : ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್‌ಟೇಬಲ್ (police constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (attack) ನಡೆಸಿರುವ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಶರತ್ ಹಲ್ಲೆಗೊಳಗಾದ ಕಾನ್ಸ್‌ಟೇಬಲ್. ಹಾಸನ ಜಿಲ್ಲೆ ಹೊಳೇನರಸೀಪುರ (Holenarasipura) ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಮೇಲೆ ಹಲ್ಲೆ ನಡೆದಿದೆ. ಜೂನ್ 15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಶರತ್ ಬಂದಿದ್ದರು. ದೇವಸ್ಥಾನದ ಬಳಿಯಿರುವ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಗ್ರಾಮದ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಕಾನ್ಸ್‌ಟೇಬಲ್ ಶರತ್ ಜಗಳ ಬಿಡಿಸಲು ಹೋಗಿದ್ದಾರೆ. ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಿಥುನ್, ಲೋಹಿತ್, ನಟರಾಜು ಹಾಗೂ ಇತರರ ಗುಂಪು ಕಾನ್ಸ್‌ಟೇಬಲ್ ಶರತ್‌ ಅವರಿಗೂ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದೆ. ಕಲ್ಲಿನಿಂದ ಶರತ್ ತಲೆಗೆ ಹೊಡೆದಿದ್ದಾರೆ, ಬಳಿಕ ನಟರಾಜ ಕಾರಿನಿಂದ ಲಾಂಗ್ ತಂದು ಅದರಿಂದಲೂ ಹಲ್ಲೆ ಮಾಡಿದ್ದಾನೆ. ಈ ವೇಳೆ ಕಾನ್ಸ್‌ಟೇಬಲ್ ಶರತ್ ತಮ್ಮನ್ನು ರಕ್ಷಿಸಿಕೊಳ್ಳಲು ಕನ್ವೆನ್ಷನ್ ಹಾಲ್ ಒಳಗೆ ಓಡಿ ಹೋಗಿದ್ದಾರೆ.

Also Read:  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡ್ರೋನ್‌ ಬಳಕೆ; ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ನಗರವಾಗಿಸಲು ಸೂಚನೆ

ಆದರೆ ಕನ್ವೆನ್ಷನ್ ಹಾಲ್‌ ಒಳಗೂ ನುಗ್ಗಿಬಂದ ದ ಪುಂಡರ ಗುಂಪು ಲಾಂಗ್‌ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಾನ್ಸ್‌ಟೇಬಲ್ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಗಾಯಾಳು ಶರತ್ ಸದ್ಯಕ್ಕೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ಜಿಲ್ಲಾ ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್  ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ