AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ರೈಲಿನಿಂದ ನದಿಗೆ ಬಿದ್ದು ಬದುಕಿ ಬಂದ ಗಟ್ಟಿಗ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ಯುವಕ ಅಯಾನ್ ಪವಾಡಸದೃಶವಾಗಿ ಬದುಕುಳಿದಿದ್ದಾನೆ. ಕೆ.ಆರ್. ನಗರದಿಂದ ಹಾಸನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಅಪಾಯ ತಪ್ಪಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಹಾಸನ: ರೈಲಿನಿಂದ ನದಿಗೆ ಬಿದ್ದು ಬದುಕಿ ಬಂದ ಗಟ್ಟಿಗ
ಆಯಾನ್​​
ಮಂಜುನಾಥ ಕೆಬಿ
| Edited By: |

Updated on:Jan 31, 2025 | 9:34 AM

Share

ಹಾಸನ, ಜನವರಿ 31: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ನದಿಗೆ ಬಿದ್ದು ಪವಾಡ ಸದೃಶವಾಗಿ ಯುವಕನೋರ್ವ ಬದುಕಿ ಬಂದಿರೊ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರದಲ್ಲಿ (Holenarasipura) ನಡೆದಿದೆ‌. ಆಯಾನ್ ಬದುಕಿ ಬಂದ ಯುವಕ. ಮುಜಾಮಿಲ್ ಎಂಬುವರ ಪುತ್ರ ಅಯಾನ್ ಹಾಸನದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ.

ಮಂಗಳವಾರ ರಾತ್ರಿ ಕೆ.ಆರ್. ನಗರದಿಂದ ಹಾಸನಕ್ಕೆ ಪೋಷಕರ ಜೊತೆ ರೈಲಿನಲ್ಲಿ ತೆರಳುತ್ತಿದ್ದರು. ರೈಲಿನಲ್ಲಿ ಬಾಗಿಲು ಬಳಿ ನಿಂತಿದ್ದ ಆಯನ್​ ಆಯತಪ್ಪಿ ಹೇಮಾವತಿ ನದಿಗೆ ಬಿದ್ದಿದ್ದಾರೆ. ಆಯನ್​ ನದಿಗೆ ಬಿದ್ದಿದ್ದನ್ನು ಕಂಡ ಪೋಷಕರು ಪೋಷಕರು ಕೂಗಾಡಿ, ರೈಲು ನಿಲ್ಲಿಸಿದ್ದಾರೆ. ರೈಲು ನಿಂತ ಬಳಿಕ ಕೂಡಲೆ ನದಿಗೆ ಇಳಿದ ಜನರು ಆಯಾನ್​ನನ್ನು ರಕ್ಷಣೆ ಮಾಡಿದ್ದಾರೆ. ನದಿಯಲ್ಲಿ ನೀರು ಕೂಡ ಕಡಿಮೆ ಇದ್ದುದರಿಂದ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತಿಬ್ಬರು ಬಲಿ: ಓರ್ವ ಮಹಿಳೆ ಜೀವನ್ಮರಣ ಹೋರಾಟ!

ಕೂಡಲೆ ಹೊಳೆನರಸೀಪುರ ನಗರ ಠಾಣೆ ಪೊಲೀಸರಿಗು ಮಾಹಿತಿ ನೀಡಲಾಗಿದ್ದು ಪೊಲೀಸರು ಕೂಡ ಸ್ಥಳಕ್ಕೆ ಬಂದು ಮಾಹಿತಿ ಪಡೆದಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದರೂ ಪವಾಡ ಸದೃಶವಾಗಿ ಬದುಕಿ ಬಂದ ಆಯಾನ್​ನನ್ನು ಪೋಷಕರ ಜೊತೆ ಕಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Fri, 31 January 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ