Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ರೈಲಿನಿಂದ ನದಿಗೆ ಬಿದ್ದು ಬದುಕಿ ಬಂದ ಗಟ್ಟಿಗ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ಯುವಕ ಅಯಾನ್ ಪವಾಡಸದೃಶವಾಗಿ ಬದುಕುಳಿದಿದ್ದಾನೆ. ಕೆ.ಆರ್. ನಗರದಿಂದ ಹಾಸನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಅಪಾಯ ತಪ್ಪಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಹಾಸನ: ರೈಲಿನಿಂದ ನದಿಗೆ ಬಿದ್ದು ಬದುಕಿ ಬಂದ ಗಟ್ಟಿಗ
ಆಯಾನ್​​
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Jan 31, 2025 | 9:34 AM

ಹಾಸನ, ಜನವರಿ 31: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ನದಿಗೆ ಬಿದ್ದು ಪವಾಡ ಸದೃಶವಾಗಿ ಯುವಕನೋರ್ವ ಬದುಕಿ ಬಂದಿರೊ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರದಲ್ಲಿ (Holenarasipura) ನಡೆದಿದೆ‌. ಆಯಾನ್ ಬದುಕಿ ಬಂದ ಯುವಕ. ಮುಜಾಮಿಲ್ ಎಂಬುವರ ಪುತ್ರ ಅಯಾನ್ ಹಾಸನದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ.

ಮಂಗಳವಾರ ರಾತ್ರಿ ಕೆ.ಆರ್. ನಗರದಿಂದ ಹಾಸನಕ್ಕೆ ಪೋಷಕರ ಜೊತೆ ರೈಲಿನಲ್ಲಿ ತೆರಳುತ್ತಿದ್ದರು. ರೈಲಿನಲ್ಲಿ ಬಾಗಿಲು ಬಳಿ ನಿಂತಿದ್ದ ಆಯನ್​ ಆಯತಪ್ಪಿ ಹೇಮಾವತಿ ನದಿಗೆ ಬಿದ್ದಿದ್ದಾರೆ. ಆಯನ್​ ನದಿಗೆ ಬಿದ್ದಿದ್ದನ್ನು ಕಂಡ ಪೋಷಕರು ಪೋಷಕರು ಕೂಗಾಡಿ, ರೈಲು ನಿಲ್ಲಿಸಿದ್ದಾರೆ. ರೈಲು ನಿಂತ ಬಳಿಕ ಕೂಡಲೆ ನದಿಗೆ ಇಳಿದ ಜನರು ಆಯಾನ್​ನನ್ನು ರಕ್ಷಣೆ ಮಾಡಿದ್ದಾರೆ. ನದಿಯಲ್ಲಿ ನೀರು ಕೂಡ ಕಡಿಮೆ ಇದ್ದುದರಿಂದ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತಿಬ್ಬರು ಬಲಿ: ಓರ್ವ ಮಹಿಳೆ ಜೀವನ್ಮರಣ ಹೋರಾಟ!

ಕೂಡಲೆ ಹೊಳೆನರಸೀಪುರ ನಗರ ಠಾಣೆ ಪೊಲೀಸರಿಗು ಮಾಹಿತಿ ನೀಡಲಾಗಿದ್ದು ಪೊಲೀಸರು ಕೂಡ ಸ್ಥಳಕ್ಕೆ ಬಂದು ಮಾಹಿತಿ ಪಡೆದಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದರೂ ಪವಾಡ ಸದೃಶವಾಗಿ ಬದುಕಿ ಬಂದ ಆಯಾನ್​ನನ್ನು ಪೋಷಕರ ಜೊತೆ ಕಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Fri, 31 January 25

ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್