AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ; ನಾಲ್ವರು ಸಿಬ್ಬಂದಿ ಅಮಾನತು

ಅ.9 ರಿಂದ ಹಾಸನಾಂಬೆಯ ದರ್ಶನ ಶುರುವಾಗಿದೆ. ವರ್ಷಕ್ಕೊಮ್ಮೆ ದರ್ಶನಕೊಡುವ ಹಾಸನಾಂಬೆಯನ್ನು ನೋಡಲು ಜನ ಕಿಕ್ಕಿರಿದು ಬರುತ್ತಿದ್ದಾರೆ. ಈ ಹಿಂದೆ ಕ್ಷೇತ್ರದ ಆಡಳಿತ ಮಂಡಳಿ ಗೋಲ್​ಮಾಲ್ ಆರೋಪವನ್ನೂ ಎದುರಿಸಿತ್ತು. ಈಗಾಗಲೇ ಇಬ್ಬರು ಅಧಿಕಾರಿಗಳು ಅಮಾನತು ಹೊಂದಿದ್ದರೂ, ಈಗ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಕರ್ತವ್ಯ ಪಾಲನೆಯಲ್ಲಿ ಅಶಿಸ್ತು ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ; ನಾಲ್ವರು ಸಿಬ್ಬಂದಿ ಅಮಾನತು
ಹಾಸನದಲ್ಲಿ 4 ಸಿಬ್ಬಂದಿ ಅಮಾನತು
ಮಂಜುನಾಥ ಕೆಬಿ
| Edited By: |

Updated on:Oct 12, 2025 | 8:33 AM

Share

ಹಾಸನ, ಅಕ್ಟೋಬರ್ 12: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ (Hassan) ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಕಿಕ್ಕಿರಿದು ಬರುತ್ತಿದ್ದಾರೆ. ಕ್ಷೇತ್ರದ ಆಡಳಿತ ಮಂಡಳಿ ಗೋಲ್​ಮಾಲ್ ಆರೋಪವನ್ನೂ ಎದುರಿಸಿತ್ತು. ತಾಯಿಯ ದರ್ಶನದ ಮೊದಲ ದಿನವೇ ಮಳೆ ಅವಾಂತರ ಸೃಷ್ಟಿಸಿತ್ತು. ಈ ನಡುವೆ ಮತ್ತೊಮ್ಮೆ ಕರ್ತವ್ಯ ಲೋಪದ ಆರೋಪ ಕೇಳಿ ಬರುತ್ತಿದೆ. ಈಗಾಗಲೇ ಇಬ್ಬರು ಅಧಿಕಾರಿಗಳು ಅಮಾನತು ಹೊಂದಿದ್ದರೂ, ಈಗ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕಾರ್ಡ್​ ಸ್ಕ್ಯಾನ್​ ಮಾಡದೇ ಭಕ್ತರಿಗೆ ಪ್ರವೇಶ ನೀಡಿದ ಸಿಬ್ಬಂದಿ ಮೇಲೆ ಕ್ರಮ

ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಗೋಲ್ಡ್ ಪಾಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿದೆ. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದ್ದು, ನಾಲ್ವರು ಅಮಾನತುಗೊಂಡಿದ್ದಾರೆ. ಗೋಲ್ಡ್ ಕಾರ್ಡ್​ ಕೌಂಟರ್​ನಲ್ಲಿ ಕುಳಿತಿದ್ದ ಸಿಬ್ಬಂದಿ ಭಕ್ತರ ಕಾರ್ಡ್​ ಸ್ಕ್ಯಾನ್ ಮಾಡದೆಯೇ ಒಳಗೆ ಬಿಟ್ಟಿದ್ದಾರೆ.

ಇದನ್ನೂ ಓದಿ ಹಾಸನಾಂಬೆ ದರ್ಶನೋತ್ಸವ ತಯಾರಿಯಲ್ಲಿ ಭಾರೀ ಅಕ್ರಮ; ದೇವರಾಜೇಗೌಡ ಆರೋಪ

ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದರಿಂದ ಗೋವಿಂದರಾಜ್ ಹಾಗೂ ಯೋಗಾನಂದ್ ಹಾಗೂ ವಿಎಗಳಾದ ಸಂತೋಷ್ ಅಂಬಿಗರ, ಶಿರಾಜ್ ಮಹಿಮಾ ಪಟೇಲ್ ಇವರನ್ನು ಅಮಾನತುಗೊಳಿಸಲಾಗಿದೆ. ಸ್ಪಷ್ಟ ನಿರ್ದೇಶನಗಳಿದ್ದರೂ, ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದು ಗಂಭೀರ ಉಲ್ಲಂಘನೆಯಾಗಿದೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಇಂತಹ ವರ್ತನೆ ಸರ್ಕಾರಿ ನೌಕರರಿಗೆ ಯೋಗ್ಯವಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಮೊದಲ ದಿನವೇ ಎರಡು ಸಿಬ್ಬಂದಿ ಅಮಾನತು

ದೇವಿಯ ದರ್ಶನದ ಮೊದಲ ದಿನವೂ ಕರ್ತವ್ಯ ಐಡಿ ಕಾರ್ಡ್ ದುರುಪಯೋಗ ಮಾಡಿಕೊಂಡಿದ್ದ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬೇಜವಾಬ್ದಾರಿತನ ತೋರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:25 am, Sun, 12 October 25

Follow Us
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ