AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ತುಂಬಿದ ಕೆರೆ ಕಟ್ಟೆ, ಹಸಿರ ಸೊಬಗಿನಲ್ಲಿ ಹಕ್ಕಿಗಳ ಚಿಲಿಪಿಲಿ ಕಲರವ

ಹಾವೇರಿ: ಹಚ್ಚ ಹಸಿರ ಸೀರೆಯುಟ್ಟು ಕಂಗೊಳಿಸುತ್ತಿರುವ ಪ್ರಕೃತಿ ಮಾತೆ. ಪ್ರಕೃತಿ ಮಾತೆ ಮಡಿಲಲ್ಲ ತುಂಬಿ ತುಳುಕುತ್ತಿರುವ ಕೆರೆ. ಕೆರೆಯ ಸುತ್ತ ಕಾಣೋ ಹಸಿರ ಸಿರಿ. ಹಸಿರ ಮರದಲ್ಲಿ ಹಕ್ಕಿಯೊಂದು ಪುಟ್ಟ ಗೂಡು ಕಟ್ಟಿಕೊಳ್ಳುತ್ತಿದ್ರೆ, ಹೆಜ್ಜೆ ಮೇಲೆ ಹೆಜ್ಜೆಯಿಟ್ಟು ಓಡಾಡುತ್ತಿರುವ ಗಿಣಿರಾಮ. ಕೆರೆಯ ಕಟ್ಟೆ ಮೇಲೆ ಒಂದಿಷ್ಟು ಹಕ್ಕಿಗಳು ಸಾಲಾಗಿ ಕುಳಿತ್ತಿದ್ರೆ, ಪ್ರಕೃತಿ ಮಾತೆಗೆ ಮತ್ತಷ್ಟು ಮೆರಗು ತಂದಿರುವ ಬಣ್ಣಬಣ್ಣದ ಹೂವುಗಳು. ಎಲ್ಲದ್ದಕ್ಕಿಂತ ಹೆಚ್ಚಾಗಿ ಹಸಿರು ತುಂಬಿದ ಮರಕ್ಕೆ ಬೆಳ್ಳಿ ಚುಕ್ಕಿ ಇಟ್ಟಂತೆ ಭಾಸವಾಗುತ್ತಿರುವ ಬೆಳ್ಳಕ್ಕಿ ಹಿಂಡು. ಅಬ್ಬಬ್ಬ […]

ಮಳೆಯಿಂದಾಗಿ ತುಂಬಿದ ಕೆರೆ ಕಟ್ಟೆ, ಹಸಿರ ಸೊಬಗಿನಲ್ಲಿ ಹಕ್ಕಿಗಳ ಚಿಲಿಪಿಲಿ ಕಲರವ
ಸಾಧು ಶ್ರೀನಾಥ್​
|

Updated on:Dec 08, 2019 | 2:09 PM

Share

ಹಾವೇರಿ: ಹಚ್ಚ ಹಸಿರ ಸೀರೆಯುಟ್ಟು ಕಂಗೊಳಿಸುತ್ತಿರುವ ಪ್ರಕೃತಿ ಮಾತೆ. ಪ್ರಕೃತಿ ಮಾತೆ ಮಡಿಲಲ್ಲ ತುಂಬಿ ತುಳುಕುತ್ತಿರುವ ಕೆರೆ. ಕೆರೆಯ ಸುತ್ತ ಕಾಣೋ ಹಸಿರ ಸಿರಿ. ಹಸಿರ ಮರದಲ್ಲಿ ಹಕ್ಕಿಯೊಂದು ಪುಟ್ಟ ಗೂಡು ಕಟ್ಟಿಕೊಳ್ಳುತ್ತಿದ್ರೆ, ಹೆಜ್ಜೆ ಮೇಲೆ ಹೆಜ್ಜೆಯಿಟ್ಟು ಓಡಾಡುತ್ತಿರುವ ಗಿಣಿರಾಮ. ಕೆರೆಯ ಕಟ್ಟೆ ಮೇಲೆ ಒಂದಿಷ್ಟು ಹಕ್ಕಿಗಳು ಸಾಲಾಗಿ ಕುಳಿತ್ತಿದ್ರೆ, ಪ್ರಕೃತಿ ಮಾತೆಗೆ ಮತ್ತಷ್ಟು ಮೆರಗು ತಂದಿರುವ ಬಣ್ಣಬಣ್ಣದ ಹೂವುಗಳು. ಎಲ್ಲದ್ದಕ್ಕಿಂತ ಹೆಚ್ಚಾಗಿ ಹಸಿರು ತುಂಬಿದ ಮರಕ್ಕೆ ಬೆಳ್ಳಿ ಚುಕ್ಕಿ ಇಟ್ಟಂತೆ ಭಾಸವಾಗುತ್ತಿರುವ ಬೆಳ್ಳಕ್ಕಿ ಹಿಂಡು. ಅಬ್ಬಬ್ಬ ಈ ಪ್ರಕೃತಿ ಮಾತೆಯ ಸೊಬಗನ್ನ ವರ್ಣಿಸೋಕೆ ಸಾಧ್ಯನೇ ಇಲ್ಲ.

ಹಾವೇರಿ ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳುಗಳ ಹಿಂದೆ ಎಡೆಬಿಡದೆ ಸುರಿದ ಮಳೆಗೆ ಜಿಲ್ಲೆಯಲ್ಲಿನ ಬಹುತೇಕ ಕೆರೆಗಳೆಲ್ಲಾ ತುಂಬಿಕೊಂಡಿವೆ. ಕೆರೆಗಳು ತುಂಬಿದ್ದರಿಂದ ಕೆರೆಗಳ ಸುತ್ತ ಸುಂದರ ಹಸಿರಿನ ನಿಸರ್ಗವೇ ನಿರ್ಮಾಣವಾಗಿದೆ. ಹಸಿರಿನ ಗುಡ್ಡಗಳಲ್ಲಿ ಬಣ್ಣಬಣ್ಣದ ಹೂವುಗಳು ಅರಳಿ ನಿಂತಿವೆ. ಅದ್ರಲ್ಲೂ ಗೂಡು ಕಟ್ಟುತ್ತಿರೋ ಹಕ್ಕಿ, ಗಿಳಿಗಳ ಓಡಾಟ, ಬೀಡು ಬಿಟ್ಟಿರೋ ಬೆಳ್ಳಕ್ಕಿಗಳ ಹಿಂಡು ಹೀಗೆ ಸುಂದರ ವಾತಾವರಣವೇ ನಿರ್ಮಾಣವಾಗಿದೆ.

ಕೆರೆ ನೀರಿನಿಂದ ಕೆರೆಯ ಸುತ್ತಮುತ್ತ ಸುಂದರ ಹಸಿರ ಸೊಬಗು ಮೈದಳೆದು ನಿಂತಿದೆ. ಹಕ್ಕಿಗಳಿಗಂತೂ ಈ ಸುಂದರ ಹಸಿರ ನಿಸರ್ಗ ಹೇಳಿ ಮಾಡಿಸಿದ ತಾಣದಂತಿವೆ. ಪಕ್ಷಿಗಳು ಸಂತಾನೋತ್ಪತ್ತಿಗೆ ಗೂಡು ಕಟ್ಟುತ್ತಾ, ಮರಗಳ ಮೇಲೆ ಸ್ವಚ್ಛಂದವಾಗಿ ಹಾರಾಡಿಕೊಂಡಿವೆ. ಇನ್ನು ಬೆಳ್ಳಕ್ಕಿಗಳ ಹಿಂಡು ಕೆರೆಯ ಸುತ್ತಮುತ್ತಲಿನ ಮರಗಳ ಮೇಲೆಯೇ ಬಿಡಾರ ಹೂಡಿವೆ.

Published On - 2:05 pm, Sun, 8 December 19

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ