AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ.

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು
ಮೃತರು
TV9 Web
| Edited By: |

Updated on:Apr 02, 2024 | 7:43 PM

Share

ಹಾವೇರಿ, ಮಾರ್ಚ್​ 02: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ (collides) ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಮೃತರು. ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ. ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಣ್ಣೆ ಮತ್ತಿನಲ್ಲಿ ಗುರಾಯಿಸಿದ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ವಿಜಯಬಾರ್​ನಲ್ಲಿ ಎಣ್ಣೆ ಮತ್ತಿನಲ್ಲಿ ಗುರಾಯಿಸಿದ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿರುವಂತಹ ಘಟನೆ ನಡೆದಿದೆ. ಪಾಂಡುರಂಗ, ಆಕಾಶ್, ಚಿಕ್ಕಣ್ಣ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ಬೀದರ: ಪೊಲೀಸ್ ವೇಷ ಧರಿಸಿ ವಿದೇಶಿ ಹಣ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ವಕೀಲ ಮಂಜುನಾಥ್, ರೌಡಿಶೀಟರ್ ಜಯಂತ್, ದೇವರಾಜ್ ವಿರುದ್ಧ ಆರೋಪ ಮಾಡಲಾಗಿದೆ. ಎಲ್ಲರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮಾಡಲಾಗಿದೆ. ಹಲ್ಲೆ ನಡೆಸಿದ ರೌಡಿಶೀಟರ್ ಜಯಂತ್ ಗಡಿಪಾರಿಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಲಾಗಿದೆ.

32 ಆರೋಪಿಗಳ ಬಂಧನ: 65 ಲಕ್ಷ 29 ಸಾವಿರ ರೂ. ಮೌಲ್ಯದ ವಸ್ತುಗಳು ಜಪ್ತಿ

ಬೀದರ್: ಕಳ್ಳತನದಲ್ಲಿ ಭಾಗಿಯಾದವರನ್ನು ಬಂಧಿಸುವ ಮೂಲಕ ಬೀದರ್ ಪೊಲೀಸ್ ಹೆಡೆಮುರಿ ಕಟ್ಟಿದ್ದಾರೆ. 16 ಪೊಲೀಸ್ ‌ಠಾಣೆಯ 31 ಕಳ್ಳತನ ಪ್ರಕರಣ ಭೇದಿಸಿದ್ದು, 32 ಆರೋಪಿಗಳನ್ನು ಬಂಧಿಸಲಾಗಿದೆ. 65 ಲಕ್ಷ 29 ಸಾವಿರ ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ: ತನ್ನ ಇಚ್ಛೆಯಂತೆ ನಡೆಯದ ಪ್ರೇಯಸಿಗೆ ಚಾಕುವಿನಿಂದ ಇರಿದ ಪ್ರಿಯಕರ

ನಗದು, ವಿದೇಶಿ ಕರೆನ್ಸಿ, ಬಂಗಾರ, ಜಾನುವಾರು, ಆಕಳು, ಎತ್ತು, ಬೈಕ್, ಮೊಬೈಲ್, ಫೋನ್ ಜೀಪ್, ಆಟೋ ಕದ್ದು ಕಳ್ಳರ ಗ್ಯಾಂಗ್ ಪರಾರಿಯಾಗಿದ್ದರು. ಒಂದು ತಿಂಗಳ ಅವಧಿಯಲ್ಲಿ 65 ಲಕ್ಷ 29 ಸಾವಿರ ರೂ. ಮೌಲ್ಯದ‌ ವಸ್ತು ಕಳ್ಳತನ ಮಾಡಿದ್ದರು. ಅಂತರ್ ರಾಜ್ಯ ಕಳ್ಳರ ಗ್ಯಾಂಗ್​​ನ್ನು ಬಂಧಿಸುವಲ್ಲಿ ಪೊಲೀಸ್​​ರು ಯಶಸ್ವಿ ಆಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 pm, Tue, 2 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ