AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಶ್ವಾನಕ್ಕೆ ಹುಟ್ಟುಹಬ್ಬದ ಸಂಭ್ರಮ; ಕೆಕ್​ ಕತ್ತರಿಸಿ ಕನಕನಿಗೆ ಶುಭಕೋರಿದ ಪೊಲೀಸರು

ಕನಕ ಹೆಸರಿನ ಈ ಶ್ವಾನವು 2019ರಲ್ಲಿ ಬೆಸ್ಟ್ ಬ್ಯೂಟಿ ಆಫ್ ಬೆಂಗಳೂರು ಪ್ರಶಸ್ತಿಯನ್ನು ಡಿಐಜಿ ಅವರಿಂದ ಪಡೆದುಕೊಂಡಿದೆ. 2020ರಲ್ಲಿ ದಾವಣಗೆರೆ ವಲಯದಲ್ಲಿ ಪ್ರಶಸ್ತಿ ಮತ್ತು ರಾಜ್ಯಮಟ್ಟದ ಕರ್ತವ್ಯಕೂಟದಲ್ಲಿ ಪ್ರಶಸ್ತಿ ಪಡೆದುಕೊಂಡು ಇಲಾಖೆಯಲ್ಲಿ ಉತ್ತಮ ಹೆಸರು ಮಾಡಿದೆ.

ಹಾವೇರಿಯಲ್ಲಿ  ಶ್ವಾನಕ್ಕೆ ಹುಟ್ಟುಹಬ್ಬದ ಸಂಭ್ರಮ; ಕೆಕ್​ ಕತ್ತರಿಸಿ ಕನಕನಿಗೆ ಶುಭಕೋರಿದ ಪೊಲೀಸರು
ಪೊಲೀಸ್ ಶ್ವಾನದ ಹುಟ್ಟುಹಬ್ಬ ಆಚರಿಸಿದ ಕ್ಷಣ
Follow us
preethi shettigar
|

Updated on: May 05, 2021 | 10:10 AM

ಹಾವೇರಿ : ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಿಬ್ಬಂದಿಯಷ್ಟೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳಕ್ಕೂ ಪ್ರಾಧಾನ್ಯತೆ ನೀಡಲಾಗುತ್ತದೆ. ಪೊಲೀಸ್ ಸಿಬ್ಬಂದಿಗಳು ಕೆಲವೊಂದು ಪ್ರಕರಣಗಳನನ್ನು ಒಂಟಿಯಾಗಿ ಭೇದಿಸಿದರೆ, ಮತ್ತೆ ಕೆಲವೊಂದು ಸಂದರ್ಭಗಳಲ್ಲಿ ಶ್ವಾನದಳದ ಸಾಥ್ ಬೇಕು. ಹೀಗೆ ಪೊಲೀಸ್ ಮತ್ತು ಶ್ವಾನಗಳ ನಡುವೆ ಸೃಷ್ಟಿಯಾಗಿದೆ. ಹೀಗೆ ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಶ್ವಾನದಳಕ್ಕೆ ಎರಡು ವರ್ಷಗಳ ಹಿಂದೆ ಶ್ವಾನವೊಂದು ಸೇವೆಗೆ ಸೇರಿತ್ತು. ಅದಕ್ಕೆ ಕನಕ ಎಂದು ನಾಮಕರಣ ಮಾಡಲಾಗಿತ್ತು.‌ ಈಗ ಈ ಕನಕನಿಗೆ ಎರಡು ವರ್ಷದ ಸಂಭ್ರಮ.

ಜಿಲ್ಲಾ ಪೊಲೀಸ್ ಶ್ವಾನದಳದ ರಾಜ ಎಂದು ಹೆಸರುವಾಸಿ ಆಗಿರುವ ಕನಕನಿಗೆ ಶ್ವಾನದಳದ ಸಿಬ್ಬಂದಿ 2ನೇ ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು. ಕನಕನಿಗೆ ತರಬೇತುದಾರ ಶ್ರೀಕಾಂತ ಕಬ್ಬೂರು, ಶಿವರಾಜ್ ಸೇರಿ ಹುಟ್ಟುಹಬ್ಬದ ಶುಭಕೋರಿದ್ದು, ಕನಕನಿಗೆ ಟೋಪಿ ಹಾಕಿ, ಕೇಕ್ ಕತ್ತರಿಸಿ ಎರಡನೆ ವರ್ಷದ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.

ಉತ್ತಮ ಹೆಸರು ಮಾಡಿರುವ ಕನಕ: 2019ರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೇರಿಕೊಂಡಿರುವ ಕನಕ ಬಾಂಬ್ ನಿಷ್ಕ್ರಿಯದಳ ಹಾಗೂ ಅಪರಾಧ ವಿಭಾಗದ ಸೇವೆಯನ್ನು ಆರಂಭ ಮಾಡಿದ್ದಾನೆ. ಬೆಂಗಳೂರಿನ ಆಡುಗೋಡಿಯಲ್ಲಿ ತರಬೇತಿ ಮುಗಿಸಿರುವ ಕನಕ ಹಾವೇರಿ ಜಿಲ್ಲೆಯಲ್ಲಿ ತನ್ನ ಸೇವೆ ಪ್ರಾರಂಭಿಸಿದ್ದಾನೆ. ಕನಕ ಹೆಸರಿನ ಈ ಶ್ವಾನವು 2019ರಲ್ಲಿ ಬೆಸ್ಟ್ ಬ್ಯೂಟಿ ಆಫ್ ಬೆಂಗಳೂರು ಪ್ರಶಸ್ತಿಯನ್ನು ಡಿಐಜಿ ಅವರಿಂದ ಪಡೆದುಕೊಂಡಿದೆ. 2020ರಲ್ಲಿ ದಾವಣಗೆರೆ ವಲಯದಲ್ಲಿ ಪ್ರಶಸ್ತಿ ಮತ್ತು ರಾಜ್ಯಮಟ್ಟದ ಕರ್ತವ್ಯಕೂಟದಲ್ಲಿ ಪ್ರಶಸ್ತಿ ಪಡೆದುಕೊಂಡು ಇಲಾಖೆಯಲ್ಲಿ ಉತ್ತಮ ಹೆಸರು ಮಾಡಿದೆ.

ಕನಕನಿಂದ ಉತ್ತಮ ಕೆಲಸ: ಪ್ರಧಾನಮಂತ್ರಿ ತಂಗುದಾಣದಲ್ಲಿ ಕರ್ತವ್ಯ ಲೋಪವಾಗದಂತೆ ಉತ್ತಮ ಸೇವೆ‌, ಉಪರಾಷ್ಟ್ರಪತಿಯವರ ಬೆಂಗಾವಲು ಕರ್ತವ್ಯದಲ್ಲಿ ಅತ್ಯುತ್ತಮ ನಿರ್ವಹಣೆ ಮಾಡಿದ್ದು, ಅತೀ ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಚಾಣಾಕ್ಷತನವನ್ನು ಕನಕ‌ ಹೆಸರಿನ ಶ್ವಾನ ಹೊಂದಿದೆ. ಸದ್ಯ ಕನಕನಿಗೆ ಈಗ ಎರಡು ವರ್ಷದ ಜನ್ಮದಿನದ ಸಂಭ್ರಮ. ಇಲಾಖೆಯಲ್ಲಿ ನಿನ್ನ ಸೇವೆ ಹೀಗೆ ಮುಂದುವರೆಯಲಿ ಎಂದು ಕನಕನಿಗೆ ಬರ್ತ್ ಡೇ ವಿಶ್ ಜೊತೆಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ ಇಲ್ಲಿನ ಸಿಬ್ಬಂದಿಗಳು.

ಇದನ್ನೂ ಓದಿ:

ಪ್ರೀತಿಯ ಶ್ವಾನಕ್ಕೆ ಇಡೀ ಕುಟುಂಬ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿ ಸಂಭ್ರಮಿಸಿದೆ

ಊಟ ಹಾಕಿದವನಿಗಾಗಿ 600 ಕಿ.ಮೀ ನಡೆದ ಗರ್ಭಿಣಿ ನಾಯಿ! ಇಲ್ಲಿದೆ ಮನಕಲಕುವ ಘಟನೆ

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್