AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ

ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ
ರೈತರಿಂದ ಕಲ್ಲುತೂರಾಟ
ಗಂಗಾಧರ​ ಬ. ಸಾಬೋಜಿ
|

Updated on:Mar 11, 2024 | 7:07 PM

Share

ಹಾವೇರಿ, ಮಾರ್ಚ್​ 11: ಒಣ ಮೆಣಸಿನಕಾಯಿ (Byadagi chilli) ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ ಕಾರಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ

ಇದುವರೆಗೆ 12 ವಾಹನ ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತ್ತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇದೆ. APMC ಖಡತ ಎಲ್ಲಾ ಬೆಂಕಿಗೆ ಆಹುತಿಯಾಗಿವೆ. ಸ್ಥಳದಿಂದ ಹೊಗಲು ರೈತರು ಪಟ್ಟುಬಿಡುತ್ತಿಲ್ಲ.

ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸೂಚಿಸಿದ್ದಾರೆ: ಡಾ.ಜಿ.ಪರಮೇಶ್ವರ್

ಈ ವಿಚಾರವಾಗಿ ವಿಧಾನಸೌಧದಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದು, ಬೆಲೆ ಕುಸಿತ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿಯಲ್ಲಿ ಗಲಾಟೆ ಆಗಿದೆ. 20 ಸಾವಿರದಿಂದ 8 ಸಾವಿರ ರೂ. ಮೆಣಸಿನಕಾಯಿ ಬೆಲೆ ಕುಸಿತ ಕಂಡಿದೆ. ಇದು ಒಂದೇ ಎಪಿಎಂಸಿಯಲ್ಲಿ ಆಗಿದೆಯೋ ಅಥವಾ ಬೇರೆ ಕಡೆ ಆಗಿದೆಯೋ ಎಂಬ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ

ಬೆಲೆ ಕುಸಿತ ಹಿನ್ನೆಲೆಯಲ್ಲಿ ಗಲಾಟೆ ಆಗಿದೆ. ರೈತರು ಎಪಿಎಂಸಿ ಕಚೇರಿಗೆ ನುಗ್ಗಿ ಕುರ್ಚಿ, 2 ವಾಹನ ಸುಟ್ಟಿದ್ದಾರೆ. ತಕ್ಷಣ ಪೊಲೀಸರನ್ನು ಕಳಿಸಿದ್ದೇವೆ. ಸದ್ಯ ನಿಯಂತ್ರಣದಲ್ಲಿದೆ. ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Mon, 11 March 24

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ