AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ

ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತದಿಂದ ರೊಚ್ಚಿಗೆದ್ದ ರೈತರು: ಎಪಿಎಂಸಿ ಕಚೇರಿಗೆ ಕಲ್ಲುತೂರಿ, ಕಾರಿಗೆ ಬೆಂಕಿ
ರೈತರಿಂದ ಕಲ್ಲುತೂರಾಟ
ಗಂಗಾಧರ​ ಬ. ಸಾಬೋಜಿ
|

Updated on:Mar 11, 2024 | 7:07 PM

Share

ಹಾವೇರಿ, ಮಾರ್ಚ್​ 11: ಒಣ ಮೆಣಸಿನಕಾಯಿ (Byadagi chilli) ಬೆಲೆ ದಿಢೀರ್ ಕುಸಿತ ಹಿನ್ನೆಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರಿಂದ ಕಲ್ಲುತೂರಾಟ ಮಾಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ದರ ದಿಢೀರ್ ಇಳಿಕೆಯಿಂದ ಆಕ್ರೋಶಗೊಂಡಿರುವ ರೈತರು ರೊಚ್ಚಿಗೆದ್ದು ಮೆಣಸಿನಕಾಯಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಇಷ್ಟೇ ಅಲ್ಲದೆ ಕಾರಿಗೆ ಬೆಂಕಿ ಹಚ್ಚಿ, ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ವಿತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂ. ಕುಸಿತ ಹಿನ್ನೆಲೆ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮಳೆ ಕೊರತೆಯ ಮಧ್ಯೆ ದಿಢೀರ್ ಕುಸಿದ ಮೆಣಸಿನಕಾಯಿ ದರ, ರೈತ ಹೈರಾಣ

ಇದುವರೆಗೆ 12 ವಾಹನ ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತ್ತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇದೆ. APMC ಖಡತ ಎಲ್ಲಾ ಬೆಂಕಿಗೆ ಆಹುತಿಯಾಗಿವೆ. ಸ್ಥಳದಿಂದ ಹೊಗಲು ರೈತರು ಪಟ್ಟುಬಿಡುತ್ತಿಲ್ಲ.

ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸೂಚಿಸಿದ್ದಾರೆ: ಡಾ.ಜಿ.ಪರಮೇಶ್ವರ್

ಈ ವಿಚಾರವಾಗಿ ವಿಧಾನಸೌಧದಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದು, ಬೆಲೆ ಕುಸಿತ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿಯಲ್ಲಿ ಗಲಾಟೆ ಆಗಿದೆ. 20 ಸಾವಿರದಿಂದ 8 ಸಾವಿರ ರೂ. ಮೆಣಸಿನಕಾಯಿ ಬೆಲೆ ಕುಸಿತ ಕಂಡಿದೆ. ಇದು ಒಂದೇ ಎಪಿಎಂಸಿಯಲ್ಲಿ ಆಗಿದೆಯೋ ಅಥವಾ ಬೇರೆ ಕಡೆ ಆಗಿದೆಯೋ ಎಂಬ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ

ಬೆಲೆ ಕುಸಿತ ಹಿನ್ನೆಲೆಯಲ್ಲಿ ಗಲಾಟೆ ಆಗಿದೆ. ರೈತರು ಎಪಿಎಂಸಿ ಕಚೇರಿಗೆ ನುಗ್ಗಿ ಕುರ್ಚಿ, 2 ವಾಹನ ಸುಟ್ಟಿದ್ದಾರೆ. ತಕ್ಷಣ ಪೊಲೀಸರನ್ನು ಕಳಿಸಿದ್ದೇವೆ. ಸದ್ಯ ನಿಯಂತ್ರಣದಲ್ಲಿದೆ. ದಿಢೀರ್ ಬೆಲೆ ಕುಸಿತಕ್ಕೆ ಕಾರಣ ತಿಳಿಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Mon, 11 March 24

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ