AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ತೋರಿಸುತ್ತೇನೆಂದು ಎರಡು ಸಾವಿರ ರೂಪಾಯಿ ಲಪಟಾಯಿಸಿದ ವ್ಯಕ್ತಿಯ ಕೊಲೆ

ನಿಧಿಯ ಆಸೆ ತೋರಿಸಿ ಹಣ ಪಡೆದು ಅಲ್ಲಿ ಬಾ ಇಲ್ಲಿ ಬಾ ಎಂದು ಸತಾಯಿಸಿದ ವ್ಯಕ್ತಿಯನ್ನು ರಕ್ತಸಿಕ್ತವಾಗಿ ಹತ್ಯೆಯಾಗಿ ಹತ್ಯೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ನಿಧಿ ತೋರಿಸುತ್ತೇನೆಂದು ಎರಡು ಸಾವಿರ ರೂಪಾಯಿ ಲಪಟಾಯಿಸಿದ ವ್ಯಕ್ತಿಯ ಕೊಲೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Oct 18, 2022 | 6:22 PM

ಹಾವೇರಿ: ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ನಿಧಿ ತೋರಿಸುತ್ತೇನೆ ಎಂದು ಹೇಳಿ ಎರಡು ಸಾವಿರ ರೂಪಾಯಿ ಪಡೆದು ನಿಧಿಯನ್ನು ತೋರಿಸದೆ ಸತಾಯಿಸಿದಕ್ಕೆ ಭೀಕರವಾಗಿ ಕೊಲೆಯಾದ ಘಟನೆ ತಾಲೂಕಿನ ನಾಗನೂರು ಕ್ರಾಸ್ ಬಳಿ ಇರೋ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಮಾಸನಕಟ್ಟಿ ಗ್ರಾಮದ ಐವತ್ತು ವರ್ಷ ವಯಸ್ಸಿನ ಮಹಾದೇವಪ್ಪ ಕುರುವತ್ತಿ ಎಂದು ಗುರುತಿಸಲಾಗಿದೆ. ಮಹಾದೇವಪ್ಪನಿಗೆ ಹತ್ತು ಎಕರೆ ಜಮೀನಿದ್ದು, ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ. ಇಷ್ಟಿದ್ದರೂ ಮಹಾದೇವಪ್ಪ ಕುಡಿತದ ಚಟಕ್ಕೆ ದಾಸನಾಗಿದ್ದ. ಸಾಲದ್ದಕ್ಕೆ ನಿಧಿ ತೋರಿಸುತ್ತೇನೆ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದ ಸೋಮಣ್ಣ ಕೋಡದ ಮತ್ತು ರಾಣೆಬೆನ್ನೂರಿನ ಚಂದ್ರಪ್ಪ ಮತ್ತೂರ ಎಂಬುವರಿಗೆ ನಿಧಿ ತೋರಿಸುವುದಾಗಿ ಹೇಳಿ ಅವರಿಂದ ಎರಡೂವರೆ ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದನಂತೆ. ಆದರೆ ಮರಳಿ ಹಣವನ್ನೂ ನೀಡದೆ, ನಿಧಿಯನ್ನೂ ತೋರಿಸದೆ ಅವರ ಕೈಗೆ ಸಿಗದಂತೆ ಮಹಾದೇವಪ್ಪ ಓಡಾಡುತ್ತಿದ್ದನು.

ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಅಕ್ಟೋಬರ್ 12ರ ರಾತ್ರಿ ನಾಗನೂರು ಕ್ರಾಸ್ ಬಳಿ ಮಹಾದೇವಪ್ಪನನ್ನು ಹುಡುಕಿಕೊಂಡು ಬಂದು ಮಹಾದೇವಪ್ಪನ ಜೊತೆ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದರು. ಪ್ರಕರಣದ ಬೆನ್ನು ಬಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಮಹಾದೇವಪ್ಪ ಹತ್ಯೆ ಆಗಿರುವ ಸುದ್ದಿ ತಿಳಿದು ಸ್ಥಳಕ್ಕೆ ಬಂದಿದ್ದ ಮೃತನ ಸಂಬಂಧಿಕರು ಮಹಾದೇವಪ್ಪನ ಹತ್ಯೆಗೆ ಹಲವಾರು ಕಾರಣಗಳನ್ನು ವ್ಯಕ್ತಪಡಿಸಿದ್ದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಆರಂಭಿಸಿದ್ದರು. ಮಹಾದೇವಪ್ಪನ ಹತ್ಯೆಗೆ ಬಳಸಿದ್ದ ಸುತ್ತಿಗೆ ಹತ್ಯೆಯಾಗಿದ್ದ ಸ್ಥಳದ ಪಕ್ಕದ ಜಮೀನಿನಲ್ಲೇ ಬಿದ್ದಿತ್ತು. ಈ ಕುರಿತು ತನಿಖೆಗೆ ಇಳಿದ ಪೊಲೀಸರು ಕೆಲವೇ ಕೆಲವು ದಿನಗಳಲ್ಲಿ ಮಹಾದೇವಪ್ಪನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾದೇವಪ್ಪ ನಿಧಿ ತೋರಿಸುವುದಾಗಿ ಹೇಳಿ ಹಣ ವಸೂಲಿ ಮಾಡಿ ನಿಧಿ ತೋರಿಸದೆ ಸತಾಯಿಸಿದ್ದೇ ಮಹಾದೇವಪ್ಪನ ಹತ್ಯೆಗೆ ಕಾರಣ ಎನ್ನಲಾಗಿದೆ. ಅಲ್ಲದೆ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವರದಿ: ಪ್ರಭುಗೌಡ.ಎನ್.ಪಾಟೀಲ, ಟಿವಿ9 ಹಾವೇರಿ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ