AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ರಣಬಿಸಿಲಿಗೆ ತತ್ತರಿಸಿದ ಕೋಳಿ ಸಾಕಾಣಿಕೆ ಉದ್ಯಮ, ಶಾಖಕ್ಕೆ ಕೋಳಿಗಳು ಬಲಿ

ಹಾವೇರಿ ಜಿಲ್ಲೆಯ ಜೀವನಾಡಿ ನದಿಗಳಾದ ತುಂಗಭದ್ರಾ, ಕುಮದ್ವತಿ, ವರದಾ ಹಾಗೂ ಧರ್ಮಾ ನದಿ ಸಂಪೂರ್ಣವಾಗಿ ಖಾಲಿಯಾಗಿವೆ.‌ ದಿನದಿಂದ ದಿನಕ್ಕೆ ಉಷ್ಟಾಂಶ ಹೆಚ್ಚಾಗುತ್ತಿದೆ. ಇದರಿಂದ ಜನ ಮತ್ತು ಜಾನುವಾರು ಜೊತಗೆ ಕೋಳಿ ಉದ್ಯಮ ನಲುಗಿ ಹೋಗಿದೆ. ಪತ್ರಿ ಕೋಳಿಸಾಕಾಣಿಕೆ ಕೇಂದ್ರದಲ್ಲಿ ಒಂದು ಲಕ್ಷ ಕ್ಕೂ ಅಧಿಕ ಕೋಳಿಗಳು ಇವೆ. ಆದರೆ ಬಿಸಿಲಿನತಾಪಕ್ಕೆ ಹೆಚ್ಚಾಗಿದ್ದರಿಂದ ಕೋಳಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.

ಹಾವೇರಿ: ರಣಬಿಸಿಲಿಗೆ ತತ್ತರಿಸಿದ ಕೋಳಿ ಸಾಕಾಣಿಕೆ ಉದ್ಯಮ, ಶಾಖಕ್ಕೆ ಕೋಳಿಗಳು ಬಲಿ
ರಣಬಿಸಿಲಿಗೆ ತತ್ತರಿಸಿದ ಕೋಳಿ ಸಾಕಾಣಿಕೆ ಉದ್ಯಮ, ಶಾಖಕ್ಕೆ ಕೋಳಿಗಳು ಬಲಿ
ಗಂಗಾಧರ​ ಬ. ಸಾಬೋಜಿ
|

Updated on: May 10, 2024 | 7:42 PM

Share

ಹಾವೇರಿ, ಮೇ 10: ಈ ಭಾರಿಯ ರಣಬಿಸಿಲಿಗೆ (Sunlight) ಜನ ಜಾನುವಾರು ತತ್ತರಿಸಿ ಹೋಗಿವೆ. ಅದರಲ್ಲೂ ಇತ್ತೀಚಿಗೆ ಪ್ರತಿನಿತ್ಯ 39 ರಿಂದ 40 ರಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಜನರು ಹೈರಾಣಾಗಿದ್ದು ಒಂದು ಕಡೆಯಾದರೆ, ಈ ಭಾರಿಯ ರಣಬಿಸಿಲಿಗೆ ಕೋಳಿ ಉದ್ಯಮಿದಾರರು (Poultry farming) ತತ್ತರಿಸಿ ಹೋಗಿದ್ದಾರೆ. ರಣಬಿಸಿಲಿಗೆ ಕೋಳಿಗಳು ಸಾವನ್ನಪ್ಪದ್ದು, ಮೊಟ್ಟೆಯ ಉತ್ಪಾದನೆ ಕಡಿಮೆಯಾಗುತ್ತಿದೆ. ಇದರಿಂದ ಕೋಳಿ ಉದ್ಯಮೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಭಾರಿಯ ಬಿಸಿಲಿಗೆ ಜನ, ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಕಂಗೆಟ್ಟು ಹೋಗಿವೆ. ಇದಕ್ಕೆ ಕೋಳಿ ಉದ್ಯಮ ಏನು ಹೊರತಾಗಿಲ್ಲ. ರಣಬಿಸಿಲಿಗೆ ತತ್ತರಿಸಿ ಹೋದ ಸಾವಿರಾರೂ ಕೋಳಿಗಳು ಬಿಸಿಲಿನ ತಾಪಕ್ಕೆ ಸಾವನಪ್ಪುತ್ತಿವೆ.

ತಾಪಮಾನ ಕಡಿಮೆ ಮಾಡಲು ಸ್ಪಿಂಕ್ಲರ್ ಮೂಲಕ ಮೇಲ್ಚಾವಣೆಗೆ ನೀರು ಹಾಕಿದರು ಪ್ರಯೋಜನ ಆಗಿಲ್ಲಾ. ಹಾವೇರಿ ಜಿಲ್ಲೆಯ ಜೀವನಾಡಿ ನದಿಗಳಾದ ತುಂಗಭದ್ರಾ, ಕುಮದ್ವತಿ, ವರದಾ ಹಾಗೂ ಧರ್ಮಾ ನದಿ ಸಂಪೂರ್ಣವಾಗಿ ಖಾಲಿಯಾಗಿವೆ.‌ ದಿನದಿಂದ ದಿನಕ್ಕೆ ಉಷ್ಟಾಂಶ ಹೆಚ್ಚಾಗುತ್ತಿದೆ. ಇದರಿಂದ ಜನ ಮತ್ತು ಜಾನುವಾರು ಜೊತಗೆ ಕೋಳಿ ಉದ್ಯಮ ನಲುಗಿ ಹೋಗಿದೆ.

ಇದನ್ನೂ ಓದಿ: ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ಪತ್ರಿ ಕೋಳಿಸಾಕಾಣಿಕೆ ಕೇಂದ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಕೋಳಿಗಳು ಇವೆ. ಆದರೆ ಬಿಸಿಲಿನತಾಪಕ್ಕೆ ಹೆಚ್ಚಾಗಿದ್ದರಿಂದ ಕೋಳಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಉಷ್ಟಾಂಶ ಹೆಚ್ಚಾಗಿದ್ದರಿಂದ ಕೋಳಿ ಸಾವನ್ನಪ್ಪತ್ತಿದ್ದು, ಅದರ ಜೊತೆಗೆ ಮೊಟ್ಟೆಯ ಉತ್ಪಾದನೆ ಕಡಿಮೆಯಾಗುತ್ತಿದೆ ಅಂತಾರೆ ಮಾಲೀಕರು.

ರಾಯಚೂರು, ಬಳ್ಳಾರಿ, ಸೇರಿದಂತೆ ಹಲವು ಜಿಲ್ಲೆಯಲ್ಲಿ ಉಷ್ಟಾಂಶ ಹೆಚ್ಚಾದಂತೆ ಹಾವೇರಿ ಜಿಲ್ಲೆಯಲ್ಲಿ ರಣಬಿಸಿಲು ಹೆಚ್ಚಾಗಿದೆ.‌ ಪ್ರತಿವರ್ಷ 35 ಡಿಗ್ರಿ ಉಷ್ಟಾಂಶ ಇರುವ ಜಿಲ್ಲೆಯಲ್ಲಿ ಈಗ ಸುಮಾರು 40 ಡಿಗ್ರಿ ಉಷ್ಟಾಂಶ ದಾಖಲಾಗುತ್ತಿದೆ. ಹೀಗಾಗಿ ಕೋಳಿ ಉದ್ಯಮೆದಾರರು ಕೋಳಿಯನ್ನ ಬದುಕಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಕೋಳಿಗಳಿಗೆ ಬೆಳಗ್ಗೆ ಆಹಾರ ನೀಡುವುದು, ಫಾರ್ಮ್ಂ ಮೇಲ್ವಾವಣೆಗೆ ಜೆಟ್ ಮೂಲಕ ನೀರು ಹರಿಸಿ ತಪಾಮಾನ ಕಡಿಮೆ ಮಾಡಿ ಕೋಳಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಆದರೂ ಸಹ ಭಾರಿ ತಾಪಕ್ಕೆ ಕೋಳಿಗಳು ಸಾವನ್ನಪ್ಪಿದ್ದು ಮೊಟ್ಟೆಯ ಉತ್ಪಾದನೆಯಲ್ಲಿ ಕಡಿಮೆಯಾಗಿದೆ.

ಇದನ್ನೂ ಓದಿ: ಮಾವು ಪ್ರಿಯರೇ ಎಚ್ಚರ! ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು

ಈ ಭಾರಿಯ ಬಿರುಬಿಸಲು ಜನ ಮತ್ತು ಜಾನುವಾರು ಅಲ್ಲದೆ ಕೋಳಿ ಉದ್ಯೋಮಕ್ಕೆ ಸಾಕಷ್ಟು ಸಮಸ್ಯೆಯನ್ನ ಉಂಟು ಮಾಡಿದೆ. ಅದರೂ ಕೋಳಿಯ ಉದ್ಯಮೆದಾರರು ಬಿಸಿಲಿನ ತಾಪ ಮತ್ತು ಮೊಟ್ಟೆಗಳ ಬೇಡಿಕೆ ಕಡಿಮೆಯಾಗಿದ್ದರಿಂದ ತತ್ತರಿಸಿ ಹೋಗಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ 9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?