AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು; ಹಾವೇರಿ ಗ್ರಾಮಸ್ಥರಿಂದ ಆಕ್ರೋಶ

ಒಂದು ತಿಂಗಳ ಹಿಂದಷ್ಟೇ ನಿರ್ಮಾಣವಾಗಿರುವ ರಸ್ತೆ ಬಹುತೇಕ ಕಡೆಗಳಲ್ಲಿ ಹಾಳಾಗಿ ಹೋಗಿದೆ. ರಸ್ತೆಯಲ್ಲಿ ಡಾಂಬರು ಕಾಣದಂತಾಗಿದೆ. ಅರ್ಧ ಇಂಚಿನಷ್ಟು ಆಳವಾಗಿ ರಸ್ತೆ ಮೇಲೆ ಕಡಿ, ಡಾಂಬರು ಹಾಕಿಲ್ಲ. ಹೀಗಾಗಿ ರಸ್ತೆ ಈಗಲೆ ಕಿತ್ತು ಹೋಗಿದೆ. ಕಿತ್ತು ಹೋಗಿರುವ ರಸ್ತೆ ನೋಡಿ ಜನರು ಆಕ್ರೋಶಗೊಂಡಿದ್ದಾರೆ.

1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು; ಹಾವೇರಿ ಗ್ರಾಮಸ್ಥರಿಂದ ಆಕ್ರೋಶ
1.5ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ, ಒಂದು ತಿಂಗಳಲ್ಲಿ ಹಾಳು
TV9 Web
| Edited By: |

Updated on:Jul 06, 2021 | 1:17 PM

Share

ಹಾವೇರಿ: ಇತ್ತೀಚೆಗೆ ಕಳಪೆ ಕಾಮಗಾರಿ ಬಗ್ಗೆ ಸಾಕಷ್ಟು ವರದಿಗಳು ದಾಖಲಾಗಿರುವ ಬಗ್ಗೆ ನಾವು ಓದ್ದಿದ್ದೇವೆ. ಅಂತಹದ್ದೇ ಘಟನೆಯೊಂದು ಸದ್ಯ ಹಾವೇರಿಯಲ್ಲಿ ನಡೆದಿದ್ದು, ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ. ಕೇವಲ ಒಂದೇ ತಿಂಗಳಲ್ಲಿ ಕಿತ್ತು ಹೋಗಿದೆ. ರಸ್ತೆ ಮೇಲೆ ಸ್ವಲ್ಪೇ ಸ್ವಲ್ಪ ಕೈಯಿಂದ ಅಲುಗಾಡಿಸಿದರೆ ಸಾಕು, ರಸ್ತೆ ಕಿತ್ತು ಬರುತ್ತಿದೆ. ಅಲ್ಲದೆ ಅಲ್ಲಲ್ಲಿ ಸಣ್ಣ ಸಣ್ಣ ಗುಂಡಿಗಳು ಬಿದ್ದಿವೆ. ಇದು ಸಹಜವಾಗಿಯೇ ಈ ಭಾಗದ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಿಂದ ಹೊಸರಿತ್ತಿ ಗ್ರಾಮದವರೆಗಿನ 6 ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು. ಹೀಗಾಗಿ ಗ್ರಾಮಸ್ಥರು ರಸ್ತೆ ಕಾಮಗಾರಿ ಮಾಡುವಂತೆ ಒತ್ತಾಯಿಸಿದ್ದಾರೆ. ಅದರಂತೆ ಪಿಆರ್​ಡಿ ಯೋಜನೆಯಡಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ. ಗುತ್ತಿಗೆದಾರರು ಈಗಾಗಲೇ ರಸ್ತೆ ನಿರ್ಮಾಣ ಕಾಮಗಾರಿ ಮುಗಿಸಿದ್ದಾರೆ. ಈ ರಸ್ತೆ ನಿರ್ಮಾಣವಾಗಿ 1 ತಿಂಗಳು ಕಳೆದಿದೆ. ಆದರೆ ಅದಾಗಲೇ ರಸ್ತೆ ಅಲ್ಲಲ್ಲಿ ಕಿತ್ತು ಹೋಗಿದೆ. ರಸ್ತೆಯಲ್ಲಿ ಸಣ್ಣ ಗುಂಡಿಗಳು ಬಿದ್ದಿವೆ ಎಂದು ಗ್ರಾಮ ಪಂಚಾಯತಿ ಸದಸ್ಯ ನಾಗಣ್ಣ ಕೋಣನವರ ಬೇಸರ ವ್ಯಕ್ತಪಡಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ನಿರ್ಮಾಣವಾಗಿರುವ ರಸ್ತೆ ಬಹುತೇಕ ಕಡೆಗಳಲ್ಲಿ ಹಾಳಾಗಿ ಹೋಗಿದೆ. ರಸ್ತೆಯಲ್ಲಿ ಡಾಂಬರು ಕಾಣದಂತಾಗಿದೆ. ಅರ್ಧ ಇಂಚಿನಷ್ಟು ಆಳವಾಗಿ ರಸ್ತೆ ಮೇಲೆ ಕಡಿ, ಡಾಂಬರು ಹಾಕಿಲ್ಲ. ಹೀಗಾಗಿ ರಸ್ತೆ ಈಗಲೆ ಕಿತ್ತು ಹೋಗಿದೆ. ಕಿತ್ತು ಹೋಗಿರುವ ರಸ್ತೆ ನೋಡಿ ಜನರು ಆಕ್ರೋಶಗೊಂಡಿದ್ದಾರೆ. ಒಂದೂವರೆ ಕೋಟಿ ರೂಪಾಯಿಯ ಹಣಕ್ಕೆ ಟೆಂಡರ್ ಪಡೆದಿರುವ ಗುತ್ತಿಗೆದಾರರು ಅಲ್ಪಸ್ವಲ್ಪ ಹಣ ಖರ್ಚು ಮಾಡಿ ಕಾಮಗಾರಿ ಮುಗಿಸಿದ್ದಾರೆ.

ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿದ್ದಕ್ಕೆ ಗುತ್ತಿಗೆದಾರರೊಬ್ಬರು, ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಕೇಸ್ ದಾಖಲಿಸೋದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಗ್ರಾಮದ ಜನರು ಕಳಪೆ ರಸ್ತೆ ಮಾಡಿದ್ದಾರೆ ಎಂದು ಪಿಆರ್​ಡಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಅಧಿಕಾರಿಗಳು ಕೂಡಲೆ ಸ್ಥಳಕ್ಕೆ ಭೇಟಿ ನೀಡಿ ಆಗಿರುವ ಕಾಮಗಾರಿ ಪರಿಶೀಲನೆ ಮಾಡಬೇಕು. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಚನ್ನಬಸಪ್ಪ ಹಂಸಿ ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ರಸ್ತೆ ಹದಗೆಟ್ಟು ಹೋಗಿದ್ದರಿಂದ ರಸ್ತೆಯಲ್ಲಿ ಓಡಾಡೋಕೆ ಜನರು ಹರಸಾಹಸ ಪಡುತ್ತಿದ್ದರು. ಆದರೆ ಈಗ ರಸ್ತೆ ನಿರ್ಮಾಣ ಆಯ್ತು ಎಂದು ಖುಷಿಪಟ್ಟಿದ್ದ ಗ್ರಾಮಸ್ಥರಿಗೆ ಮತ್ತೆ ಬೇಸರವಾಗಿದೆ. ಕಳಪೆ ಕಾಮಗಾರಿಯಿಂದಾಗಿ ನಿರ್ಮಾಣವಾದ ಒಂದೇ ತಿಂಗಳಲ್ಲಿ ರಸ್ತೆ ಅಲ್ಲಲ್ಲಿ ಕಿತ್ತು ಹಾಳಾಗಿದೆ. ಒಂದೇ ತಿಂಗಳಲ್ಲಿ ರಸ್ತೆಯ ಪರಿಸ್ಥಿತಿ ಹೀಗಾದರೆ ಇನ್ನಷ್ಟು ದಿನಗಳ ನಂತರ ಈ ರಸ್ತೆಯಲ್ಲಿ ಓಡಾಡೋದು ಹೇಗೆ ಎಂದು ಈ ಭಾಗದ ಜನರಿಗೆ ಚಿಂತೆಯಾಗಿದೆ. ಹೀಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಸೂಕ್ತ.

ಇದನ್ನೂ ಓದಿ: ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ; 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆ ನಿರ್ಮಾಣಕ್ಕೆ ಮನವಿ

ಕೋಟೆನಾಡಿನಲ್ಲಿ ಮುಗಿಯದ ರಸ್ತೆ ಕಾಮಗಾರಿ: ಹೆಚ್ಚಿನ ಧೂಳಿನಿಂದ ಸೃಷ್ಟಿಯಾಯ್ತು ಕೊರೊನಾ ಆತಂಕ

Published On - 1:17 pm, Tue, 6 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್