AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಜಿಲ್ಲೆಯ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಅಲ್ಲಿ ಆಪರೇಶನ್, ಇಲ್ಲಿ ಆರೈಕೆ ಎಂಬ ಸ್ಥಿತಿ ನಿರ್ಮಾಣ; ಸೂಕ್ತ ಚಿಕಿತ್ಸೆಗಾಗಿ ಜನರ ಪರದಾಟ

ಜಿಲ್ಲಾಸ್ಪತ್ರೆಯಲ್ಲಿನ ಇಎನ್​ಟಿ ಸರ್ಜನ್ ರನ್ನು ಜುಲೈ 1ರಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬ್ಲ್ಯಾಕ್ ಫಂಗಸ್ ಸರ್ಜರಿಗೆ ಸಂಬಂಧಿಸಿದ ತರಬೇತಿಗೆ ಕಳಿಸಲಾಗಿದೆ. 15 ದಿನಗಳ ತರಬೇತಿ ಪಡೆದುಕೊಂಡು ಅವರು ವಾಪಸ್ ಬಂದ ಮೇಲೆ ಜಿಲ್ಲಾಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಜರಿ ಮಾಡಲಾಗುತ್ತದೆ. ಆ ವೇಳೆಗೆ ಜಿಲ್ಲಾಸ್ಪತ್ರೆಗೆ ಎಂಡೋಸ್ಕೋಪಿ ಬರುತ್ತದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಅಲ್ಲಿ ಆಪರೇಶನ್, ಇಲ್ಲಿ ಆರೈಕೆ ಎಂಬ ಸ್ಥಿತಿ ನಿರ್ಮಾಣ; ಸೂಕ್ತ ಚಿಕಿತ್ಸೆಗಾಗಿ ಜನರ ಪರದಾಟ
ಹಾವೇರಿ ಜಿಲ್ಲಾಸ್ಪತ್ರೆ
TV9 Web
| Edited By: |

Updated on: Jun 29, 2021 | 11:29 AM

Share

ಹಾವೇರಿ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡುವ ವ್ಯವಸ್ಥೆ ಮಾಡಿಕೊಳ್ಳುವಂತೆ ಸರಕಾರ ಜಿಲ್ಲಾಡಳಿತಗಳಿಗೆ ಸೂಚಿಸಿತ್ತು. ಅದರಂತೆ ಬಹುತೇಕ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗಾಗಿಯೇ ಪ್ರತ್ಯೇಕ ಬೆಡ್​ಗಳು ಮತ್ತು ಪ್ರತ್ಯೇಕ ವಾರ್ಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಅಲ್ಲಿನ ಸೋಂಕಿತರಿಗೆ ಅಲ್ಲಿಯ ಜಿಲ್ಲಾಸ್ಪತ್ರೆಗಳಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಹಾವೇರಿ ಜಿಲ್ಲೆಯಲ್ಲಿನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಮಾತ್ರ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ.

ಜಿಲ್ಲೆಯಲ್ಲಿ ಕೊರೊನಾ ಎರಡನೆ ಅಲೆ ಸಾಕಷ್ಟು ಜನರನ್ನು ಬಲಿ ಪಡೆದಿದೆ. ಅದರ ಜತೆ ಜತೆಗೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಕೂಡ ಬೆಂಬಿಡದೆ ಕಾಡುತ್ತಿದೆ. ಈವರೆಗೆ 53 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿದ್ದು, ಸೂಕ್ತ ಚಿಕಿತ್ಸೆ ಕೂಡ ಸಿಗುತ್ತಿಲ್ಲ. ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಅಲ್ಲಿ ಆಪರೇಶನ್, ಇಲ್ಲಿ ಆರೈಕೆ ಎನ್ನುವಂತಾಗಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಿಂದ ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತು ದಾವಣಗೆರೆಯ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತೆ ವೈದ್ಯರು ಸೂಚಿಸುತ್ತಿದ್ದಾರೆ.

ಇನ್ನೊಂದು ಕಡೆ ಹೀಗೆ ಹಾವೇರಿಯಿಂದ ಹೋದ ಜನರಿಗೆ ಜಿಲ್ಲೆಯ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಆಯಾ ಜಿಲ್ಲೆಯಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ವಾಪಸ್ ಕಳಿಸಿದ ಘಟನೆಗಳೂ ನಡೆದಿವೆ. ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರು ಇಲ್ಲದ ಕಾರಣಕ್ಕೆ ಬ್ಲ್ಯಾಕ್ ಫಂಗಸ್ ಸೋಂಕಿತರನ್ನು ಹುಬ್ಬಳ್ಳಿಯ ಕಿಮ್ಸ್ ಮತ್ತು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕಾಣಿಸಿಕೊಂಡ53 ಪ್ರಕರಣಗಳ ಪೈಕಿ ಸರ್ಜರಿ ಅಗತ್ಯವಿದ್ದ 21 ಪ್ರಕರಣಗಳು ಹುಬ್ಬಳ್ಳಿ ಮತ್ತು ದಾವಣಗೆರೆಗೆ ರೆಫರ್ ಆಗಿವೆ. ಶಸ್ತ್ರಚಿಕಿತ್ಸೆಗೆ ರೆಫರ್ ಆಗಿದ್ದ ಇಬ್ಬರು ಸೋಂಕಿತರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಳಿದಂತೆ 9 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ 21 ಜನ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈಗಲೂ ಜಿಲ್ಲಾಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಸೂಕ್ತ ಚಿಕಿತ್ಸೆ ನೀಡುವುದಕ್ಕೆ, ಆಪರೇಶನ್ ಮಾಡುವುದಕ್ಕೆ ತಜ್ಞ ವೈದ್ಯರಿಲ್ಲ. ಜಿಲ್ಲಾಸ್ಪತ್ರೆಯಲ್ಲಿನ ಇಎನ್​ಟಿ ಸರ್ಜನ್ ರನ್ನು ಜುಲೈ 1ರಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬ್ಲ್ಯಾಕ್ ಫಂಗಸ್ ಸರ್ಜರಿಗೆ ಸಂಬಂಧಿಸಿದ ತರಬೇತಿಗೆ ಕಳಿಸಲಾಗಿದೆ. 15 ದಿನಗಳ ತರಬೇತಿ ಪಡೆದುಕೊಂಡು ಅವರು ವಾಪಸ್ ಬಂದ ಮೇಲೆ ಜಿಲ್ಲಾಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಜರಿ ಮಾಡಲಾಗುತ್ತದೆ. ಆ ವೇಳೆಗೆ ಜಿಲ್ಲಾಸ್ಪತ್ರೆಗೆ ಎಂಡೋಸ್ಕೋಪಿ ಬರುತ್ತದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಆರ್ಭಟದ ಕೊನೆಯ ದಿನಗಳಲ್ಲಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಶುರುವಾಗಿದೆ. ಬ್ಲ್ಯಾಕ್ ಫಂಗಸ್​ಗೆ ಜಿಲ್ಲೆಯಲ್ಲಿ ಈವರೆಗೆ ಇಬ್ಬರು ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿಯೇ ಎಲ್ಲ ರೀತಿಯ ಚಿಕಿತ್ಸೆ, ಆರೈಕೆ, ಸರ್ಜರಿ ಸಿಗುವಂತೆ ಮಾಡುತ್ತೇವೆ ಎಂದು ಜಿಲ್ಲಾಡಳಿತ ಹೇಳುತ್ತಲೆ ಬಂದಿತ್ತು. ಆದರೆ ಈವರೆಗೂ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಾದರೂ ಈ ಪರಿಸ್ಥಿತಿ ಸುಧಾರಿಸಬೇಕಿದೆ.

ಇದನ್ನೂ ಓದಿ:

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗಡಿಪಡಿಸಿದ ಸರ್ಕಾರ; ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಸಿಗ್ತಿಲ್ಲ; ಕೊರತೆ ನೀಗಲು ತಕ್ಷಣ ಅದರ ಉತ್ಪಾದನೆಗೆ ಅಸ್ತು ಎಂದ ಸಚಿವ ನಿತಿನ್ ಗಡ್ಕರಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ