Haveri Road Accident: ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣಡ ಮಾಡಿದ್ದಾರೆ.

Haveri Road Accident: ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
Follow us
|

Updated on:Jun 28, 2024 | 2:26 PM

ಹಾವೇರಿ, ಜೂನ್​ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು.

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

ಇದನ್ನೂ ಓದಿ: ಅಪಘಾತಕ್ಕೀಡಾದ ಟಿಟಿಯನ್ನು ಆದರ್ಶ್ ಕೇವಲ 15ದಿನಗಳ ಹಿಂದೆ ಖರೀದಿಸಿದ್ದ: ಸುಮಂತ್, ಅದರ್ಶ್ ಸೋದರ

ಸಂತಾಪ ಸೂಚಿಸಿದ ಕೇಂದ್ರ ಸಚಿವ ಜೋಶಿ

ಮುಂಜಾನೆ ಹಾವೇರಿ ಜಿಲ್ಲೆ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ 13 ಜನರು ಸಾವೀಗಿಡಾದ ಸುದ್ದಿ ತಿಳಿದು ಬಹಳ ದುಃಖವಾಗಿದೆ. ರಾಜ್ಯ ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ಸಂಸದ ಬೊಮ್ಮಾಯಿ ಸಂತಾಪ

ಇಂದು (ಜೂ.28) ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಬಸವರಾಜ್​ ಬೊಮ್ಮಾಯಿ ಸಂತಾಪ ಸೂಚಿಸಿದರು.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಬಿವೈ ವಿಜಯೇಂದ್ರ ಸಂತಾಪ

ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸೇರಿ 13 ಜನ ಮೃತಪಟ್ಟ ಘಟನೆ ಮಮ್ಮಲ ಮರುಗುವಂತೆ ಮಾಡಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು ಮೃತರ ಕುಟುಂಬಕ್ಕೆ ಆಘಾತ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅಗಲಿದ ಆತ್ಮಗಳಿಗೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂತಾಪ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Fri, 28 June 24

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?