ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ಅಪಘಾತ ಸಂಭವಿಸಿದ್ದು, ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ಘಟನೆ ಅವಘಡ ಸಂಭವಿಸಿದೆ.

ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು
ಹಾವೇರಿ: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವು

Updated on: Sep 21, 2024 | 8:52 PM

ಹಾವೇರಿ, ಸೆಪ್ಟೆಂಬರ್ 21: ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (died) ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48ರ ಬ್ರಿಡ್ಜ್‌ ಬಳಿ ನಡೆದಿದೆ. ಸಿದ್ದು(24) ಹಾಗೂ ಪ್ರೀತಮ್‌(25) ಮೃತ ಕೂಲಿ ಕಾರ್ಮಿಕರು. ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದ್ದಾಗ ರೋಲರ್ ಹರಿದು ಸಾವನ್ನಪ್ಪಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲೇ ಶವವಿಟ್ಟು ಕುಟುಂಬಸ್ಥರು, ಜನರಿಂದ ಪ್ರತಿಭಟನೆ ಮಾಡಲಾಗಿದೆ. ಸ್ಥಳಕ್ಕೆ ಗುತ್ತಿಗೆದಾರರು ಬರುವವರೆಗೂ ಶವ ಸ್ಥಳಾಂತರಿಸದಿರಲು ನಿರ್ಧಾರ ಮಾಡಲಾಗಿದೆ. ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಲು ಒತ್ತಾಯಿಸಲಾಗಿದೆ. ಸದ್ಯ ಬಿಗುವಿನ ವಾತಾವರಣ ಹಿನ್ನೆಲೆ ಸ್ಥಳಕ್ಕೆ ಎಸ್​ಪಿ ಭೇಟಿ ನೀಡಿದ್ದಾರೆ.

ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸರಿಂದ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಸಂದೀಪ್(23), ಅಖಿಲ್(22), ಆಕಾಶ್(21) ಬಂಧಿತ ಗಾಂಜಾ ಪೆಡ್ಲರ್ಸ್‌. 6 ಕೆ.ಜಿಗೂ ಹೆಚ್ಚು ಗಾಂಜಾ, 20 ಗ್ರಾಂ ಹೈಡ್ರೋ ಗಾಂಜಾ, ನಗದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಕೇರಳದಿಂದ ರೈಲಿನ ಮುಖಾಂತರ ಬೆಂಗಳೂರಿಗೆ ಗಾಂಜಾ ತರುತ್ತಿದ್ದ ಗ್ಯಾಂಗ್, ಹೊರ ರಾಜ್ಯದವರನ್ನೇ ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಮತ್ತೊಬ್ಬ ಪ್ರಮುಖ ಅರೋಪಿ ಅಲ್ತಾಫ್ ಪತ್ತೆಗಾಗಿ ಪೊಲೀಸರಿಂದ ಶೋಧ ಮಾಡಲಾಗುತ್ತಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾರ್​ನಲ್ಲಿ ಕುಳಿತ ವ್ಯಕ್ತಿಗೆ ಚಾಕು ಇರಿತ: ಸಾವು

ದಾವಣಗೆರೆ: ನಿಟವಳ್ಳಿ ರಸ್ತೆಯ ಕೆಟಿಜೆ ನಗರದಲ್ಲಿರುವ ಪ್ರಕಾಶ್ ಬಾರ್​ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಕುಮಾರ (35) ಎಂಬಾತ ಸಾವನ್ನಪ್ಪಿದ್ದಾನೆ. ಬಾರ್​ನಲ್ಲಿ ಕುಳಿತಿದ್ದಾಗ ಹಿಂದಿನಿಂದ ಬಂದು ಗೌತಮ್ ಎಂಬಾತ ಚಾಕು ಚುಚ್ಚಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದರೂ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ.

ಇದನ್ನೂ ಓದಿ: ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಪೊಲೀಸರು ತಮ್ಮ ಜೀಪ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಕುಮಾರ ಕೊನೆಯುಸಿರೆಳೆದಿದ್ದಾರೆ. ಕೊಲೆ ಆರೋಪಿ ಗೌತಮ್​​ನನ್ನ ಕೆಟಿಜೆ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:43 pm, Sat, 21 September 24

Follow Us