AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಕಾಟ ಕೊಡುವ ಹುಡುಗರು; ಪೋಷಕರಿಗೆ, ಶಿಕ್ಷಕರಿಗೆ ತಲೆಬಿಸಿ

ವಿದ್ಯಾರ್ಥಿನಿಯರು ಶಾಲಾ, ಕಾಲೇಜು ಗೇಟ್​ನ ಹೊರಬಂದರೆ ಸಾಕು ಹಿಂದೆ ಬೀಳುವ ಪಡ್ಡೆ ಹುಡುಗರಿಂದ ಕಿರಿಕಿರಿ ಆರಂಭವಾಗುತ್ತದೆ. ಇದು ಮಕ್ಕಳ ಪೋಷಕರಿಗೆ ಹಾಗೂ ಶಿಕ್ಷಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಕಾಟ ಕೊಡುವ ಹುಡುಗರು; ಪೋಷಕರಿಗೆ, ಶಿಕ್ಷಕರಿಗೆ ತಲೆಬಿಸಿ
ಸವಣೂರ ಬಸ್ ನಿಲ್ದಾಣ
TV9 Web
| Edited By: |

Updated on:Oct 29, 2022 | 8:20 AM

Share

ಹಾವೇರಿ: ಕೆಲವೊಂದಿಷ್ಟು ಪಡ್ಡೆ ಹುಡುಗರು ಶಾಲೆ, ಕಾಲೇಜು ಮುಗಿಸಿ ಬರುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದು ಕೀಟಲೆ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರು ಬಸ್​ನಿಂದ‌ ಇಳಿದು ಶಾಲೆ, ಕಾಲೇಜಿಗೆ ಬರುವಾಗ ಮತ್ತು ಶಾಲೆ ಕಾಲೇಜು ಮುಗಿಸಿ ಮರಳಿ ಊರಿಗೆ ಹೋಗೋವಾಗ ಬೈಕ್ ಮೇಲೆ ಹುಡುಗಿಯರನ್ನು ಹಿಂಬಾಲಿಸಿ ಬರುವ ಪಡ್ಡೆ ಹುಡುಗರ ಕಾಟಕ್ಕೆ ವಿದ್ಯಾರ್ಥಿನಿಯರು ಮಾತ್ರವಲ್ಲ ಅವರ ಪೋಷಕರಿಗೆ ಮತ್ತು ಶಿಕ್ಷಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಪಡ್ಡೆ ಹುಡುಗರ ಈ ಕಾಟ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಹೆಚ್ಚಾಗಿದೆ. ಪಟ್ಟಣದಲ್ಲಿ ಹಲವಾರು ಶಾಲೆ ಮತ್ತು ಕಾಲೇಜುಗಳಿವೆ. ಇಲ್ಲಿಗೆ ವಿದ್ಯಾರ್ಜನೆಗೆಂದು ಬರುವ ಬಹುತೇಕ ವಿದ್ಯಾರ್ಥಿನಿಯರು ಸಾರಿಗೆ ಬಸ್​ಗಳಲ್ಲೇ ಬರುತ್ತಾರೆ. ಆದರೆ ಬಸ್​ಗಳಲ್ಲಿ ಬರುವ ವಿದ್ಯಾರ್ಥಿನಿಯರಿಗೆ ಪಡ್ಡೆ ಹುಡುಗರ ಕಾಟ ಶುರುವಾಗಿದೆ.

ವಿದ್ಯಾರ್ಥಿನಿಯರು ಶಾಲೆ, ಕಾಲೇಜಿಗೆ ಬರುವಾಗ ಮತ್ತು ಶಾಲೆ, ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗಲು ಬಸ್ ನಿಲ್ದಾಣಕ್ಕೆ ಬರುವಾಗ ಅವರನ್ನು ಹಿಂಬಾಲಿಸಿಕೊಂಡು ಬಂದು ಕೀಟಲೆ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಅಸಭ್ಯವಾಗಿ ಮಾತನಾಡೋದು, ಅನುಚಿತವಾಗಿ ವರ್ತಿಸೋದು ಮಾಡಲಾಗುತ್ತಿದೆ. ಹೀಗಾಗಿ ಶಾಲೆ, ಕಾಲೇಜಿಗೆ ಬರುವಾಗ ಮತ್ತು ಶಾಲೆ, ಕಾಲೇಜು ಮುಗಿಸಿ ಊರಿಗೆ ವಾಪಸ್ ಬಸ್ ಹತ್ತುವವರೆಗೆ ಆಯಾ ಶಾಲೆ, ಕಾಲೇಜಿನ ಶಿಕ್ಷಕರು ಬಸ್ ನಿಲ್ದಾಣಕ್ಕೆ ಬಂದು ವಿದ್ಯಾರ್ಥಿನಿಯರನ್ನು ಬಸ್​ನಲ್ಲಿ ಕೂರಿಸಿ, ಬಸ್ಸು ನಿಲ್ದಾಣದಿಂದ ಬಿಟ್ಟ ಮೇಲೆ ವಾಪಸ್ ಹೋಗುವಂಥಾ ಪರಿಸ್ಥಿತಿ ನಿರ್ಮಾಣ ಆಗಿದೆ. ಪಡ್ಡೆ ಹುಡುಗರ ಕಾಟ ವಿದ್ಯಾರ್ಥಿನಿಯರು ಮಾತ್ರವಲ್ಲ ಶಾಲಾ,‌ ಕಾಲೇಜು ಶಿಕ್ಷಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪ್ರತಿದಿನ ಸಾವಿರಾರು ವಿದ್ಯಾರ್ಥಿನಿಯರು ಗ್ರಾಮೀಣ ಪ್ರದೇಶಗಳಿಂದ ಪಟ್ಟಣದಲ್ಲಿನ ಶಾಲಾ, ಕಾಲೇಜುಗಳಿಗೆ ಅಕ್ಷರ ಅರಸಿಕೊಂಡು ಬರುತ್ತಿದ್ದಾರೆ. ಒಂದು ರೀತಿಯಲ್ಲಿ ಪುಂಡ ಪೋಕರಿಗಳ ತಾಣದಂತಿರುವ ಸವಣೂರು ಬಸ್ ನಿಲ್ದಾಣ ಬರುತ್ತಿದ್ದಂತೆ ಪಡ್ಡೆ ಹುಡುಗರ ಕಾಟ ಶುರುವಾಗುತ್ತದೆ. ಬೈಕ್​ನಲ್ಲಿ ಇಬ್ಬರು, ಮೂವರು ಕುಳಿತು ಬರುವ ಹುಡುಗರು ಹುಡುಗಿಯರ ಹಿಂದೆ, ಮುಂದೆ ಬೈಕ್​ನಲ್ಲಿ ಹೋಗಿ ಚುಡಾಯಿಸಲು ಆರಂಭಿಸುತ್ತಾರೆ. ಶಾಲಾ, ಕಾಲೇಜು ಶಿಕ್ಷಕರು ಹಲವಾರು ಬಾರಿ ಹುಡುಗಿಯರನ್ನು ಚುಡಾಯಿಸುವ ಹುಡುಗರಿಗೆ ಎಚ್ಚರಿಕೆ ನೀಡಿದರೂ ಹುಡುಗಿಯರನ್ನು ಚುಡಾಯಿಸುವುದು ಮಾತ್ರ ಇನ್ನೂ ನಿಂತಿಲ್ಲ.

ಕೆಲವು ಶಾಲೆ, ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಬಸ್ ನಿಲ್ದಾಣದಲ್ಲಿ ಪುಂಡ ಪೋಕರಿಗಳಿಂದ ಶಾಲೆ, ಕಾಲೇಜಿಗೆ ಬಂದು ಹೋಗುವ ವಿದ್ಯಾರ್ಥಿನಿಯರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಬಸ್ ನಿಲ್ದಾಣದಲ್ಲಿ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೂ ಕೆಲವು ಶಾಲೆ, ಕಾಲೇಜುಗಳ ಶಿಕ್ಷಕರು ಪತ್ರ ಬರೆದಿದ್ದಾರೆ‌. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರಿಗೆ ಯಾವುದೇ ಭದ್ರತೆ ಇಲ್ಲದಾಗಿದ್ದು, ಪುಂಡ ಪೋಕರಿಗಳ ಕಾಟ ತಪ್ಪುತ್ತಿಲ್ಲ. ಕೂಡಲೇ ಸಂಬಂಧಿಸಿದ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಕರು ಒತ್ತಾಯಿಸಿದ್ದಾರೆ.

ವರದಿ: ಪ್ರಭುಗೌಡ.ಎನ್.ಪಾಟೀಲ ಟಿವಿ9 ಹಾವೇರಿ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 am, Sat, 29 October 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್