AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಹಾವೇರಿ ತಾಲ್ಲೂಕಿನಲ್ಲಿ 10 ಬಳಕೆಯಾಗದ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಇದು ಅನುಮಾನಕ್ಕೆ ಕಾರಣವಾಗಿದ್ದರೂ, ಜಿಲ್ಲಾಡಳಿತವು ಈ ಬಾಕ್ಸ್‌ಗಳು ಹಳೆಯದಾಗಿದ್ದು, ಉಪಚುನಾವಣೆಯೊಂದಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
ಬ್ಯಾಲೆಟ್ ಬಾಕ್ಸ್‌ಗಳು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 14, 2024 | 1:07 PM

Share

ಹಾವೇರಿ, ನವೆಂಬರ್​ 14: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Shiggaon Assembly Election Polls) ನಡೆದು ಮರುದಿನವೇ ಹಾವೇರಿ (Haveri) ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿವೆ. ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.

ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್​ ಬಾಕ್ಸ್​ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್​ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?

ಇನ್ನು, ಬಳಕೆಯಲ್ಲಿ ಇಲ್ಲದ ಬ್ಯಾಲೆಟ್ ಬಾಕ್ಸ್​ಗಳನ್ನು ಇಟ್ಟಿದ್ದ ಗೋದಾಮಿಗೆ ಭೇಟಿ ನೀಡಿದ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಕಂದಾಯ ಇಲಾಖೆಯವರಿಂದ ದೂರು ಪಡೆದು ತನಿಖೆ ಮುಂದುವರೆಸಿದ್ದಾರೆ.

ಶಿಗ್ಗಾವಿ ಉಪಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಬಳಕೆಯಲ್ಲಿದ್ದ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ