AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಹಾವೇರಿ ತಾಲ್ಲೂಕಿನಲ್ಲಿ 10 ಬಳಕೆಯಾಗದ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಇದು ಅನುಮಾನಕ್ಕೆ ಕಾರಣವಾಗಿದ್ದರೂ, ಜಿಲ್ಲಾಡಳಿತವು ಈ ಬಾಕ್ಸ್‌ಗಳು ಹಳೆಯದಾಗಿದ್ದು, ಉಪಚುನಾವಣೆಯೊಂದಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
ಬ್ಯಾಲೆಟ್ ಬಾಕ್ಸ್‌ಗಳು
ವಿವೇಕ ಬಿರಾದಾರ
|

Updated on: Nov 14, 2024 | 1:07 PM

Share

ಹಾವೇರಿ, ನವೆಂಬರ್​ 14: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Shiggaon Assembly Election Polls) ನಡೆದು ಮರುದಿನವೇ ಹಾವೇರಿ (Haveri) ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿವೆ. ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.

ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್​ ಬಾಕ್ಸ್​ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್​ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?

ಇನ್ನು, ಬಳಕೆಯಲ್ಲಿ ಇಲ್ಲದ ಬ್ಯಾಲೆಟ್ ಬಾಕ್ಸ್​ಗಳನ್ನು ಇಟ್ಟಿದ್ದ ಗೋದಾಮಿಗೆ ಭೇಟಿ ನೀಡಿದ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಕಂದಾಯ ಇಲಾಖೆಯವರಿಂದ ದೂರು ಪಡೆದು ತನಿಖೆ ಮುಂದುವರೆಸಿದ್ದಾರೆ.

ಶಿಗ್ಗಾವಿ ಉಪಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಬಳಕೆಯಲ್ಲಿದ್ದ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?