AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ ಮುಗಿದ ಬೆನ್ನಲ್ಲೇ ಹಾವೇರಿ ತಾಲ್ಲೂಕಿನಲ್ಲಿ 10 ಬಳಕೆಯಾಗದ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಇದು ಅನುಮಾನಕ್ಕೆ ಕಾರಣವಾಗಿದ್ದರೂ, ಜಿಲ್ಲಾಡಳಿತವು ಈ ಬಾಕ್ಸ್‌ಗಳು ಹಳೆಯದಾಗಿದ್ದು, ಉಪಚುನಾವಣೆಯೊಂದಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಮತದಾನ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
ಬ್ಯಾಲೆಟ್ ಬಾಕ್ಸ್‌ಗಳು
ವಿವೇಕ ಬಿರಾದಾರ
|

Updated on: Nov 14, 2024 | 1:07 PM

Share

ಹಾವೇರಿ, ನವೆಂಬರ್​ 14: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Shiggaon Assembly Election Polls) ನಡೆದು ಮರುದಿನವೇ ಹಾವೇರಿ (Haveri) ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್​ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿವೆ. ಬುಧವಾರವಷ್ಟೇ ಶಿಗ್ಗಾಂವಿ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ.

ಈ ವಿಚಾರವಾಗಿ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಶಿಗ್ಗಾಂವಿ ಉಪಚುನಾವಣೆಗೂ ಮತ್ತು ಈ ಬ್ಯಾಲೆಟ್​ ಬಾಕ್ಸ್​ಗಳಿಗೂ ಸಂಬಂಧ ಇಲ್ಲ. ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಈ ಬ್ಯಾಲೆಟ್ ಬಾಕ್ಸಗಳು ನಿರುಪಯಕ್ತವಾಗಿದ್ದವು. ಹಲವು ವರ್ಷಗಳಿಂದ ಬಳಕೆಯಾಗಿರಲಿಲ್ಲ. ಹೀಗಾಗಿ, ಎಪಿಎಂಸಿಯಲ್ಲಿರುವ ಒಂದು ಹಳೆ ಗೋದಾಮಿನಲ್ಲಿ ಇಡಲಾಗಿದೆ ಎಂದು ತಿಳಿಸಿದರು.

ಹಲವು ವರ್ಷಗಳ ಹಿಂದೆಯೇ ಗೋದಾಮಿನಲ್ಲಿ ತಂದಿಡಲಾಗಿತ್ತು. ಕಿಡಿಗೇಡಿಗಳು ಬಾಕ್ಸ್​ಗಳನ್ನು ಮಾರುವ ಉದ್ದೇಶದಿಂದ ಕಳ್ಳತನ ಮಾಡಿದ್ದಾರೆ. ಆದರೆ, ಸಾಗಿಸಲು ಸಾಧ್ಯವಾಗದೇ, ಕಿಡಿಗೇಡಿಗಳು ನ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?

ಇನ್ನು, ಬಳಕೆಯಲ್ಲಿ ಇಲ್ಲದ ಬ್ಯಾಲೆಟ್ ಬಾಕ್ಸ್​ಗಳನ್ನು ಇಟ್ಟಿದ್ದ ಗೋದಾಮಿಗೆ ಭೇಟಿ ನೀಡಿದ ಪೊಲೀಸರು ಮತ್ತು ಹಾವೇರಿ ತಹಶೀಲ್ದಾರ್ ಶರಣಮ್ಮ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಕಂದಾಯ ಇಲಾಖೆಯವರಿಂದ ದೂರು ಪಡೆದು ತನಿಖೆ ಮುಂದುವರೆಸಿದ್ದಾರೆ.

ಶಿಗ್ಗಾವಿ ಉಪಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಬಳಕೆಯಲ್ಲಿದ್ದ ಬ್ಯಾಲೆಟ್ ಬಾಕ್ಸ್​ಗಳು ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ