AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ

ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ 25 ಲಕ್ಷ ರೂಪಾಯಿ ವಂಚಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ. ಕರಣ್, ಪ್ರವೀಣ್ ಬಂಧಿತ ಆರೋಪಿಗಳು. ಇವರಿಂದ 12 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ
ನಕಲಿ ಚಿನ್ನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 26, 2023 | 10:55 PM

Share

ಹಾವೇರಿ, ಸೆ.26: ಚಿನ್ನ (Gold)ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಅದರಲ್ಲೂ ಕಡಿಮೆ ಬೆಲೆಗೆ ಚಿನ್ನ ಸಿಗುತ್ತದೆ ಅಂದರೆ, ಕೊಂಡುಕೊಳ್ಳುವುದು ಬಿಡುವುದಿಲ್ಲ. ಹಾಗೇನಾದರೂ ಇದ್ದರೆ, ಹುಷಾರ್​ ಆಗಿರುವುದು ಒಳ್ಳೆಯದು. ಹೌದು, ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ಬೆಂಗಳೂರು ಮೂಲದ ಲಕ್ಷ್ಮಣ ಚೆನ್ನಬಸ್ಸಯ್ಯ ಎಂಬ ವ್ಯಕ್ತಿಗೆ 25 ಲಕ್ಷ ರೂಪಾಯಿ ವಂಚಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ. ಕರಣ್, ಪ್ರವೀಣ್ ಬಂಧಿತ ಆರೋಪಿಗಳು. ಇವರಿಂದ 12 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದ್ದು, ಮತ್ತಿಬ್ಬರು ಆರೋಪಿಗಳಾದ ಸಂತೋಷ್, ಪ್ರಕಾಶ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸಿದ್ದಾರೆ.

ಘಟನೆ ವಿವರ

ಬೆಂಗಳೂರು ಮೂಲದ ಲಕ್ಷ್ಮಣ ಚೆನ್ನಬಸ್ಸಯ್ಯ ಎಂಬ ವ್ಯಕ್ತಿಗೆ ಹರಪ್ಪಣಹಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ನಾಣ್ಯ ಕೊಟ್ಟು ನಂಬಿಸಿದ್ದಾರೆ. ಮೊದಲು ಅಸಲಿ ಚಿನ್ನವನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ ಇವರು, ಎರಡು ಕೆ.ಜಿ ಚಿನ್ನ ಕೊಡ್ತೆವಿ ಎಂದು ಬೆಂಗಳೂರಿನಿಂದ ಶಿಗ್ಗಾಂವಿಗೆ ಕರೆಸಿದ್ದಾರೆ. ಶಿಗ್ಗಾಂವಿ ಹೊರವಲಯದ ಸರ್ವಿಸ್ ರಸ್ತೆ ಬಳಿ 25 ಲಕ್ಷ ರೂಪಾಯಿ ಪಡೆದು, ನಕಲಿ 2 ಕೆಜಿ ಚಿನ್ನದ ನಾಣ್ಯ ನೀಡಿದ್ದರಂತೆ. ಇನ್ನು ಈ ಕುರಿತು ಶಿಗ್ಗಾಂವಿ ಪೊಲಿಸ್ ಠಾಣೆಯಲ್ಲಿ ಮೋಸದ ಪ್ರಕರಣ ದಾಖಲು ಮಾಡಿದ್ದರು.

ಇದನ್ನೂ ಓದಿ:ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಹಾವೇರಿ ಪೊಲೀಸರು, ಕೂಡಲೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದೀಗ ಆರೋಪಿತರಾದ ಕರಣ್ ಮತ್ತು ಪ್ರವೀಣ್ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇಬ್ಬರ ಕಡೆಯಿಂದ 12 ಲಕ್ಷ ರೂಪಾಯಿ ವಶಪಡಿಕೊಂಡಿದ್ದಾರೆ. ಇನ್ನು ಇಬ್ಬರು ಆರೋಪಿಗಳಾದ ಸಂತೋಷ ಮತ್ತು ಪ್ರಕಾಶ್​ ತಲೆಮರೆಸಿಕೊಂಡಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌