AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ

ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ 25 ಲಕ್ಷ ರೂಪಾಯಿ ವಂಚಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ. ಕರಣ್, ಪ್ರವೀಣ್ ಬಂಧಿತ ಆರೋಪಿಗಳು. ಇವರಿಂದ 12 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದ್ದು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ
ನಕಲಿ ಚಿನ್ನ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2023 | 10:55 PM

Share

ಹಾವೇರಿ, ಸೆ.26: ಚಿನ್ನ (Gold)ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಅದರಲ್ಲೂ ಕಡಿಮೆ ಬೆಲೆಗೆ ಚಿನ್ನ ಸಿಗುತ್ತದೆ ಅಂದರೆ, ಕೊಂಡುಕೊಳ್ಳುವುದು ಬಿಡುವುದಿಲ್ಲ. ಹಾಗೇನಾದರೂ ಇದ್ದರೆ, ಹುಷಾರ್​ ಆಗಿರುವುದು ಒಳ್ಳೆಯದು. ಹೌದು, ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ಬೆಂಗಳೂರು ಮೂಲದ ಲಕ್ಷ್ಮಣ ಚೆನ್ನಬಸ್ಸಯ್ಯ ಎಂಬ ವ್ಯಕ್ತಿಗೆ 25 ಲಕ್ಷ ರೂಪಾಯಿ ವಂಚಿಸಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ. ಕರಣ್, ಪ್ರವೀಣ್ ಬಂಧಿತ ಆರೋಪಿಗಳು. ಇವರಿಂದ 12 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದ್ದು, ಮತ್ತಿಬ್ಬರು ಆರೋಪಿಗಳಾದ ಸಂತೋಷ್, ಪ್ರಕಾಶ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸಿದ್ದಾರೆ.

ಘಟನೆ ವಿವರ

ಬೆಂಗಳೂರು ಮೂಲದ ಲಕ್ಷ್ಮಣ ಚೆನ್ನಬಸ್ಸಯ್ಯ ಎಂಬ ವ್ಯಕ್ತಿಗೆ ಹರಪ್ಪಣಹಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ನಾಣ್ಯ ಕೊಟ್ಟು ನಂಬಿಸಿದ್ದಾರೆ. ಮೊದಲು ಅಸಲಿ ಚಿನ್ನವನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ ಇವರು, ಎರಡು ಕೆ.ಜಿ ಚಿನ್ನ ಕೊಡ್ತೆವಿ ಎಂದು ಬೆಂಗಳೂರಿನಿಂದ ಶಿಗ್ಗಾಂವಿಗೆ ಕರೆಸಿದ್ದಾರೆ. ಶಿಗ್ಗಾಂವಿ ಹೊರವಲಯದ ಸರ್ವಿಸ್ ರಸ್ತೆ ಬಳಿ 25 ಲಕ್ಷ ರೂಪಾಯಿ ಪಡೆದು, ನಕಲಿ 2 ಕೆಜಿ ಚಿನ್ನದ ನಾಣ್ಯ ನೀಡಿದ್ದರಂತೆ. ಇನ್ನು ಈ ಕುರಿತು ಶಿಗ್ಗಾಂವಿ ಪೊಲಿಸ್ ಠಾಣೆಯಲ್ಲಿ ಮೋಸದ ಪ್ರಕರಣ ದಾಖಲು ಮಾಡಿದ್ದರು.

ಇದನ್ನೂ ಓದಿ:ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಹಾವೇರಿ ಪೊಲೀಸರು, ಕೂಡಲೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದೀಗ ಆರೋಪಿತರಾದ ಕರಣ್ ಮತ್ತು ಪ್ರವೀಣ್ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇಬ್ಬರ ಕಡೆಯಿಂದ 12 ಲಕ್ಷ ರೂಪಾಯಿ ವಶಪಡಿಕೊಂಡಿದ್ದಾರೆ. ಇನ್ನು ಇಬ್ಬರು ಆರೋಪಿಗಳಾದ ಸಂತೋಷ ಮತ್ತು ಪ್ರಕಾಶ್​ ತಲೆಮರೆಸಿಕೊಂಡಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ