AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

86th Kannada Sahitya Sammelana: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿನ್ನಾಭಿಪ್ರಾಯ ಬಿಸಿ: ವಿರೋಧಿಸಿದ್ದವರನ್ನು ಚರ್ಚೆಗೆ ಆಹ್ವಾನಿಸಿದ ಸರ್ವಾಧ್ಯಕ್ಷ ದೊಡ್ಡ ರಂಗೇಗೌಡ

ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ.

86th Kannada Sahitya Sammelana: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿನ್ನಾಭಿಪ್ರಾಯ ಬಿಸಿ: ವಿರೋಧಿಸಿದ್ದವರನ್ನು ಚರ್ಚೆಗೆ ಆಹ್ವಾನಿಸಿದ ಸರ್ವಾಧ್ಯಕ್ಷ ದೊಡ್ಡ ರಂಗೇಗೌಡ
TV9 Web
| Edited By: |

Updated on: Jan 08, 2023 | 8:37 PM

Share

ಹಾವೇರಿ: ಹಾವೇರಿಯ, ಹಾವೇರಿ-ಹುಬ್ಬಳ್ಳಿ ರಸ್ತೆಯ ಅಜ್ಜಯ್ಯ ದೇವಸ್ಥಾನದ ಎದುರು ಮೂರು ದಿನಗಳ ಕಾಲ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (86th Akhil Bharat Kannada Sahitya Sammelana) ಇಂದು (ಜ.8) ತೆರೆ ಎಳೆಯಲಾಗಿದೆ. ಈ ಸಮ್ಮೇಳನದಿಂದ ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಈ ಸಂಬಂಧ ಇಂದು ಬೆಂಗಳೂರಲ್ಲಿ ಪ್ರತ್ಯೇಕ ಸಮ್ಮೇಳನವನ್ನು ಮಾಡಲಾಯಿತು. ಈ ಆರೋಪಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ. ಈಗ ಸಮ್ಮೇಳನದ ಸರ್ವಾಧ್ಯಕ್ಷರಾದ ದೊಡ್ಡರಂಗೇಗೌಡರು (Doddarange Gowda) 86ನೇ ಕನ್ನಡ ಸಮ್ಮೇಳನ ವಿರೋಧಿಸುವವರಿಗೆ ನನ್ನ ಪ್ರಾರ್ಥನೆ, ಬನ್ನಿ ಸಾಹಿತ್ಯ ಪರಿಷತ್‌ ಅಡಿಯಲ್ಲಿ ಚರ್ಚಿಸೋಣ ಎಂದು ಪಂಥಾಹ್ವಾನ ನೀಡಿದ್ದಾರೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷ ನುಡಿಗಳನ್ನಾಡಿದ ಅವರು 86ನೇ ಸಾಹಿತ್ಯ ಸಮ್ಮೇಳನ ವಿರೋಧಿಸಿದವರಿಗೆ ಪ್ರಾರ್ಥಿಸುತ್ತೇನೆ, ಕನ್ನಡ ಸಾಹಿತ್ಯ ಪರಿಷತ್‌ಗೆ ಬನ್ನಿ. ಅಭಿಪ್ರಾಯ ಬೇರೆ ಇರಬಹುದು, ಕುಳಿತು ಬಗೆಹರಿಸಿಕೊಳ್ಳೋಣ. ಕನ್ನಡದ ಐಕ್ಯತೆ ಪ್ರದರ್ಶನ ಮಾಡಬೇಕಿದೆ. ಇಡೀ ವಿಶ್ವ ಸಾಹಿತ್ಯದಲ್ಲಿ ನಮ್ಮ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಅದನ್ನು ಇನ್ನೂ ಎತ್ತರೆತ್ತರಕ್ಕೆ ತೆಗೆದುಕೊಂಡು ಹೋಗಬೇಕಿದೆ. ಹೀಗಾಗಿ ವಿರೋಧಿ ಸಾಹಿತಿಗಳು, ಕವಿಗಳು ಎಲ್ಲರೂ ಬರಬೇಕು. ಕನ್ನಡ ಸಾಹಿತ್ಯ ಪರಿಷತ್‌ಗೆ ಬಂದು ನೀವೆಲ್ಲಾ ಚರ್ಚೆ ಮಾಡಬೇಕು. ಬರೀ ಟೀಕಿಸುವುದರಿಂದ ಪ್ರಯೋಜನವಿಲ್ಲ. ಚರ್ಚೆ ಮಾಡಿ ನಿರ್ಣಯ ಮಾಡೋಣ ಬನ್ನಿ ಅಂತ ಆಹ್ವಾನ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ