AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ

ಕಳೆದ 3 ವರ್ಷಗಳಲ್ಲಿ ಕರ್ನಾಟಕದಲ್ಲಿ ಅಪ್ರಾಪ್ತ ಚಾಲಕಿಯರ ಮೇಲೆ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕಾನೂನು ಎಷ್ಟೇ ಕಠಿಣಗೊಳಿಸಿದರೂ ಪದೇ ಪದೇ ಇಂತಹ ದುಷ್ಕೃತ್ಯ ನಡೆಯುತ್ತಲೇ ಇವೆ. ಮೊನ್ನೆ ಅಷ್ಟೇ ನೆಲಮಂಗಲದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಾಸುವ ಮುನ್ನವೇ ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Oct 24, 2025 | 8:43 PM

Share

ಹಾವೇರಿ, (ಅಕ್ಟೋಬರ್ 24): ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್​ಸ್ಟಾಗ್ರಾಂನಲ್ಲಿ ಬಾಲಕಿ ಪರಿಚಯಿಸಿಕೊಂಡಿದ್ದ ಓರ್ವ ಯುವಕ, ತನ್ನಿಬ್ಬರು ಗೆಳೆಯರ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ. ಉದಯ್ ಕರಿಯಣ್ಣನವರ, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂಬುವರು ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಬಾಲಕಿ ಗರ್ಭಾವತಿಯಾಗಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಮುಖ ಆರೋಪಿ ಉದಯ್ ಇದೇ ಮಾರ್ಚ್​ ನಲ್ಲಿ ಇನ್​ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕೆ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಉದಯ್ ಗೆಳೆಯರಾದ ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಸೇರಿಕೊಂಡು ಏಪ್ರಿಲ್​ ತಿಂಗಳಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈಗ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆಯೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮೊದಲು ಉದಯ್ ಎನ್ನುವಾತ ಬಾಲಕಿಯೊಂದಿಗೆ ಪರಿಚಿತನಾಗಿ ಬಳಿಕ ಆಕೆಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಉದಯ್ ತನ್ನ ಸ್ನೇಹಿತರಿಗೂ ಪರಿಚಿಸಿದ್ದು, ನಂತರ ಎಲ್ಲರೂ ಸೇರಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯಲ್ಲಿ ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ.

ಹೆಣ್ಣು ಮಕ್ಕಳ ರಕ್ಷಣೆಯ ನಿಟ್ಟಿನಲ್ಲಿ ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣ ನಾಗರಿಕ ಸಮಾಜದ ಆತಂಕಕ್ಕೆ ಕಾರಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ , ಹಾವೇರಿ ಟಿವಿ9

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:41 pm, Fri, 24 October 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ