Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಬರಗಾಲದಲ್ಲಿ ಡ್ಯ್ರಾಗನ್ ಫ್ರೂಟ್ ಬೆಳೆದು ಯಶಸ್ಸು ಕಂಡ ಯುವ ರೈತ

ರಾಜ್ಯದಲ್ಲಿ ಬರಗಾಲ ಛಾಯೆ ಆವರಿಸಿದ ಬೆನ್ನಲೆ, ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಆದ್ರೆ, ಇಲ್ಲೊಬ್ಬ ರೈತ ಬರಗಾಲದ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಸ್ವಲ್ಪವೂ ಧೃತಿ ಗೆಡದೆ ದುಡಿಮೆ ಮುಂದುವರೆಸಿದ್ದರ ಫಲವಾಗಿ. ಪ್ರಸಕ್ತ ಸಾಲಿನಲ್ಲಿ ಎರಡು ಲಕ್ಷಕ್ಕೂ ಅಧಿಕ ಇಳುವರಿ ಪಡೆದಿದ್ದು, ಉಳಿದ ರೈತರಿಗೆ ಮಾದರಿ ಆಗಿದ್ದಾನೆ.

ಹಾವೇರಿ: ಬರಗಾಲದಲ್ಲಿ ಡ್ಯ್ರಾಗನ್ ಫ್ರೂಟ್ ಬೆಳೆದು ಯಶಸ್ಸು ಕಂಡ ಯುವ ರೈತ
ಡ್ಯ್ರಾಗನ್ ಫ್ರೂಟ್ ಬೆಳೆದು ಯಶಸ್ಸು ಕಂಡ ಯುವ ರೈತ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 12, 2023 | 9:30 PM

ಹಾವೇರಿ, ಅ.12: ಮಳೆಗಾಲ ಮುಗಿದು ಚಳಿಗಾಲ ಆರಂಭದ ಈ ಸಮಯದಲ್ಲಿ, ಕಣ್ಣಾಹಾಯಿಸದ ಕಡೆ ಎಲ್ಲ ಹಸಿರು ಕಾಣಬೇಕಿತ್ತು, ಆದ್ರೆ, ಸಕಾಲಕ್ಕೆ ಮಳೆ ಆಗದ ಹಿನ್ನೆಲೆ. ಒಣ ಭೂಮಿ, ಒಣಗಿದ ಬೆಳೆಗಳು, ಅಲ್ಲಲ್ಲಿ ಅಲ್ಪ ಸ್ವಲ್ಪ ಹಸಿರು ಕಾಣುತ್ತಿದೆ. ಪರಿಣಾಮ ರಾಜ್ಯದ ರೈತರು ಆತಂಕದಲ್ಲೆ ದಿನ ಕಳೆಯುವಂತಾಗಿದೆ. ಆದರೆ ಹಾವೇರಿ(Haveri)ತಾಲೂಕಿನ ಅಗಡಿ ಗ್ರಾಮದ ರುದ್ರಪ್ಪಾ ಎಂಬ ರೈತ, ಇದಕ್ಕೆ ಭಿನ್ನವಾಗಿದ್ದಾನೆ. ಕಳೆದೆರಡು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹಾಕಿದ ಡ್ಯ್ರಾಗನ್(Dragon) ಸಸಿಗಳು, ಈ ಬಾರಿಯ ಬರಗಾಲಕ್ಕೆ ಸತ್ತು ಹೋಗುತ್ತೆ ಎಂಬ ಆತಂಕ ಇತ್ತು. ಆದ್ರೆ, ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ. ಬೇರೆ ಬೇರೆ ನೀರಿನ ಆಕರಗಳಿಂದ ನೀರನ್ನು ಹಾಯಿಸಿ ಸಸಿಗಳನ್ನು ಉಳಿಸಿದ ಫಲವಾಗಿ. ಪ್ರಸಕ್ತ ಸಾಲಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳನ್ನು ಬೆಳೆದಿದ್ದಾನೆ.

ರಿಸ್ಕ್ ತೊಗೊಂಡ್ರೆ ಕೃಷಿಯಲ್ಲಿ ಉತ್ತಮ ಆದಾಯ

ಎಂಟು ಲಕ್ಷಕ್ಕೂ ಅಧಿಕ ಖರ್ಚು ಮಾಡಿ ಬೆಳೆಸಿದ ಡ್ರ್ಯಾಗನ್ ಹಾಳಾಗುತ್ತೆ ಎಂದು ಅನೇಕ ಜನ ಆಡಿಕೊಳ್ಳುತ್ತಿದ್ದರು. ಆದ್ರೆ, ಇದಕ್ಕೆಲ್ಲ ಧೃತಿ ಗೆಡದೆ ಸಮರ್ಪಕ ನೀರು ಪೂರೈಸುವುದರ ಜೊತೆಗೆ ಎಂದಿನಂತೆ ಗೊಬ್ಬರ ಮತ್ತು ರಸಾಯನಿಕ ಖರ್ಚು ಮಾಡಿ. ತನ್ನ ದುಡಿಮೆ ಮುಂದುವರೆಸಿದ್ದರ ಫಲವಾಗಿ ಕಳೆದೆರಡು ವರ್ಷಗಳಲ್ಲಿ ಬರಲಾದ ಇಳುವರಿ ಈ ವರ್ಷ ಬಂದಿದೆ. ಇನ್ನೂ ಎಂದಿನಂತೆ ಮೆಕ್ಕೆಜೋಳ, ಸೋಯಾಬಿನ ಮಾಡುವುದರ ಬದಲು ಸ್ವಲ್ಪ ರಿಸ್ಕ್ ತೊಗೊಂಡ್ರೆ ಕೃಷಿಯಲ್ಲಿ ಉತ್ತಮ ಆದಾಯ ಗಳಿಸಬಹುದು ಎಂದು ಯುವ ರೈತ ಬಸವರಾಜ್ ಹೇಳುತ್ತಿದ್ದಾರೆ.

ಇದನ್ನೂ ಓದಿ:Dragon fruit Benefits: ಡ್ರ್ಯಾಗನ್​ ಫ್ರೂಟ್ ಆರೋಗ್ಯಕರ ಪ್ರಯೋಜನಗಳ ಬಗ್ಗೆ ನೀವು ತಿಳಿದರೆ ಇಂದೇ ಖರೀದಿಸಿ, ಸೇವಿಸುವ ಅಭ್ಯಾಸ ಮಾಡಿಕೊಳ್ಳುವಿರಿ

ಒಟ್ಟಾರೆಯಾಗಿ ನಿಸರ್ಗದ ಜೊತೆ ಸದಾ ಆಟ ಆಡುವ ಅನ್ನದಾತ ಕೆಲವು ಸಲ ಗೆಲ್ಲುತ್ತಾನೆ ಎಂಬುವುದಕ್ಕೆ ಜೀವಂತ ನಿದರ್ಶನ ಇದು. ಸಮಸ್ಯೆ ಬಂದಿದೆ ಎಂಬ ಆತಂಕದಲ್ಲಿ ಕೈ ಚೆಲ್ಲಿ ಕುಳಿತುವುಕೊಳ್ಳುವುದರ ಬದಲು. ಧೈರ್ಯದಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ ಎಂಬುವುದಕ್ಕೆ ಇವರೆ ಸಾಕ್ಷಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ