AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ವಿದ್ಯುತ್​ ತಂತಿ ತಗುಲಿ ತಾಯಿ-ಮಗಳು ಕೊನೆಯುಸಿರೆಳೆದಿದ್ದರು. ಇದಾದ ಮೇಲೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖೆಗಳಿಂದ ಮತ್ತೊಂದು ಅವಘಡ ನಡೆದಿದೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ.

ಹಾವೇರಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕ ಬಲಿ
ಕಂಬದಲ್ಲಿಯೇ ನೇತಾಡುತ್ತಿರುವ ಶವ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 17, 2024 | 9:03 PM

Share

ಹಾವೇರಿ, ಫೆ.17: ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ(Hescom) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ. ಸುರೇಶ್ (38) ಮೃತ ದುರ್ದೈವಿ. ಮತ್ತೋರ್ವನಿಗೆ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ(Haveri) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ.

ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ ಸಚಿವ ಶಿವಾನಂದ ಪಾಟೀಲ್

ಇನ್ನು ಘಟನೆ ಹಿನ್ನಲೆ ಮೃತ ಲೈನ್​ಮೆನ್ ಸುರೇಶ್ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್  5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳು ನಿಂಗಪ್ಪ ಆರೋಗ್ಯ ವಿಚಾರಿಸಿದ ಸಚಿವ ಶಿವಾನಂದ ಪಾಟೀಲ್, ‘ಗಾಯಾಳು ನಿಂಗಪ್ಪಗೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ. ಜೊತೆಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ. ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸ್ತೇವೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ. ಹೆಸ್ಕಾಂ ಎಂಡಿ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟ್ಯಾಕ್ಟರ್ ಚಾಲಕನ ನಿರ್ಲಕ್ಷ್ಯ; ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗದ ಹಳೆ ಮಂಡ್ಲಿ ಬಳಿ ಟ್ರ್ಯಾಕ್ಟರ್ ಹಾಗೂ ಬೈಕ್​ ನಡುವೆ​ ಅಪಘಾತವಾಗಿದ್ದು, ಬೈಕ್ ಸವಾರ ವಾಸೀಂ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದ ಟ್ರ್ಯಾಕ್ಟರ್ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್​ ಆಗಿದ್ದಾನೆ. ಮೃತ ಯುವಕ ಬೈಕ್​ನಲ್ಲಿ ಮನೆಯಿಂದ ಶಿವಮೊಗ್ಗಕ್ಕೆ ನಗರಕ್ಕೆ ಹೋಗುವ ಸಂದರ್ಭದಲ್ದಿ ಈ ದುರ್ಘಟನೆ ನಡೆದಿದೆ. ಇನ್ನು ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಟ್ರ್ಯಾಕ್ಟರ್ ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಮುಂಡವಿಲ್ಲದ ಅಪರಿಚಿತ ರುಂಡ ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಪೋಡು ಬಳಿ ಕೊಳೆತ ಸ್ಥಿತಿಯಲ್ಲಿ ಮುಂಡವಿಲ್ಲದ ರುಂಡ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ರುಂಡವನ್ನ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಬನ್ನೇರುಘಟ್ಟ ಪೊಲೀಸರು ದೌಡಾಯಿಸಿದ್ದಾರೆ. ಸದ್ಯಕ್ಕೆ​​ ಪುರುಷ ಅಥವಾ ಮಹಿಳೆ ಎನ್ನುವ ಚಹರೆ ಪತ್ತೆಗಾಗಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಕುರಿತು ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 7:54 pm, Sat, 17 February 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ