AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಾಗಿ ಅರ್ಜಿ ಕೊಟ್ಟು ಕೊಟ್ಟು ನನ್ನದು ತಬರನ ಕಥೆಯಾಗಿದೆ: ಆ್ಯಸಿಡ್ ದಾಳಿ ಸಂತ್ರಸ್ತೆಯ ನೋವಿನ ದನಿ

ಈ ವಿನಂತಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ. ಶೀಘ್ರ ಮನೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮನೆಗಾಗಿ ಅರ್ಜಿ ಕೊಟ್ಟು ಕೊಟ್ಟು ನನ್ನದು ತಬರನ ಕಥೆಯಾಗಿದೆ: ಆ್ಯಸಿಡ್ ದಾಳಿ ಸಂತ್ರಸ್ತೆಯ ನೋವಿನ ದನಿ
ಆ್ಯಸಿಡ್ ದಾಳಿ ಸಂತ್ರಸ್ತೆ ರತ್ನಾ ಚಲವಾದಿ ಅವರ ಪೋಸ್ಟ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 07, 2021 | 7:06 PM

Share

ಬೆಂಗಳೂರು: ‘ಜಾಗವಿದೆ, ವಾಸಿಸಲು ಒಂದು ಸೂರು ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡಿ’ ಆ್ಯಸಿಡ್ ದಾಳಿ ಸಂತ್ರಸ್ತೆ ರತ್ನಾ ಎನ್ನುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ವಿನಂತಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ. ಶೀಘ್ರ ಮನೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

‘ಸರ್ ನಮಸ್ತೆ, ನನ್ನ ಹೆಸರು ರತ್ನ ಹಾವೇರಿ ತಾಲೂಕು ಗುತ್ತಲ ಪಟ್ಟಣದ ನಿವಾಸಿ. ನಾನು ಒಬ್ಬ ಆ್ಯಸಿಡ್ ದಾಳಿ ಸಂತ್ರಸ್ತೆ. ನನಗೆ 11 ವರ್ಷದ ಮಗಳು ಇದ್ದಾಳೆ. ಇರಲು ಮನೆ ಇಲ್ಲ. ನನಗೆ ಅಪ್ಪ ಅಮ್ಮ ಇಬ್ಬರೂ ಇಲ್ಲ. ಗುತ್ತಲ ಗ್ರಾಮದಲ್ಲಿ 19X13 ಅಳತೆಯ ಜಾಗ ಇದೆ. ಆ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ಸರ್ಕಾರದ ನೆರವು ಬೇಕಿದೆ. ಮನೆಗಾಗಿ ಅರ್ಜಿಯನ್ನು ಕೊಟ್ಟು ಕೊಟ್ಟು ಸಾಕಾಗಿದೆ. ದಯವಿಟ್ಟು ನಮಗೆ ಮನೆಯನ್ನು ನೀಡಿ’ ಎಂದು ಮುಖ್ಯಮಂತ್ರಿಗೆ ‘ಕೂ’ ಮೂಲಕ ಮನವಿ ಮಾಡಿದ್ದಾರೆ.

ಈ ವಿನಂತಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ. ‘ಬಡವರಿಗೆ ಮನೆ ಎಂಬುವುದು ಇರಬಾರದಾ? ಸರ್ಕಾರ ಇದೆಯಾ ಇಲ್ಲವಾ ತಿಳಿಯುತ್ತಿಲ್ಲ. ಹುಟ್ಟಿದಾಗಿನಿಂದ ಸಾಯುವವರೆಗೂ ಗುಡಿಸಲಲ್ಲಿ ವಾಸಿಸುತ್ತಲೇ ಸಾಯಬೇಕಾ? ಯಾಕೆ ಬಡವರು ಮನುಷ್ಯರಲ್ಲವೇ? ಬಡವರಿಗೆ ಮನಸ್ಸಿಲ್ಲವೇ ಯಾಕೆ ಸರ್ಕಾರಕ್ಕೆ ತಿಳಿಯುತ್ತಿಲ್ಲ’ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಣ್ಣಿನ ಮುಖದ ಮೇಲೆ ಆ್ಯಸಿಡ್‌‌ ಎರಚುವ ವಿಕೃತಿ ನಮ್ಮ ಮಧ್ಯೆ ಇನ್ನೂ ಜೀವಂತವಾಗಿದೆ. ಇಂತಹ ದಾಳಿಗೆ ಒಳಗಾಗಿರುವ ಎಷ್ಟೋ ಈ ತರಹದ ಹೆಣ್ಣುಮಕ್ಕಳು ಅದರ ನಂತರವೂ ಬದುಕು ಕಟ್ಟಿಕೊಳ್ಳುವ ದಿಟ್ಟತನ ತೋರಿದ್ದಾರೆ. ಅಂಥವರನ್ನು ಗುರುತಿಸಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ರತ್ನಾ ಚಲವಾದಿ ಎನ್ನುವ ಕಾವ್ಯನಾಮದಲ್ಲಿ ಕವಿತೆಗಳ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸುತ್ತಿರುವ ರತ್ನಾ ಹೇಳಿದ್ದಾರೆ.

ರತ್ನಾ ಅವರಿಗೆ ಬೆಂಬಲ ಸೂಚಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಶಿಕ್ಷಕಿ ಮಮತಾ

ಮಮತಾ ಎನ್ನುವ ಶಿಕ್ಷಕಿಯೊಬ್ಬರು ಮುಖ್ಯಮಂತ್ರಿಗೆ ಕೈಬರಹದಲ್ಲಿ ಪತ್ರ ಬರೆದು, ‘ಒಬ್ಬ ಅವಿವೇಕಿ ಗಂಡಿನ ಆ್ಯಸಿಡ್ ದಾಳಿಗೆ ಬಲಿಯಾದ ಎಚ್​.ಕೆ.ರತ್ನಾ ಅವರ ಜೀವನಕ್ಕೆ ನಮ್ಮ ಸರ್ಕಾರದಿಂದ ಅಗತ್ಯ ಸವಲತ್ತು ಒದಗಿಸಬೇಕು. ಸಂತ್ರಸ್ತೆಯು ನೆಲೆಯಿಲ್ಲದೆ ಅನಾಥೆಯಾಗಿ ಕಣ್ಣೀರಿಡುತ್ತಿದ್ದಾರೆ. ಮನೆಗಾಗಿ ಈಗಾಗಲೇ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಅವರಿ ಉದ್ಯೋಗ ಮತ್ತು ಆಶ್ರಯ ಒದಗಿಸಿಕೊಡಬೇಕು’ ಎಂದು ಮುಖ್ಯಮಂತ್ರಿಯನ್ನು ವಿನಂತಿಸಿದ್ದಾರೆ.

ಅಭಿಮಾನಿ ಎನ್ನುವವರು ಕೂ ಮಾಡಿ, ‘ಆ್ಯಸಿಡ್ ದಾಳಿಯಂತಹ ದಾರುಣ ಕುಕೃತ್ಯಗಳಿಗೆ ಗುರಿಯಾದರೂ ಬದುಕು ಕಟ್ಟಿಕೊಳ್ಳಲು ಇಚ್ಛಿಸುತ್ತಿರುವ ಹೆಣ್ಣುಮಗಳಿಗೆ ತನ್ನದೇ ಗೂಡು ಕಟ್ಟಿಕೊಳ್ಳಲು ಸರ್ಕಾರದ ಸಹಾಯಹಸ್ತ ಬೇಕಾಗಿದೆ’ ಎಂದು ಹೇಳಿದ್ದಾರೆ. ತಮ್ಮ ಪರವಾಗಿ ಧ್ವನಿ ಎತ್ತಿದವರಿಗೆ ಕೃತಜ್ಞತೆ ಸೂಚಿಸಿರುವ ಆ್ಯಸಿಡ್ ದಾಳಿ ಸಂತ್ರಸ್ತೆ ರತ್ನಾ, ‘ಬೆಂಬಲಿಸುತ್ತಿರುವ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು’ ಎಂದಿದ್ದಾರೆ. #ಛಲಗಾತಿಗೆ_ನೆರವು ಹ್ಯಾಷ್​ಟ್ಯಾಗ್ ಬಳಸಿ ಸಾಕಷ್ಟು ಜನರು ರತ್ಯಾ ಅವರಿಗೆ ಮನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Published On - 7:01 pm, Thu, 7 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ