AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ

ನಿಯಂತ್ರಣ ತಪ್ಪಿ ಸರ್ಕಾರಿ ಬಸ್‌ನಿಂದ ಕೆಳಕ್ಕೆ ಬಿದ್ದ ಬಾಲಕಿ ಮೃತಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯ ಜೀವನ ದುರಂತ ಅಂತ್ಯ ಕಂಡಿದ್ದು ಬಸ್‌ ರಶ್‌ ಆಗಿದ್ದೇ ವಿದ್ಯಾರ್ಥಿನಿಯ ಪಾಲಿಗೆ ಶಾಪವಾಯ್ತಾ?

Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ
ಬಸ್​ನಿಂದ ಬಿದ್ದು ಬಾಲಕಿ ಸಾವು
Follow us
ರಮೇಶ್ ಬಿ. ಜವಳಗೇರಾ
|

Updated on: Jun 12, 2023 | 6:11 PM

ಹಾವೇರಿ: ಸರ್ಕಾರಿ ಬಸ್​ನಿಂದ (Bus( ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿ(Student) ಮೃತಪಟ್ಟಿರುವ ಘಟನೆ ಹಾವೇರಿ(Haveri) ಜಿಲ್ಲೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಮಧು ಕುಂಬಾರ(14) ಮೃತ ದುರ್ದೈವಿ ವಿದ್ಯಾರ್ಥಿನಿ. ವಾಸನ ಗ್ರಾಮದಿಂದ ಕುಸನೂರು ಶಾಲೆಗೆ ಹೋಗಲು ಸರ್ಕಾರಿ ಬಸ್ ಹತ್ತಿದ್ದ ವಧು,​ ರಶ್​ ಇದ್ದುದರಿಂದ ಬಾಗಿಲ ಬಳಿ ನಿಂತಿದ್ದಳು. ಆದ್ರೆ, ನಿಯಂತ್ರಣ ತಪ್ಪಿ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಗ್ಯಾಸ್​ ಗೀಸರ್​ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಬಾತ್​ರೂಮ್​ನಲ್ಲೇ ಉಸಿರುಗಟ್ಟಿ ಸಾವು

ಇಂದು ಎಲ್ಲಡೆ ಸಭೆ ಸಮಾರಂಭ ಹಾಗೂ ವಿವಾಹ ಕಾರ್ಯಕ್ರಮಗಳು ಇದ್ದ ಹಿನ್ನೆಲೆಯಲ್ಲಿ ಬಸ್​ನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ಮಹಿಳೆಯರು ಸೇರಿದಂತೆ ಶಾಲಾ ಮಕ್ಕಳಿಂದ ತುಂಬಿದ್ದರು. ಈ ಹಿನ್ನೆಲೆಯಲ್ಲಿ ಮಧು ಬಸ್​ ಬಾಗಿಲು ಬಳಿ ನಿಂತುಕೊಂಡಿದ್ದಳು. ಆದರೆ ರಸ್ತೆ ತಿರುವಿನಲ್ಲಿ ಬಸ್ ಟರ್ನ್​ ಆಗುವಾಗ ಕೈಜಾರಿ ನೆಲಕ್ಕೆ ಬಿದ್ದಿದ್ದಾಳೆ. ಈ ಸಂಬಂಧ ಮೃತ ಮಧು ಪೋಷಕರು, ಸರ್ಕಾರಿ ಬಸ್ ಚಾಲಕನ ವಿರುದ್ಧ ಆಡೂರು ಠಾಣೆಗೆ ದೂರು ದಾಖಲಿಸಿದ್ದಾರೆ.

ಶಕ್ತಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಈ ಸಂಬಂಧ ಮಹಿಳೆಯರು ಖಾಸಗಿ ವಾಹನಗಳಿಗೆ ಬೈ ಹೇಳಿ ಸರ್ಕಾರಿ ಬಸ್​ನತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಿ ಬಸ್​ಗಳು ಫುಲ್​ ರಶ್​ ಆಗುತ್ತಿವೆ.

ಶಾಲೆಗೆ ಹೋಗುತ್ತಿದ್ದ ಬಾಲಕಿಯ ಜೀವನ ದುರಂತ ಅಂತ್ಯ ಕಂಡಿದ್ದು ಬಸ್‌ ರಶ್‌ ಆಗಿದ್ದೇ ವಿದ್ಯಾರ್ಥಿನಿಯ ಪಾಲಿಗೆ ಶಾಪವಾಯ್ತಾ?

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?