ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
Follow us
| Updated By: ಆಯೇಷಾ ಬಾನು

Updated on: Dec 19, 2023 | 8:17 AM

ಹಾವೇರಿ, ಡಿ.19: ತಾನು ಪ್ರೀತಿಸಿದ (Love) ಯುವತಿ ಜೊತೆ ಮಗ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿ ಹೀನಾಯ ಕೃತ್ಯ ಎಸಗಿದ್ದ ಘಟನೆ ಬೆಳಗಾವಿಯಲ್ಲಿ (Belagavi) ಇತ್ತೀಚೆಗೆ ನಡೆದಿತ್ತು. ಈ ಸುದ್ದಿ ಸದನದಿಂದ ಹಿಡಿದು ಇಡೀ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ಹಾವೇರಿಯಲ್ಲಿ (Haveri) ನಡೆದಿದೆ. ಆದರೆ ಇಲ್ಲಿ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಹಲ್ಲೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದಲ್ಲಿ ಯುವಕ-ಯುವತಿ ಪ್ರೀತಿಸಿ ಓಡಿ ಹೋದರು ಎಂಬ ಒಂದೇ ಒಂದು ಕಾರಣಕ್ಕೆ ಯುವತಿಯ ಕಡೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಈ ಸಂಬಂಧ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಓಡಿ ಹೋದ ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಳಗಾವಿ ಘಟನೆ ಬಳಿಕ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತೆ ಎಂದು ಸರ್ಕಾರ ಹೇಳಿತ್ತು. ಆದರೆ ಆಗ ಇದೇ ರೀತಿಯ ದೌರ್ಜನ್ಯಗಳು ಮುಂದುವರೆದಿದೆ. ಪ್ರೀತಿಸಿ ಓಡಿ ಹೋದರು ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ