AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಆಯೇಷಾ ಬಾನು|

Updated on: Dec 19, 2023 | 8:17 AM

Share

ಹಾವೇರಿ, ಡಿ.19: ತಾನು ಪ್ರೀತಿಸಿದ (Love) ಯುವತಿ ಜೊತೆ ಮಗ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿ ಹೀನಾಯ ಕೃತ್ಯ ಎಸಗಿದ್ದ ಘಟನೆ ಬೆಳಗಾವಿಯಲ್ಲಿ (Belagavi) ಇತ್ತೀಚೆಗೆ ನಡೆದಿತ್ತು. ಈ ಸುದ್ದಿ ಸದನದಿಂದ ಹಿಡಿದು ಇಡೀ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ಹಾವೇರಿಯಲ್ಲಿ (Haveri) ನಡೆದಿದೆ. ಆದರೆ ಇಲ್ಲಿ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಹಲ್ಲೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದಲ್ಲಿ ಯುವಕ-ಯುವತಿ ಪ್ರೀತಿಸಿ ಓಡಿ ಹೋದರು ಎಂಬ ಒಂದೇ ಒಂದು ಕಾರಣಕ್ಕೆ ಯುವತಿಯ ಕಡೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಈ ಸಂಬಂಧ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಓಡಿ ಹೋದ ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಳಗಾವಿ ಘಟನೆ ಬಳಿಕ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತೆ ಎಂದು ಸರ್ಕಾರ ಹೇಳಿತ್ತು. ಆದರೆ ಆಗ ಇದೇ ರೀತಿಯ ದೌರ್ಜನ್ಯಗಳು ಮುಂದುವರೆದಿದೆ. ಪ್ರೀತಿಸಿ ಓಡಿ ಹೋದರು ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!