AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು

Updated on: Dec 19, 2023 | 8:17 AM

ಹಾವೇರಿ, ಡಿ.19: ತಾನು ಪ್ರೀತಿಸಿದ (Love) ಯುವತಿ ಜೊತೆ ಮಗ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿ ಹೀನಾಯ ಕೃತ್ಯ ಎಸಗಿದ್ದ ಘಟನೆ ಬೆಳಗಾವಿಯಲ್ಲಿ (Belagavi) ಇತ್ತೀಚೆಗೆ ನಡೆದಿತ್ತು. ಈ ಸುದ್ದಿ ಸದನದಿಂದ ಹಿಡಿದು ಇಡೀ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ಹಾವೇರಿಯಲ್ಲಿ (Haveri) ನಡೆದಿದೆ. ಆದರೆ ಇಲ್ಲಿ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಹಲ್ಲೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದಲ್ಲಿ ಯುವಕ-ಯುವತಿ ಪ್ರೀತಿಸಿ ಓಡಿ ಹೋದರು ಎಂಬ ಒಂದೇ ಒಂದು ಕಾರಣಕ್ಕೆ ಯುವತಿಯ ಕಡೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಈ ಸಂಬಂಧ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಓಡಿ ಹೋದ ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಳಗಾವಿ ಘಟನೆ ಬಳಿಕ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತೆ ಎಂದು ಸರ್ಕಾರ ಹೇಳಿತ್ತು. ಆದರೆ ಆಗ ಇದೇ ರೀತಿಯ ದೌರ್ಜನ್ಯಗಳು ಮುಂದುವರೆದಿದೆ. ಪ್ರೀತಿಸಿ ಓಡಿ ಹೋದರು ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?