ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ.

ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
Edited By: ಆಯೇಷಾ ಬಾನು

Updated on: Dec 19, 2023 | 8:17 AM

ಹಾವೇರಿ, ಡಿ.19: ತಾನು ಪ್ರೀತಿಸಿದ (Love) ಯುವತಿ ಜೊತೆ ಮಗ ಓಡಿ ಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿ ಹೀನಾಯ ಕೃತ್ಯ ಎಸಗಿದ್ದ ಘಟನೆ ಬೆಳಗಾವಿಯಲ್ಲಿ (Belagavi) ಇತ್ತೀಚೆಗೆ ನಡೆದಿತ್ತು. ಈ ಸುದ್ದಿ ಸದನದಿಂದ ಹಿಡಿದು ಇಡೀ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ಹಾವೇರಿಯಲ್ಲಿ (Haveri) ನಡೆದಿದೆ. ಆದರೆ ಇಲ್ಲಿ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಹಲ್ಲೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದಲ್ಲಿ ಯುವಕ-ಯುವತಿ ಪ್ರೀತಿಸಿ ಓಡಿ ಹೋದರು ಎಂಬ ಒಂದೇ ಒಂದು ಕಾರಣಕ್ಕೆ ಯುವತಿಯ ಕಡೆಯವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ರಾಣೆಬೆನ್ನೂರು ತಾಲುಕಿನ ಮುದೇನೂರ ಗ್ರಾಮದ ಯುವಕನೊಂದಿಗೆ ಚಳಗೇರಿ ಗ್ರಾಮದ ಯುವತಿ ಓಡಿ ಹೋಗಿದ್ದಾಳೆ. ಈ ಸಂಬಂಧ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಂಬಂಧಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಮತ್ತೊಂದೆಡೆ ಓಡಿ ಹೋದ ಯುವಕನ ಸೋದರ ಮಾವ ಪ್ರಶಾಂತ್ ಎಂಬುವವರನ್ನು ಕಿಡ್ನಾಪ್ ಮಾಡಿ ರಾಣೆಬೆನ್ನೂರ ಗ್ರಾಮೀಣ ಠಾಣೆಯ ಎದರೇ ಅರೆಬೆತ್ತಲೆ ಮಾಡಿ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣ ಹತ್ಯೆ ಮಾಡಿದ ಪ್ರಿಯಕರ; ಬೆಂಗಳೂರು ಪೊಲೀಸರಿಗೆ ಯುವತಿ ದೂರು

ಬೆಳಗಾವಿ ಘಟನೆ ಬಳಿಕ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತೆ ಎಂದು ಸರ್ಕಾರ ಹೇಳಿತ್ತು. ಆದರೆ ಆಗ ಇದೇ ರೀತಿಯ ದೌರ್ಜನ್ಯಗಳು ಮುಂದುವರೆದಿದೆ. ಪ್ರೀತಿಸಿ ಓಡಿ ಹೋದರು ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us