AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಜಿಲ್ಲೆಯ ಯುವಕರಲ್ಲಿ ಹೆಚ್ಚುತ್ತಿದೆ ರಕ್ತದಾನದ ಅರಿವು; ಹೋರಿಯ ಹೆಸರಿನಲ್ಲಿ ರಕ್ತದಾನ

ರಕ್ತದಾನ ಮಹಾದಾನ ಅಂತಾರೆ, ರಕ್ತದಾನ ಮಾಡುವುದರಿಂದ ಹಲವು ಉಪಯೋಗಗಳು ಇವೆ. ಆದರೆ, ಇಂದಿನ ಯುವಕರು ತುರ್ತು ಪರಿಸ್ಥಿತಿಯಲ್ಲಿ ರಕ್ತದಾನ ಮಾಡಲು ಹಿಂದೇಟು ಹಾಕುತ್ತಾರೆ.ನಟ-ನಟಿಯರು, ರಾಜಕಾರಣಿಗಳ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ರಕ್ತದಾನ ಮಾಡುವುದು ಸಹಜ. ಆದರೆ ಹಾವೇರಿ ಜಿಲ್ಲೆಯಲ್ಲಿ ಒಂದು ವಿಶೇಷತೆ ಅಂದರೆ ಮೂಕ ಪ್ರಾಣಿ ಬಸವಣ್ಣನ ಹೆಸರಿನಲ್ಲಿ ದಾನಗಳಲ್ಲಿ ಶ್ರೇಷ್ಟವಾದ ದಾನ ರಕ್ತದಾನ ಮಾಡಿ ಸೈ ಎನಿಸಿಕೊಳ್ಳುತ್ತಿದ್ದಾರೆ.

ಹಾವೇರಿ ಜಿಲ್ಲೆಯ ಯುವಕರಲ್ಲಿ ಹೆಚ್ಚುತ್ತಿದೆ ರಕ್ತದಾನದ ಅರಿವು; ಹೋರಿಯ ಹೆಸರಿನಲ್ಲಿ ರಕ್ತದಾನ
ಹಾವೇರಿಯಲ್ಲಿ ಹೋರಿ ಅಭಿಮಾನಿಗಳಿಂದ ರಕ್ತದಾನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Dec 12, 2023 | 10:24 PM

Share

ಹಾವೇರಿ, ಡಿ.12: ರಕ್ತದಾನ ಮಾಡುವುದರಿಂದ ಹಲವು ಉಪಯೋಗಗಳು ಇವೆ. ಆದರೆ, ಇಂದಿನ ಯುವಕರು ತುರ್ತು ಪರಿಸ್ಥಿತಿಯಲ್ಲಿ ರಕ್ತದಾನ ಮಾಡಲು ಹಿಂದೇಟು ಹಾಕುತ್ತಾರೆ. ಇನ್ನು ನಟ-ನಟಿಯರು, ರಾಜಕಾರಣಿಗಳ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ರಕ್ತದಾನ ಮಾಡುವುದು ಸಹಜ. ಆದರೆ, ಹಾವೇರಿ(Haveri) ಜಿಲ್ಲೆಯಲ್ಲಿ ಒಂದು ವಿಶೇಷತೆ ಅಂದರೆ, ಮೂಕ ಪ್ರಾಣಿ ಬಸವಣ್ಣನ ಹೆಸರಿನಲ್ಲಿ ದಾನಗಳಲ್ಲಿ ಶ್ರೇಷ್ಟವಾದ ದಾನವಾದ ರಕ್ತದಾನ ಮಾಡಿ ಸೈ ಎನಿಸಿಕೊಳ್ಳುತ್ತಿದ್ದಾರೆ.

ಅಭಿಮಾನದ ಹೆಸರಲ್ಲಿ ರಕ್ತದಾನದ ಶಿಬಿರಗಳ ಆಯೊಜನೆ

ಜಿಲ್ಲೆಯಲ್ಲಿ ಧನ ಬೇದರಿಸುವ ಹಬ್ಬ (ಹೋರಿ ಹಬ್ಬ) ದ ಅಭಿಮಾನಿಗಳೆ ಹೆಚ್ಚಾಗಿದ್ದು, ಅದರಲ್ಲಿ ಯುವ ಸಮುಹ ಒಂದೊಂದು ಹೋರಿಗಳಿಗೆ ಸಾವಿರಾರು ಜನ ಡೈ ಹಾಟ್​ ಪ್ಯಾನ್ಸ್ ಇರುತ್ತಾರೆ. ಹೋರಿ ಹಬ್ಬದಲ್ಲಿ ಅದರ ಓಟ, ಅದು ಪಡೆದ ಬಹುಮಾನಗಳು, ಮತ್ತಿತರ ಕಾರಣಗಳಿಂದ ಹೋರಿಗಳ ಮೇಲೆ ಯಾವ ನಟ-ನಟಿಯರಿಗೂ ಕಡಿಮೆ ಇಲ್ಲದಷ್ಟು ಪ್ರೀತಿ, ಅಭಿಮಾನ ಇಟ್ಟುಕೊಂಡಿದ್ದಾರೆ. ಹೋರಿಗಾಗಿ ಲಕ್ಷಾಂತರ ರೂ ಖರ್ಚು ಮಾಡುತ್ತಾರೆ. ಇದರ ಜೊತೆಗೆ ನಟ-ನಟಿಯರ ಹುಟ್ಟು ಹಬ್ಬದಂದು ಸೇರುವಷ್ಟೆ ಜನ ಸೇರಿ ಹುಟ್ಟು ಹಬ್ಬವನ್ನು ಆಚರಿಸುತ್ತಾರೆ.

ಇದನ್ನೂ ಓದಿ:ರಕ್ತದಾನ ಮಾಡಿ ಉತ್ತಮ ಆರೋಗ್ಯ ಪಡೆಯಿರಿ; ಬ್ಲಡ್ ಡೊನೇಟ್ ಮಾಡದ ಪುರುಷರಲ್ಲಿ ಈ ರೋಗ ಹೆಚ್ಚಳ

ರಾಜಕಾರಣಿಗಳಿಗಿಂತ ಮೂಖಪ್ರಾಣಿ ಬಸವಣ್ಣನ ಹುಟ್ಟುಹಬ್ಬಗಳಲ್ಲಿ ನಡೆಯುತ್ತವೆ ರಕ್ತದಾನದ ಶಿಬಿರಗಳು

ಇತ್ತೀಚಿನ ದಿನಗಳಲ್ಲಿ ಹೋರಿಗಳ ಹುಟ್ಟು-ಹಬ್ಬದಂದು ರಕ್ತದಾನ, ಅನ್ನಸಂತರ್ಪಣೆ, ಹತ್ತು ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾರೆ. 2023 ರಲ್ಲಿ ಹಾವೇರಿ ಬ್ಲಡ್ ಬ್ಯಾಂಕ್ ಮಾಹಿತಿ ಪ್ರಕಾರ ಹಾನಗಲ್ ತಾಲೂಕಿನ ಕರೆಕ್ಯಾತನಹಳ್ಳಿ,ಯಜಮಾನ, ಹೊತನಳ್ಳಿಯ ಬಕಾಸೂರ, ಕೆರಿ ಮತ್ತಿಹಳ್ಳಿ ಹಾಗೂ ದೇವಗಿರಿ ಗ್ರಾಮದಲ್ಲಿ ರಾಕ್ಷಸ್, ಹಾವೇರಿ ನಗರದ ಶಿವಾಜಿನಗರದ ರಣ ಬೇಟೆಗಾರ ಹೋರಿಗಳ ಹುಟ್ಟುಹಬ್ಬದಂದು 150 ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಪರದಾಡುವ ಸ್ಥಿತಿ ಈಗ ಇಲ್ಲ. ಹೋರಿಗಳ ಹುಟ್ಟು ಹಬ್ಬಗಳನ್ನು ಮಾಡುವ ಮೂಲಕ ರಕ್ತದಾನ ಶಿಬಿರಗಳನ್ನು ಆಯೊಜಿಸುತ್ತಾರೆ. ಇದರಿಂದ ಅವಶ್ಯಕತೆ ಇರುವ ರಕ್ತದ ಅವಶ್ಯಕತೆ ಇದ್ದವರಿಗೆ ಅನುಕೂಲ ಆಗುತ್ತಿದ್ದಾರೆ. ಇತ್ತೀಚೆಗೆ ಹೋರಿ ಹುಟ್ಟುಹಬ್ಬಗಳಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳ ಹೆಚ್ಚುತ್ತಿದ್ದು, ಸಂತಸದ ಸಂಗತಿಯಾಗಿದೆ. ಯುವಕರು ತಮ್ಮ ಹೋರಿಗಳ ಹೆಸರಲ್ಲಿ ರಕ್ತದಾನ ಮಾಡಿ ಮತ್ತೊಂದು ಜೀವಕ್ಕೆ ಜೀವ ನಿಡುತ್ತಿದ್ದಾರೆ ಎಂದು ಸರಕಾರಿ ಆಸ್ಪತ್ರೆ ರಕ್ತ ಬಂಡಾರದ ಮುಖ್ಯ ವೈದ್ಯಾಧಿಕಾರಿ ಬಸವರಾಜ ತಳವಾರ ಹೇಳಿದರು. ಇದೇ ವೇಳೆ ಅನ್ನದಾತ ಹೋರಿಯ ಮಾಲಿಕ ಸಂತೋಷ್​ ಮಾತನಾಡಿ ‘ ನಮ್ಮ ಖುಷಿಗಾಗಿ ನಾವು ನಮ್ಮ ನಮ್ಮ ಹೋರಿ ಹುಟ್ಟು ಹಬ್ಬದಂದು ರಕ್ತದಾನ, ಅನ್ನದಾನದ ಜೊತೆಗೆ ಆರೋಗ್ಯ ಶಿಬಿರಗಳನ್ನು ಆಯೊಜನೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Tue, 12 December 23

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!