AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ಹಾವೇರಿ ಜಿಲ್ಲೆಯಲ್ಲಿನ ಕೆಲವು ಪುರಾತನ ಸ್ಮಾರಕಗಳನ್ನು ಜೀರ್ಣೋದ್ಧಾರ ಮಾಡಲಾಗುವುದು. ಪ್ರತಿ ತಾಲೂಕಿನ ಒಂದೊಂದು ಪಾರಂಪರಿಕ ಸ್ಮಾರಕಗಳನ್ನು ಆಯ್ಕೆ ಮಾಡಿ ಜೀರ್ಣೋದ್ಧಾರ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ
ಶಿಲಾಶಾಸನ
TV9 Web
| Edited By: |

Updated on: Sep 20, 2023 | 11:31 AM

Share

ಹಾವೇರಿ ಸೆ.18: ಹಾನಗಲ್ (Hangal) ತಾಲೂಕಿನ ಹಿರೇಕೌಂಶಿ ಗ್ರಾಮದ ಲೋಕಪರಮೇಶ್ವರಿ ದೇವಸ್ಥಾನದ ಬಳಿ ಬಾದಾಮಿ (Badami) ಚಾಲುಕ್ಯರ (Chalukya) ಕಾಲದ ಶಿಲಾಶಾಸನ ಪತ್ತೆಯಾಗಿದೆ. ಈ ಶಾಸನ 7 ನೇಶತಮಾನದಲ್ಲಿ ಆಳಿದ ಎರಡನೇ ಪುಲಕೇಶಿ ಮಗ ಆದಿತ್ಯವರ್ಮನ್ ಕಾಲದ್ದು ಎಂದು ತಿಳಿದುಬಂದಿದೆ. ಈ ಶಿಲಾ ಶಾಸನ ಆದಿತ್ಯವರ್ಮನ ಮೊದಲ ಶಿಲಾ ಶಾಸನವೆಂದು ಪರಿಗಣಿಸಲ್ಪಟ್ಟಿದ್ದು, ಅಕ್ಷರಗಳು ಕನ್ನಡದಲ್ಲಿವೆ.

ಮೈಸೂರಿನ ಶಿಲಾಶಾಸನ ತಜ್ಞರ ಪ್ರಕಾರ, ಕಗುಮಸಿ ಗ್ರಾಮದ ತೆರಿಗೆ ವಿನಾಯಿತಿ ನೀಡಿ, ವಿಷ್ಣು, ಸೂರ್ಯ ಮತ್ತು ಶಿವನ ದೇವಾಲಯ ನಿರ್ಮಾಣ ಮಾಡಲು ಜಾಗವನ್ನು ದಾನ ಮಾಡಲಾಗಿದೆ ಎಂದು ಶಿಲಾ ಶಾಸನದಲ್ಲಿ ಕೆತ್ತಲಾಗಿದೆ ಎಂದು ತಜ್ಞರು ಹೇಳಿದರು. ಕುತೂಹಲಕಾರಿ ಅಂಶವೆಂದರೇ ಆದಿತ್ಯವರ್ಮನ ಕಾಲದ ಮೊದಲ ಶಿಲಾ ಶಾಸನ ಇದಾಗಿದೆ.

ಈ ಶಿಲಾ ಶಾಸನದಲ್ಲಿ ಮೂರು ದೇವರುಗಳಿಗೆ ಸಮರ್ಪಿತವಾದ ಜಾಗದ ಬಗ್ಗೆ ಉಲ್ಲೇಖವಾಗಿದೆ. 10-13 ನೇ ಶತಮಾನಗಳಲ್ಲಿ ಕಾಳಾಮುಖರು ತ್ರಿಪುರುಷ ದೇವಾಲಯಗಳನ್ನು ನಿರ್ಮಿಸುತ್ತಿದ್ದರು. ರಾಜ ಆದಿತ್ಯವರ್ಮನ್​ ತನ್ನ ಮೊದಲ ಆಳ್ವಿಕೆ ವರ್ಷದಲ್ಲಿ ಹೊರಡಿಸಿದ ಕರ್ನೂಲ್ ಫಲಕಗಳ ಮೂಲಕ ನಮಗೆ ಪರಿಚಿತನಾಗಿದ್ದಾನೆ ಎಂದು ತಜ್ಞರು ತಿಳಿಸಿದರು.

ಇದನ್ನೂ ಓದಿ: ರಾಜ್ಯ, ಅಂತಾರಾಜ್ಯಗಳಲ್ಲಿ ಹಾವೇರಿಯ ಕನ್ನೂರು ಗ್ರಾಮದ ಗಣೇಶ ಮೂರ್ತಿಗಳಿಗೆ ಹೆಚ್ಚು ಬೇಡಿಕೆ; ಕಳೆದ 100 ವರ್ಷಗಳಿಂದ ವಿಗ್ರಹ ತಯಾರಿಕೆ

ಹಾವೇರಿ ಜಿಲ್ಲೆಯಲ್ಲಿನ ಕೆಲವು ಪುರಾತನ ಸ್ಮಾರಕಗಳನ್ನು ಪುನಃಸ್ಥಾಪಿಸಲು ಆಡಳಿತವು ಯೋಜಿಸಿದೆ. ಪ್ರತಿ ತಾಲೂಕಿಗೆ ಒಂದೊಂದು ಪಾರಂಪರಿಕ ಸ್ಮಾರಕಗಳನ್ನು ಆಯ್ಕೆ ಮಾಡಿ ಜೀರ್ಣೋದ್ಧಾರ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ನಾವು ಪ್ರಮುಖ ಸ್ಮಾರಕಗಳ ಪಟ್ಟಿಯನ್ನು ಮಾಡಿದ್ದೇವೆ ಮತ್ತು ಅನೇಕ ಸ್ಮಾರಕಗಳು ಮತ್ತು ಪಾರಂಪರಿಕ ರಚನೆಗಳನ್ನು ಹೊಂದಿರುವ ಹಿರೇಕೌಂಶಿಯ ಲೋಕಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರವನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಹಾವೇರಿಯ ಜಿಲ್ಲಾ ಪಂಚಾಯತ್ ಸಿಇಒ ಅಕ್ಷಯ ಶ್ರೀಧರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..