AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನವರು ಅಧಿಕಾರದಲ್ಲಿ ಇಲ್ಲದಿದ್ರೆ ಎಲ್ಲವನ್ನೂ ಟೀಕೆ ಮಾಡ್ತಾರೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದರೆ ಮಾತ್ರ ಸಮಾಧಾನ. ಇಲ್ಲದಿದ್ದರೆ ಎಲ್ಲವನ್ನೂ ಟೀಕೆ ಮಾಡುತ್ತಾರೆ. ಶತಕೋಟಿ ಡೋಸ್ ಲಸಿಕೆ ವಿತರಣೆಗೂ ಟೀಕೆ ಮಾಡ್ತಾರೆ. ಇವರು ಟೀಕೆ ಮಾಡದೆ ಯಾವುದನ್ನೂ ಬಿಡಲ್ಲ ಎಂದು ಸಿಎಂ ಹೇಳಿದ್ದಾರೆ

ಕಾಂಗ್ರೆಸ್​ನವರು ಅಧಿಕಾರದಲ್ಲಿ ಇಲ್ಲದಿದ್ರೆ ಎಲ್ಲವನ್ನೂ ಟೀಕೆ ಮಾಡ್ತಾರೆ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 22, 2021 | 3:10 PM

Share

ಹಾವೇರಿ: ನರೇಂದ್ರ ಮೋದಿ ಸರ್ಕಾರದ ಯೋಜನೆ ಎಲ್ಲ ಮನೆಗಳಿಗೆ ತಲುಪಿದೆ. ಯೋಜನೆ ಪಡೆಯದ ಒಂದು ಮನೆ ತೋರಿಸಿ ನೋಡೋಣ ಎಂದು ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿಯಲ್ಲಿ ಯಡಿಯೂರಪ್ಪ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಶತಕೋಟಿ ಡೋಸ್ ಲಸಿಕೆ ನೀಡಿಕೆಗೆ ವಿಶ್ವವೇ ಹೊಗಳ್ತಿದೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ. ಹೀಗೆ ಟೀಕೆ ಮಾಡಿದರೆ ಜನರು ಒಪ್ಪುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್‌ನವರು ಹಣಬಲ, ಜಾತಿಬಲದಿಂದ ಚುನಾವಣೆ ಗೆಲ್ಲುವುದು ಆರಂಭ ಮಾಡಿದರು. ನರೇಂದ್ರ ಮೋದಿ ಬಂದ ಬಳಿಕ ಕಾಂಗ್ರೆಸ್ ಧೂಳೀಪಟವಾಗಿದೆ. ಕಾಂಗ್ರೆಸ್‌ನವರು ಈಗ ನಾಯಕನನ್ನು ಹುಡುಕಾಡುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾದ 1 ಗಂಟೆಯೊಳಗೆ ಕಾಂಗ್ರೆಸ್​ನವರು ಜಾಗ ಖಾಲಿ ಮಾಡ್ತಾರೆ ಎಂದು ಚುನಾವಣಾ ಪ್ರಚಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇಲ್ಲದಿದ್ರೆ ಎಲ್ಲವನ್ನೂ ಟೀಕೆ ಮಾಡ್ತಾರೆ: ಸಿಎಂ ಬೊಮ್ಮಾಯಿ ಕಾಂಗ್ರೆಸ್ ಗೆದ್ರೆ ಜನಬೆಂಬಲ, ನಾವು ಗೆದ್ರೆ ಹಣಬಲವಾ? ನಮಗೆ ಜನಬೆಂಬಲ ಇಲ್ವಾ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನೆ ಕೇಳಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ. ಹಾನಗಲ್ ಕ್ಷೇತ್ರದ ಮತದಾರರೇ ಉತ್ತರ ನೀಡುತ್ತಾರೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸ್ತಾರೆ ಎಂದು ಬಮ್ಮನಹಳ್ಳಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಎಲ್ಲರೂ ಕಿಟ್ ಕೊಟ್ಟಿದ್ದಾರೆ. ಸಣ್ಣಪುಟ್ಟ ಸಂಘ ಸಂಸ್ಥೆಗಳೂ ಕಿಟ್‌ಗಳನ್ನು ಕೊಟ್ಟಿವೆ. ಕಾಂಗ್ರೆಸ್‌ನವರು ಒಬ್ಬರೇ ಕಿಟ್‌ಗಳನ್ನು ವಿತರಣೆ ಮಾಡಿಲ್ಲ. ಅದನ್ನೇ ಈಗ ಕಾಂಗ್ರೆಸ್​ನವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ಲೇವಡಿ ಮಾಡಿದ್ದಾರೆ. ಇಂತಹವರು ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದರೆ ಮಾತ್ರ ಸಮಾಧಾನ. ಇಲ್ಲದಿದ್ದರೆ ಎಲ್ಲವನ್ನೂ ಟೀಕೆ ಮಾಡುತ್ತಾರೆ. ಶತಕೋಟಿ ಡೋಸ್ ಲಸಿಕೆ ವಿತರಣೆಗೂ ಟೀಕೆ ಮಾಡ್ತಾರೆ. ಇವರು ಟೀಕೆ ಮಾಡದೆ ಯಾವುದನ್ನೂ ಬಿಡಲ್ಲ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಇದನ್ನೂ ಓದಿ: ಯಾವುದಾದರೂ ವ್ಯಾಪಕ ರೋಗಕ್ಕೆ ಲಸಿಕಾಕರಣವೇ ಮದ್ದು ಅನ್ನೋದು 100 ವರ್ಷಗಳ ಹಿಂದೆ ಸಾಬೀತಾಗಿದೆ -ಸಿಎಂ ಬಸವರಾಜ ಬೊಮ್ಮಾಯಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?