AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಬೊಮ್ಮಾಯಿ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ: ಮುನಿಶ್ರೀ 108 ಪುಣ್ಯಸಾಗರ

ಜನರು ಬೊಮ್ಮಾಯಿಗೆ ಆಶೀರ್ವಾದ ಮಾಡುತ್ತಾರೆ. ಅವರು ಮತ್ತೆ ಸಿಎಂ ಆಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಹೇಳಿದರು.

ಬಸವರಾಜ ಬೊಮ್ಮಾಯಿ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ: ಮುನಿಶ್ರೀ 108 ಪುಣ್ಯಸಾಗರ
ಸಿಎಂ ಬಸವರಾಜ ಬೊಮ್ಮಾಯಿImage Credit source: abplive.com
ಗಂಗಾಧರ​ ಬ. ಸಾಬೋಜಿ
|

Updated on:Mar 12, 2023 | 10:18 PM

Share

ಹಾವೇರಿ: ಬಸವರಾಜ ಬೊಮ್ಮಾಯಿ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ. ಇವರಂತಹ ಸಿಎಂ ಅನ್ನು ರಾಜ್ಯದಲ್ಲಿ ನೋಡಿರಲಿಲ್ಲ. ಜನರು ಬೊಮ್ಮಾಯಿಗೆ ಆಶೀರ್ವಾದ ಮಾಡುತ್ತಾರೆ. ಅವರು ಮತ್ತೆ ಸಿಎಂ ಆಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು (Munishree 108 Punyasagar) ಹೇಳಿದರು. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದ ಜೈನಮಂದಿರ ಪ್ರತಿಷ್ಠಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಬಸವರಾಜ ಬೋಮ್ಮಾಯಿ ಮಹಾವೀರ ಭಗವಾನರ ಭಕ್ತರು. ಅದಕ್ಕಾಗಿ ಇಂದು ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಈ ಹಿಂದೆ ಕೆಜೆಪಿ ಬಿಜೆಪಿ ಆದಾಗ ಏನು ಮಾಡಲಿ ಅಂತಾ ನನ್ನ ಬಳಿ ಬಂದು ಕೇಳಿದ್ದರು. ಈಗ ಇದಿಯಾ ಹಂಗೆ ಇದ್ದಬಿಡು ಬೆರೆ ಕಡೆ ಹೋಗಬೇಡ ಅಂದಿದ್ದೆ. ಅವರು ಬಿಜೆಪಿಯಲ್ಲೆ ಮುಂದುವರೆದಿದ್ದಕ್ಕೆ ಇಂದು ರಾಜ್ಯದ ಸಿಎಂ ಆಗಿದ್ದಾರೆ ಎಂದು ಹೇಳಿದರು.

ನಮ್ಮ ಸಮಾಜಕ್ಕೆ ಯಾತ್ರಿ ನಿವಾಸಕ್ಕಾಗಿ ನಾವು ಯಾವತ್ತೂ ಮನವಿ ಮಾಡಿರಲಿಲ್ಲ. ಆದರೆ ನಮ್ಮ ಸಮಾಜದ ಮೇಲಿನ ಅಭಿಮಾನದಿಂದ ಯಾತ್ರಿ ನಿವಾಸ ಮಂಜೂರು ಮಾಡಿದರು. ಜೈನ ಧರ್ಮವನ್ನು ಆಚರಣೆ ಮಾಡುವ ಪ್ರತಿಯೊಬ್ಬರು ಜೈನ ಧರ್ಮಿಯರು. ಜೈನ ಧರ್ಮದಲ್ಲಿ ಹುಟ್ಟಿದವರು ಮಾತ್ರ ಜೈನ ಧರ್ಮದವರಲ್ಲ ಎಂದರು.

ಇದನ್ನೂ ಓದಿ: LPG ದರ ಏರಿಕೆ; ಕಟೀಲ್ ಭಾಷಣದ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ಕಾರ್ಯಕರ್ತೆ

ಜೈನ ಧರ್ಮ ಆಚರಣೆ ಮಾಡುವುದು ಬಹಳ ಕಷ್ಟ: ಸಿಎಂ ಬಸವರಾಜ ಬೊಮ್ಮಾಯಿ  

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ತ್ಯಾಗದ ಆಧಾರದ ಮೇಲೆ ಹುಟ್ಟಿರುವ ಧರ್ಮವೇ ಜೈನ ಧರ್ಮ. ಇದನ್ನು ಆಚರಣೆ ಮಾಡುವುದು ಬಹಳ ಕಷ್ಟ. ಬಸವಣ್ಣ ಹೇಳಿದಂತೆ ಸಕಲ ಜೀವರಾಶಿಗೆ ಒಳಿತು ಬಯಸುವುದು ಜೈನ ಧರ್ಮ. ಯಾವುದೇ ಕಾಯಕ ಮಾಡಿದರೂ ಧರ್ಮ ನಿಷ್ಠೆಯಿಂದ ಮಾಡುತ್ತಾರೆ. ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗೆ ಜೈನ ಧರ್ಮ ಪಸರಿಸಿದೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಬಸದಿಗಳನ್ನು ಅಭಿವೃದ್ಧಿ ಮಾಡಿದ್ದೇನೆ. ಜೈನ ಸಮಾಜಕ್ಕಾಗಿ ಮಾಡಿದ ಕೆಲಸಗಳು ನನಗೆ ಬಹಳ ಇಷ್ಟವಾಗಿದೆ ಎಂದರು.

ಇದನ್ನೂ ಓದಿ: B Sriramulu: ಗಣಿಧಣಿ ಜನಾರ್ದನ ರೆಡ್ಡಿ ಕೈಜಾರಿದ ಮೀನು ಯಾರು? ಲೇಟೆಸ್ಟ್​ ಆಗಿ ರೆಡ್ಡಿ ಹೇಳಿದ ಆ ಮೀನಿನ ಕತೆಯೇನು?

ಪ್ರತ್ಯೇಕ ನಿಗಮ ಸ್ಥಾಪನೆಗೆ ಮನವಿ

ಜೈನ ತೀರ್ಥಂಕರರು ಇಡೀ ವಿಶ್ವಕ್ಕೆ ಆಧ್ಯಾತ್ಮದ ಸಾಧನೆ ಸಮರ್ಪಿಸಿದರು. ಪರಮಪೂಜ್ಯರು ನುಡಿಯುವ ಪ್ರತಿಯೊಂದು ಮಾತು ಸತ್ಯ ಆಗುತ್ತದೆ. ಪೂಜ್ಯರು ಸದಾಕಾಲ ನನಗೆ ಆಶೀರ್ವಾದ ಮಾಡುತ್ತಿದ್ದಾರೆ. ಮಹಾವೀರರು ಚಿಕ್ಕವಯಸ್ಸಿನಲ್ಲೇ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ ಎಂದು ಹೇಳಿದರು. ಈ ವೇಳೆ ಜೈನ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆಗೆ ಸಿಎಂ ಬೊಮ್ಮಾಯಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 pm, Sun, 12 March 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್