Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಸ್ಟೇಷನ್​ನಲ್ಲೇ ಬರ್ತಡೇ ಆಚರಣೆ; ಬಂಕಾಪುರ ಪಿಎಸ್ಐ ಅಮಾನತು

ಅವರು ಆಗಸ್ಟ್ 10,2021ರಂದು ಬಂಕಾಪುರ ಠಾಣೆಯಲ್ಲೇ ಸ್ಥಳೀಯರು, ಯುವಕರ ಜತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬ ಆಚರಣೆ ಫೋಟೋ, ವಿಡಿಯೋ ವೈರಲ್ ಆಗಿತ್ತು.

ಪೊಲೀಸ್ ಸ್ಟೇಷನ್​ನಲ್ಲೇ ಬರ್ತಡೇ ಆಚರಣೆ; ಬಂಕಾಪುರ ಪಿಎಸ್ಐ ಅಮಾನತು
ವೈರಲ್ ಆಗಿದ್ದ ಚಿತ್ರಗಳು
Follow us
TV9 Web
| Updated By: guruganesh bhat

Updated on:Aug 12, 2021 | 2:53 PM

ಹಾವೇರಿ: ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ, ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಇತ್ತೀಚಿಗಷ್ಟೇ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ (Praveen Sood) ಹೊರಡಿಸಿದ್ದ ಆದೇಶ ಉಲ್ಲಂಘಿಸಿದ್ದ ಪಿಎಸ್ಐ ಒಬ್ಬರನ್ನು  ಅಮಾನತುಗೊಳಿಸಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆಯ ಪಿಎಸ್ಐ ಸಂತೋಷ ಪಾಟೀಲ ಅವರೇ ಅಮಾನತಾದವರು. ಅವರು ಆಗಸ್ಟ್ 10,2021ರಂದು ಬಂಕಾಪುರ ಠಾಣೆಯಲ್ಲೇ ಸ್ಥಳೀಯರು, ಯುವಕರ ಜತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬ ಆಚರಣೆ ಫೋಟೋ, ವಿಡಿಯೋ ವೈರಲ್ ಆಗಿತ್ತು. ಪಿಎಸ್ಐ ಸಂತೋಷ ಪಾಟೀಲ ಸಸ್ಪೆಂಡ್ ಬಗ್ಗೆ ಎಸ್ಪಿ ಹನುಮಂತರಾಯ ಅಧಿಕೃತ ಮಾಹಿತಿ ನೀಡಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: 

ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

ನಮ್ಮ ಜವಾಬ್ದಾರಿ ಕೇವಲ ಡ್ರಗ್ ಪೆಡ್ಲರ್​ಗಳ ಬಂಧನವಲ್ಲ, ಮಾದಕ ವಸ್ತು ಜಾಲ ನಿರ್ಮೂಲನೆ ಮಾಡಲು ನಾವು ಸಿದ್ಧ; ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

(Birthday celebrations at the police station Bankapur PSI suspended)

Published On - 2:49 pm, Thu, 12 August 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು