AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ಯಾಸೀರ್ ಪಠಾಣ್​ಗೆ ಶಾಕ್ ಕೊಟ್ಟ ಬಿಜೆಪಿ

ತೀವ್ರ ಕುತೂಹಲ ಮೂಡಿಸಿರುವ ಶೀಗ್ಗಾಂವಿ ವಿಧಾನಸಭಾ ಉಪಚುನಾವಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ನಾಳೆ(ನವೆಂಬರ್ 13) ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಆದ್ರೆ, ಮತದಾನ ಆರಂಭಕ್ಕೂ ಮುನ್ನ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್​ಗೆ ಬಿಜೆಪಿ ಬಿಗ್ ಶಾಕ್ ಕೊಟ್ಟಿದೆ.

ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ಯಾಸೀರ್ ಪಠಾಣ್​ಗೆ ಶಾಕ್ ಕೊಟ್ಟ ಬಿಜೆಪಿ
ಯಾಸೀರ್ ಖಾನ್ ಪಠಾಣ್ ವಿರುದ್ದ ಬಿಜೆಪಿ ದೂರು
TV9 Web
| Edited By: |

Updated on: Nov 12, 2024 | 9:26 PM

Share

ಹಾವೇರಿ, (ನವೆಂಬರ್ 12): ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾಳೆ(ನವೆಂಬರ್ 13) ಉಪಚುನಾವಣೆ ನಡೆಯಲಿದೆ. ಆದರೆ ಮತದಾನಕ್ಕೂ ಮುನ್ನವೇ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಹೌದು….ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್​ ಪ್ರಕರಣ ಇದೆ. ಆದ್ರೆ, ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ ಅವರು ಇ – ಮೇಲ್ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.

ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿ ಶೀಟರ್ ಸ್ಟೇಟಸ್ ಇದೆ ಎಂದು ಹಾವೇರಿ ಎಸ್ ಪಿ ಹೇಳಿಕೆ ನೀಡಿದ್ದಾರೆ. ಆದ್ರೆ, ಪಠಾಣ್ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಕಳೆದ ಚುನಾವಣೆ ವೇಳೆ ಅವರ ಮೇಲೆ ಹಲವು ಕೇಸ್ ಇದ್ದವು. ಆದರೆ ಆಶ್ಚರ್ಯ ಅಂದರೆ ಉಪ ಚುನಾವಣೆಗೆ ಸಲ್ಲಿಸಿರುವ ಅಪಡವಿಟ್ ನಲ್ಲಿ ಕೇಸ್ ಗಳು ಇಲ್ಲ ಎಂದಿದ್ದಾರೆ. ಹೀಗಾಗಿ ಈ ಬಗ್ಗೆ ವಿಸ್ತೃತ ತನಿಖೆ ಆಗಲಿ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ

ಯಾಸೀರ್ ಖಾನ್ ಪಠಾಣ್ 2023 ರ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಅಫಡವಿಟ್, ಈ ಬಾರಿ ಶಿಗ್ಗಾವಿ ಉಪಚುನಾವಣೆಗೆ ಕೈ ಅಭ್ಯರ್ಥಿಯಾಗಿ ಪಠಾಣ್​ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದ ಅಫಿಡೆವಿಟ್ ಹಾಗೂ ಹಾವೇರಿ ಎಸ್ ಪಿ ಅಂಶುಕುಮಾರ್ ಸುದ್ದಿಗೋಷ್ಟಿಯಲ್ಲಿ ಪಠಾಣ್ ಮೇಲೆ ರೌಡಿ ಶೀಟರ್ ಇನ್ನೂ ಇದೆ ಎಂಬ ಹೇಳಿಕೆಯ ವಿಡಿಯೋ ಕ್ಲಿಪ್ಪಿಂಗ್ಸ್ ನೊಂದಿಗೆ ದೂರು ನೀಡಿದ್ದಾರೆ.

ಗೊಂದಲ ಮೂಡಿಸಿದ ಎಸ್ಪಿ ಹೇಳಿಕೆ

ಇನ್ನು ಪಠಾಣ್ ವಿರುದ್ಧ ರೌಡಿಶೀಟ್ ಕೇಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದರು. ಬಳಿಕ ಹಾವೇರಿ ಎಸ್ಪಿ ಅಂಶುಕುಮಾರ್ ಅವರು ಪಠಾಣ್ ಮೇಲೆ ರೌಡಿ ಶೀಟರ್  ಎನ್ನುವ ಹೇಳಿಕೆ ನೀಡಿದ್ದರು. ಇದಾದ ಬಳಿಕ ಕ್ಷೇತ್ರದಲ್ಲಿ ರೌಡಿಶೀಟ್ ಪ್ರಕರಣ ಭಾರೀ ಸದ್ದು ಮಾಡಲಾರಂಭಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಬಳಿಕ ಅದೇನಾಯ್ತೋ ಏನೋ ಏಕಾಏಕಿ ಅದೇ ಹಾವೇರಿ ಎಸ್ಪಿ, ಪಠಾಣ್ ವಿರುದ್ಧ ಯಾವುದೇ ರೌಡಿಶೀಟ್ ಪ್ರಕರಣ ಇಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಹೀಗಾಗಿ ಎಸ್ಪಿ ಅವರ ಎರಡು ಹೇಳಿಕೆಗಳು ಭಾರೀ ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ