AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ […]

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on: Dec 02, 2019 | 12:10 PM

Share

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಡಿಕೆಶಿ ಓರ್ವ ಮಹತ್ವಾಕಾಂಕ್ಷಿ ರಾಜಕಾರಣಿ, ವೈಯಕ್ತಿಕವಾಗಿ ಅವರ ಬಗ್ಗೆ ಗೌರವವಿದೆ. ಇದೀಗ ಡಿಕೆಶಿ ಜೆಡಿಎಸ್ ಸಹಾಯ ಪಡೆಯಲು ನಿರ್ಧರಿಸಿದ್ದಾರೆ. ಆ ಮೂಲಕ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದರು.